ಬ್ರೇಕಿಂಗ್ ನ್ಯೂಸ್
04-05-21 12:46 pm Mangalore Correspondent ಕರಾವಳಿ
ಮಂಗಳೂರು, ಮೇ 4 : ನಗರದ ಮೀನುಗಾರಿಕೆ ಬಂದರು ದಕ್ಕೆಯಲ್ಲಿ ಸಾರ್ವಜನಿಕರು ನೇರವಾಗಿ ಮೀನು ಖರೀದಿ ಮಾಡಲು ಬರುತ್ತಿದ್ದರು. ಜನ ಸೇರುವುದರಿಂದ ಸೋಂಕು ಹರಡುತ್ತೆ ಎಂಬ ಭೀತಿಯಲ್ಲಿ ಬಂದರಿನಲ್ಲಿ ಸಾರ್ವಜನಿಕರು ಮೀನು ಖರೀದಿ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಆದೇಶ ಮಾಡಿದ್ದಾರೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶಾಸಕರು ಹಾಗೂ ಮೀನುಗಾರಿಕೆ ಇಲಾಖೆಯ ಅಧಿಕಾರಿಗಳ ಜೊತೆ ಹಳೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಪಾಲನೆ ಮಾಡುವ ಕುರಿತು ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಸಾರ್ವಜನಿಕರು ಮೀನುಗಾರಿಕೆ ಬಂದರಿನಲ್ಲಿ ಕೋವಿಡ್ ಮಾರ್ಗಸೂಚಿ ಗಾಳಿಗೆ ತೂರಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಮೀನು ಖರೀದಿಸುತ್ತಿದ್ದು ಜನಜಂಗುಳಿ ಏರ್ಪಡುತ್ತಿದ್ದು , ಇದರಿಂದ ಸೋಂಕು ಹರಡುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಬಂದರಿನಲ್ಲಿ ಮೀನು ಖರೀದಿ ಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ. ನಿಯಮ ಉಲ್ಲಂಘನೆ ಮಾಡಿದಲ್ಲಿ ಅಂತವರ ವಿರುದ್ಧ ದಂಡ ವಸೂಲಿ ಮಾಡುವುದರೊಂದಿಗೆ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ಸಾರ್ವಜನಿಕರು ಮೀನುಗಳನ್ನು ಸ್ಥಳೀಯ ವ್ಯಾಪ್ತಿಯ ಮೀನು ಮಾರುಕಟ್ಟೆಗಳಲ್ಲಿ ಖರೀದಿಸಬಹುದು. ಅಲ್ಲದೆ, ಸ್ಥಳೀಯ ಮಾರುಕಟ್ಟೆಗಳಲ್ಲಿಯೇ ಕಟ್ಟಿಂಗ್ ಮಾಡುವುದು ಮತ್ತು ಶುಚಿಗೊಳಿಸುವುದನ್ನೂ ಮಾಡಬಹುದು. ಮಂಗಳೂರು ಮೀನುಗಾರಿಕೆ ಬಂದರಿನ ಒಳಗೆ ಹೊರ ರಾಜ್ಯದಿಂದ ಬರುವ ಮೀನುಗಳ ಹೋಲ್ ಸೇಲ್ ಮಾರುಕಟ್ಟೆಯಲ್ಲಿ ಚಿಲ್ಲರೆ ವ್ಯಾಪಾರ ಮಾಡುವಂತಿಲ್ಲ. ಸಾರ್ವಜನಿಕರು ಕೂಡ ಬಂದರಿನಲ್ಲಿ ಅನವಶ್ಯಕ ಓಡಾಡುವುದನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
Covid lockdown effect Entry of people into Bunder Port is prohibited orders Mangalore DC Dr Rajendra Kumar after a meeting held with officals.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm