ಬ್ರೇಕಿಂಗ್ ನ್ಯೂಸ್
04-05-21 05:13 pm Mangalore Correspondent ಕರಾವಳಿ
ಮಂಗಳೂರು, ಮೇ 4 : ಕೊರೊನಾ ಸೋಂಕಿನಿಂದ ಮೃತಪಟ್ಟ ಶವಗಳಿಗೆ ಅಂತ್ಯಸಂಸ್ಕಾರ ನಡೆಸಲು ಸ್ವತಃ ರಕ್ತಸಂಬಂಧಿಗಳೇ ಹಿಂಜರಿಯುತ್ತಿದ್ದರೆ, ಇಲ್ಲೊಬ್ಬರು ಕಾರ್ಪೊರೇಟರ್ ಜನಸೇವೆಯೇ ಜನಾರ್ದನ ಸೇವೆ ಎನ್ನುತ್ತಾ ಕೋವಿಡ್ ಸಂದಿಗ್ಧ ಸ್ಥಿತಿಯಲ್ಲಿ ವಾರಸುದಾರರಿಲ್ಲದ, ಸಂಬಂಧಿಕರು ತ್ಯಜಿಸಿದ ಅನಾಥ ಶವಗಳಿಗೆ ಅಂತ್ಯಕ್ರಿಯೆ ನೆರವೇರಿಸುತ್ತಿದ್ದಾರೆ.

ಮಂಗಳೂರು ಮಹಾನಗರ ಪಾಲಿಕೆಯ ದೇರೆಬೈಲ್ ವಾರ್ಡಿನ ಕಾರ್ಪೊರೇಟರ್ ಗಣೇಶ್ ಕುಲಾಲ್, ಎರಡು ವಾರಗಳಿಂದ ತಮ್ಮ ವಿಭಿನ್ನ ಕಾರ್ಯದಿಂದ ಗಮನ ಸೆಳೆದಿದ್ದಾರೆ. ಕಳೆದ ಎರಡು ವಾರಗಳಲ್ಲಿ ವಾರಸುದಾರರಿಲ್ಲದ 12 ಮೃತದೇಹಗಳಿಗೆ ಸ್ವತಃ ಸಂಸ್ಕಾರ ನೆರವೇರಿಸಿದ್ದಾರೆ.

12 ಶವಗಳ ಪೈಕಿ 9 ಕೊರೊನಾ ಸೋಂಕಿನಿಂದ ಮೃತಪಟ್ಟದ್ದಾಗಿದ್ದು ಉಳಿದ ಮೂರು ಮಂದಿ ಇತರೇ ಕಾಯಿಲೆಯಿಂದ ಮೃತಪಟ್ಟವರು. ಇದರಲ್ಲಿ ಕೇರಳ ಹಾಗೂ ಮಡಿಕೇರಿ ಮೂಲದ ವಾರೀಸುದಾರರಿಲ್ಲದ ಶವಗಳೂ ಇದ್ದವು. ಕುಟುಂಬಸ್ಥರು ನಿರಾಕರಿಸಿದ ಎರಡು ಮೃತದೇಹಗಳಿಗೆ ಗಣೇಶ ಕುಲಾಲ್ ಅಂತ್ಯಸಂಸ್ಕಾರ ನೆರವೇರಿಸಿದ್ದಾರೆ. ವಿಶೇಷ ಅಂದ್ರೆ ಒಂಬತ್ತು ಶವಗಳು ಮಂಗಳೂರು ತಾಲೂಕಿನದ್ದೇ ಆಗಿದ್ದು ಸಂಬಂಧಿಕರಿದ್ದರೂ ಅಂತ್ಯಕ್ರಿಯೆ ಸಾಧ್ಯವಾಗದೆ ಗಣೇಶ ಕುಲಾಲರೇ ಸ್ವತಃ ಖರ್ಚಿನಲ್ಲಿ ಸಂಸ್ಕಾರ ನೆರವೇರಿಸಿದ್ದಾರೆ. ಐವರು ಮಹಿಳೆಯರಾಗಿದ್ದು, ಏಳು ಮಂದಿ ಪುರುಷರು. ಎಲ್ಲ ಶವಗಳನ್ನೂ ನಂದಿಗುಡ್ಡೆ ಹಾಗೂ ಬೋಳೂರು ಚಿತಾಗಾರದಲ್ಲಿ ವಿಧಿವತ್ತಾಗಿ ಭಸ್ಮ ಮಾಡಿದ್ದಾರೆ.

ಗಣೇಶ ಕುಲಾಲ್ ಸಾಮಾಜಿಕವಾಗಿಯೂ ಕೆಲಸ ಮಾಡುತ್ತಿದ್ದಾರೆ. ಅಗತ್ಯ ಇದ್ದವರಿಗೆ ಆ್ಯಂಬುಲೆನ್ಸ್ ವ್ಯವಸ್ಥೆ ಜೊತೆಗೆ ಚಿತಾಗಾರದಲ್ಲಿ ಅಂತ್ಯಸಂಸ್ಕಾರಕ್ಕೆ ಉಚಿತ ವ್ಯವಸ್ಥೆಯನ್ನೂ ನೆರವೇರಿಸಿದ್ದಾರೆ. ಕೊರೊನಾ ಸೋಂಕು ಸಮಾಜದಲ್ಲಿ ಭೀತಿ ಮೂಡಿಸಿರುವಾಗ, ಆಸ್ಪತ್ರೆಯಲ್ಲಿ ಶವಗಳನ್ನು ಬಿಟ್ಟು ಸ್ವಂತ ಸಂಬಂಧಿಗಳೇ ದೂರ ಹೋಗುತ್ತಿರುವಾಗ ಒಬ್ಬ ಜನಪ್ರತಿನಿಧಿಯಾಗಿ ಗಣೇಶ್ ಕುಲಾಲ್ ಉತ್ತಮ ಕಾರ್ಯ ಮಾಡುತ್ತಿದ್ದು ತಮ್ಮ ಕೆಲಸದಿಂದಲೇ ಗಮನ ಸೆಳೆದಿದ್ದಾರೆ.
Mangalore MCC Derebail Corporater Ganesh Kulal is giving dignified burial to unclaimed Covid-19 victims in the city. The Corporater has gained huge appreciation for his humanitarian work.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 11:38 am
HK News Staffer
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm