ಬ್ರೇಕಿಂಗ್ ನ್ಯೂಸ್
06-05-21 05:56 pm Mangalore Correspondent ಕರಾವಳಿ
ಮಂಗಳೂರು, ಮೇ 6: ದಿನದಿಂದ ದಿನಕ್ಕೆ ನಗರ ಮತ್ತು ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ಪ್ರಕರಣಗಳು ತೀವ್ರವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಮೇ 7ರಿಂದ (ಶುಕ್ರವಾರ) ಮಂಗಳೂರು ಸೇರಿದಂತೆ ಜಿಲ್ಲೆಯಾದ್ಯಂತ ಟಫ್ ರೂಲ್ಸ್ ಜಾರಿಗೆ ತರಲು ನಿರ್ಧರಿಸಿದೆ.
ದ.ಕ. ಜಿಲ್ಲೆಯ ಗ್ರಾಮೀಣ ಪ್ರದೇಶದಲ್ಲೂ ಕೊರೋನಾ ಪ್ರಕರಣ ಹೆಚ್ಚುತ್ತಿರುವುದರಿಂದ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ. ಜಿಲ್ಲಾ ಮಟ್ಟದ ಅಧಿಕಾರಿಗಳು, ಸಂಸದರು, ಶಾಸಕರ ಜೊತೆ ತುರ್ತು ಸಭೆ ನಡೆಸಿದ್ದಾರೆ.

ಸಭೆಯಲ್ಲಿ ಕೋವಿಡ್ ಸೋಂಕು ಹರಡುವುದನ್ನು ತಪ್ಪಿಸಲು ಕಟ್ಟುನಿಟ್ಟಿನ ಕ್ರಮ ಅನಿವಾರ್ಯ ಎಂಬ ಸಲಹೆಗಳು ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳಿಂದ ಕೇಳಿಬಂದಿದ್ದು ಇದರಂತೆ ಜಿಲ್ಲಾಧಿಕಾರಿಗಳು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ.

ಇದರಂತೆ, ದಿನಸಿ ಖರೀದಿಗೆ ಮತ್ತು ಜನರ ಓಡಾಟದ ವಿಚಾರದಲ್ಲಿ ಕೆಳಗಿನಂತೆ ಕ್ರಮ ಜರುಗಿಸಲಾಗಿದೆ. ಜಿಲ್ಲೆಯಾದ್ಯಂತ ಮೇ 7 ರ ಬೆಳಗ್ಗೆ 6 ರಿಂದ 9 ಗಂಟೆ ವರೆಗೆ ಮಾತ್ರ ಅಗತ್ಯ ವಸ್ತು ಖರೀದಿಗೆ ಅವಕಾಶ ಇರಲಿದೆ. 10 ಗಂಟೆ ಒಳಗೆ ವ್ಯಾಪಾರಸ್ಥರು ಹಾಗೂ ಖರೀದಿದಾರರು ಮನೆ ಸೇರಬೇಕು. 10 ಗಂಟೆಯ ಬಳಿಕ ಜನರು ರಸ್ತೆ ಮೇಲೆ, ವಾಹನಗಳಲ್ಲಿ ಓಡಾಡುವುದು ಕಂಡುಬಂದರೆ ವಾಹನ ಜಪ್ತಿ ಸೇರಿದಂತೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ.

ವೈದ್ಯಕೀಯ ಅಗತ್ಯಕ್ಕೆ ತೆರಳುವವರು ತಮ್ಮ ಮನೆಯ ಹತ್ತಿರದ ಮೆಡಿಕಲ್ ಗಷ್ಟೆ ಹೋಗಬೇಕು. ವಾಹನಗಳಲ್ಲಿ ಬೇರೆ ಕಡೆ ಹೋದ್ರೆ ವಾಹನ ಸೀಝ್ ಮಾಡಲು ಪೊಲೀಸರಿಗೆ ಅವಕಾಶ ನೀಡಲಾಗಿದೆ. ಜನರ ಅನಗತ್ಯ ಓಡಾಟಕ್ಕೆ ಬ್ರೇಕ್ ಹಾಕಲು ಪೊಲೀಸರ ಮೂಲಕ ಲಾಠಿ ಎತ್ತಲು ಅನುಮತಿ ನೀಡಲಾಗಿದೆ.

ಮೇ 15 ಬಳಿಕ ಮದುವೆ, ಗೃಹಪ್ರವೇಶ, ಹುಟ್ಟಿದ ಹಬ್ಬ ಸೇರಿದಂತೆ ಯಾವುದೇ ಕಾರ್ಯಕ್ರಮ ನಡೆಸಲು ಅವಕಾಶ ಇರುವುದಿಲ್ಲ. ಮೇ 15 ರ ಬಳಿಕ ನಿಗದಿಯಾಗಿರುವ ಎಲ್ಲ ರೀತಿಯ ಕಾರ್ಯಕ್ರಮಗಳಿಗೆ ನಿರ್ಬಂಧ ವಿಧಿಸಲು ಜಿಲ್ಲಾಡಳಿತ ನಿರ್ಣಯ ಮಾಡಿದೆ. ಯಾವುದೇ ಕಾರ್ಯಕ್ರಮ ನಡೆಸಲು ಅನುಮತಿ ಪಡೆದಿದ್ದರೂ ಆಯಾ ಭಾಗದ ಅಧಿಕಾರಿಗಳು ಸಂಬಂಧಿತರ ಮನವೊಲಿಸಿ ಅದನ್ನು ಮುಂದಕ್ಕೆ ಹಾಕಿಸುವಂತೆ ಸಭೆಯಲ್ಲಿ ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಪೊಲೀಸ್ ಕಮಿಷನರ್ ಶಶಿಕುಮಾರ್, ಸಂಸದ ನಳಿನ್ ಕುಮಾರ್, ಶಾಸಕರಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ಉಮಾನಾಥ ಕೋಟ್ಯಾನ್, ರಾಜೇಶ್ ನಾಯ್ಕ್, ಮಾಜಿ ಸಚಿವ ಯು.ಟಿ.ಖಾದರ್ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಕೇಳಿಬಂದ ಸಲಹೆಗಳು...
Covid spike in Dakshina Kannada Mangalore DC orders tougher rules to restrict the unnecessary movement of people from May 7th. As per the order, people will be allowed to purchase essential commodities from 6 am to 9 am, rather than till 10 am. People will be allowed to purchase medical supplies from the nearest pharmacies.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm