ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.

ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.

ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.

ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.

ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 02:31 pm
HK News Staffer
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm
ಸಹೋದ್ಯೋಗಿ ಮೇಲೆ ಆಸಿಡ್ ದಾಳಿ ; ಕೇರಳ ಮೂಲದ ವ್ಯಕ್...
01-05-26 07:18 pm