ಬ್ರೇಕಿಂಗ್ ನ್ಯೂಸ್
05-05-21 02:25 pm Mangalore Correspondent ಕರಾವಳಿ
ಮಂಗಳೂರು, ಮೇ 5: ದೇಶದಲ್ಲಿ ಆಮ್ಲಜನಕ ಕೊರತೆ ಎದುರಾಗಿರುವ ಹಿನ್ನೆಲೆಯಲ್ಲಿ ಬಹರೈನ್ ದೇಶ ಸಹಾಯ ಹಸ್ತ ಚಾಚಿದೆ. 40 ಮೆಟ್ರಿಕ್ ಟನ್ ಆಕ್ಸಿಜನ್ ಹೊತ್ತ ಹಡಗು ಮಂಗಳೂರಿನ ಎನ್ಎಂಪಿಟಿ ಬಂದರು ತಲುಪಿದೆ.

ಭಾರತ ಮತ್ತು ಬಹರೇನ್ ನಡುವಿನ ಒಪ್ಪಂದ ಪ್ರಕಾರ ಸಮುದ್ರ ಸೇತು ಯೋಜನೆಯಡಿ ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಹಡಗು ಆಕ್ಸಿಜನ್ ಟ್ಯಾಂಕರನ್ನು ಹೊತ್ತು ತಂದಿದೆ. 20 ಮೆಟ್ರಿಕ್ ಟನ್ ತೂಕದ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರನ್ನು ಹಡಗಿನಲ್ಲಿ ತರಲಾಗಿದ್ದು ಮಧ್ಯಾಹ್ನ ಸುಮಾರಿಗೆ ಎನ್ಎಂಪಿಟಿ ಬಂದರಿನಲ್ಲಿ ತಂದಿರಿಸಲಾಗಿದೆ.

ಆಕ್ಸಿಜನ್ ಹಡಗು ಬರುವ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಲ್ಲಿ ಇತರೇ ಹಡಗುಗಳನ್ನು ನಿರ್ಬಂಧಿಸಲಾಗಿತ್ತು. ಬಂದರಿನಲ್ಲಿ ಎಲ್ಲ ಶಿಪ್ಪಿಂಗ್ ಕಾರ್ಯಾಚರಣೆ ಸ್ಥಗಿತಗೊಳಿಸಿ ಸರಕು ನಿರ್ವಹಣೆಯ ಕ್ರೇನ್ ಗಳನ್ನು ಆಕ್ಸಿಜನ್ ಟ್ಯಾಂಕರ್ ಇಳಿಸಲು ಬಳಸಿಕೊಳ್ಳಲಾಗಿದೆ.

ಈಗಾಗ್ಲೇ ಭಾರತದಲ್ಲಿ ಆಕ್ಸಿಜನ್ ಕೊರತೆಯಿಂದಾಗಿ ನೂರಾರು ಮಂದಿ ಸಾವನ್ನಪ್ಪುತ್ತಿದ್ದು ಹಲವಾರು ನೆರೆ ರಾಷ್ಟ್ರಗಳು ನೆರವು ನೀಡುತ್ತಿವೆ. ಯುಎಇ, ಸೌದಿ ಅರೇಬಿಯಾ ರಾಷ್ಟ್ರಗಳು ಈಗಾಗ್ಲೇ ನೆರವು ನೀಡಿದ್ದು ಬಹರೈನ್ ಈಗ 40 ಮೆಟ್ರಿಕ್ ಟನ್ ಆಕ್ಸಿಜನ್ ಕಳುಹಿಸಿ ಕೊಟ್ಟಿದೆ.

ಕೇಂದ್ರ ಸರಕಾರದ ಸೂಚನೆಯಂತೆ ಮಂಗಳೂರು ಮೂಲಕ ಲಿಕ್ವಿಡ್ ಆಕ್ಸಿಜನ್ ಬಂದಿದ್ದು ಅದನ್ನು ಯಾವ ಜಿಲ್ಲೆಗೆ ಪೂರೈಸಬೇಕು ಎಂಬ ಬಗ್ಗೆ ರಾಜ್ಯ ಸರಕಾರ ನಿರ್ಧರಿಸಲಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ತಿಳಿಸಿದ್ದಾರೆ.
Navy Deployed Warship I N S Talwar brings 20 metric tonnes of Medical liquid oxygen to Mangalore NMPT Port from Bahrain as a result of skyrocketing covid-19 infections.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm