ಬ್ರೇಕಿಂಗ್ ನ್ಯೂಸ್
06-05-21 05:23 pm Mangalore Correspondent ಕರಾವಳಿ
ಮಂಗಳೂರು, ಮೇ 6 : ಬಹ್ರೇನ್ನಿಂದ ಮಂಗಳೂರಿಗೆ ತರಿಸಿದ 40 ಮೆಟ್ರಿಕ್ ಟನ್ ಆಕ್ಸಿಜನ್ ಸಂಪೂರ್ಣ ಕ್ರೆಡಿಟ್ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲಬೇಕೆಂಬ ಸ್ಥಳೀಯ ಬಿಜೆಪಿ ನಾಯಕರ ವಾದಕ್ಕೆ ಮಾಜಿ ಸಚಿವ ಯು.ಟಿ. ಖಾದರ್ ವ್ಯಂಗ್ಯವಾಡಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿ ಕುಹಕವಾಡಿರುವ ಯು.ಟಿ ಖಾದರ್, ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹ್ರೇನ್ನಿಂದ ಕಳಿಸಿಕೊಟ್ಟ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರಕ್ಕೆ ಚಪ್ಪಾಳೆ ಹೊಡೆಯಬೇಕೋ, ದೀಪ ಹಚ್ಚಬೇಕೋ ತಿಳಿಯುತ್ತಿಲ್ಲ. ಧಿಕ್ಕಾರವಿದೆ ನಿಮ್ಮ ಆಡಳಿತ ವೈಫಲ್ಯಕ್ಕೆ ಅಂತಾ ಆಕ್ಸಿಜನ್ ಟ್ಯಾಂಕ್ ಎದುರು ನಿಂತ ಬಿಜೆಪಿ ನಾಯಕರ ಫೋಟೋ ಹಾಕಿ ವ್ಯಂಗ್ಯವಾಡಿದ್ದಾರೆ.

ನಿನ್ನೆ ಬಹ್ರೇನ್ ಮತ್ತು ಭಾರತ ಸರ್ಕಾರದ ನಡುವಿನ ಸಹಕಾರ ಒಪ್ಪಂದದಂತೆ 30 ಮೆಟ್ರಿಕ್ ಟನ್ನ ಎರಡು ಲಿಕ್ವಿಡ್ ಆಕ್ಸಿಜನ್ ಟ್ಯಾಂಕರ್ಗಳು ನವಮಂಗಳೂರು ಬಂದರಿಗೆ ಬಂದಿತ್ತು. ಭಾರತೀಯ ಕರಾವಳಿ ತಟರಕ್ಷಣಾ ಪಡೆಯ ಐಎನ್ಎಸ್ ತಲ್ವಾರ್ ಆಕ್ಸಿಜನ್ ಟ್ಯಾಂಕರ್ ಗಳನ್ನು ಬಹ್ರೇನ್ನಿಂದ ಹೊತ್ತು ತಂದಿದ್ದು, ಕ್ರೇನ್ ಮೂಲಕ ಟ್ಯಾಂಕರ್ ಗಳನ್ನು ಬಂದರಿನಲ್ಲಿ ಕೆಳಗಿಳಿಸಲಾಗಿತ್ತು.
ನೌಕೆಯಲ್ಲಿ ಕೊವೀಡ್ ಚಿಕಿತ್ಸೆಗೆ ಬಳಸುವ ಇತರ ವೈದ್ಯಕೀಯ ಉಪಕರಣಗಳನ್ನೂ ಕಳಿಸಿಕೊಡಲಾಗಿದ್ದು, ಯುದ್ಧ ನೌಕೆಯನ್ನು ಸ್ವಾಗತ ಮಾಡಲು ದಕ್ಷಿಣ ಕನ್ನಡ ಸಂಸದ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕ ವೇದವ್ಯಾಸ ಕಾಮತ್ ಸೇರಿದಂತೆ ಅಧಿಕಾರಿಗಳು ಜನಪ್ರತಿನಿಧಿಗಳು ಭಾಗವಹಿಸಿದ್ದರು.
Read: ಬಹರೈನ್ ಸಹಾಯ ಹಸ್ತ ; ಮಂಗಳೂರಿಗೆ ಬಂತು 40 ಮೆಟ್ರಿಕ್ ಟನ್ ಆಕ್ಸಿಜನ್ !!
ನಮ್ಮ ರಾಜ್ಯದಲ್ಲಿ ಉತ್ಪಾದನೆಯಾಗುವ ಆಕ್ಸಿಜನ್ ಬಳಸಲು ನಮಗೆ ಅವಕಾಶವಿಲ್ಲ. ದೂರದ ಬಹರೈನ್ ನಿಂದ ಬಂದ ಆಕ್ಸಿಜನ್ ಹಡಗೇರಿ ಖುಷಿಪಡುವ ಬಿಜೆಪಿ ನಾಯಕರ ಆತ್ಮನಿರ್ಭರತೆಗೆ ಚಪ್ಪಾಳೆ ಹೊಡೆಯ ಬೇಕೋ ದೀಪ ಹಚ್ಚ ಬೇಕೋ ತಿಳಿಯುತ್ತಿಲ್ಲ.
— UT Khadér (@utkhader) May 6, 2021
ಧಿಕ್ಕಾರವಿದೆ ನಿಮ್ಮ ಅಸಮರ್ಥತೆಗೆ.@BJP4Karnataka @nalinkateel @KotasBJP @vedavyasbjp pic.twitter.com/A2cwEbyWxI
30-05-26 01:14 pm
HK News Staffer
ಡಿಕೆಶಿ ಪಟ್ಟಾಭಿಷೇಕಕ್ಕೆ ಕ್ಷಣಗಣನೆ ! ವಿಧಾನಸೌಧ ಮೆಟ...
29-05-26 10:41 pm
ಒಬ್ಬರಿಗೆ ಒಂದೇ ಹುದ್ದೆ ; ಕೆಪಿಸಿಸಿ ಅಧ್ಯಕ್ಷ ಹುದ್ದ...
29-05-26 04:30 pm
ಸಿದ್ದರಾಮಯ್ಯ ರಾಜೀನಾಮೆಗೆ ರಾಜ್ಯಪಾಲರಿಂದ ಅಧಿಕೃತ ಮು...
29-05-26 10:29 am
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲು ಸಿದ್ದರಾ...
28-05-26 06:18 pm
29-05-26 06:17 pm
HK News Staffer
ಟಿಎಂಸಿಯಲ್ಲಿ ಬಿರುಕು ; 50 ಶಾಸಕರು, ಸಂಸದರು ಬಿಜೆಪಿ...
27-05-26 09:17 pm
ಕೇರಳ ರಾಜಕಾರಣದಲ್ಲಿ ಭಾರೀ ಸಂಚಲನ..! ಮಾಜಿ ಸಿಎಂ ಪಿಣ...
27-05-26 08:36 pm
ಜೂನ್, ಜುಲೈನಲ್ಲಿ 12 ಪರಿಷತ್ ಸ್ಥಾನಗಳಿಗೆ ಚುನಾವಣೆ...
26-05-26 12:54 pm
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
30-05-26 02:10 pm
HK News Staffer
ಹಿಂದೆ ವೀರೇಂದ್ರ ಪಾಟೀಲ್ ಗೆ ಆದ ಅವಮಾನ ಈಗ ಸಿದ್ದರಾಮ...
28-05-26 02:45 pm
ಡಿಸಿಎಂ ಆಗಬೇಕೆಂಬ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ಹಾ...
28-05-26 02:28 pm
ಕುದುರೆಮುಖ ಅದಿರು ಕಂಪನಿ ಕಾರ್ಮಿಕರ ಬೇಡಿಕೆ ಈಡೇರಿಸಿ...
27-05-26 12:29 pm
ಕಟೀಲು ಶಿಬರೂರಿನಲ್ಲಿ ಮರಳು ದರೋಡೆ ರಾಜಾರೋಷ ; ಇಲ್ಲಿ...
26-05-26 09:02 pm
29-05-26 10:21 pm
HK News Staffer
Expert College Case, Mangalore: ಕೋವಿಡ್ ಲಾಕ್ಡ...
29-05-26 08:30 pm
ಕಾರಿನ ಟೈಯರ್ ಬ್ಲಾಸ್ಟ್ ಆಗಿ ರಸ್ತೆಬದಿ ನಿಂತಿದ್ದ...
29-05-26 03:05 pm
ಬಕ್ರೀದ್ ಹಿನ್ನೆಲೆ, ರಾತ್ರೋರಾತ್ರಿ ಮನೆ ಕೊಟ್ಟಿಗೆಯಲ...
28-05-26 09:44 pm
ಕರ್ತವ್ಯದಲ್ಲಿದ್ದ ಟ್ರಾಫಿಕ್ ಪೊಲೀಸರಿಗೆ ಡಿಕ್ಕಿ ಹೊಡ...
28-05-26 10:43 am