ವೇಣೂರು ; ಫಲ್ಗುಣಿ ನದಿಗೆ ಈಜಲು ತೆರಳಿದ್ದ ಯುವಕ ನೀರುಪಾಲು

06-05-21 06:37 pm       Mangaluru Correspondent   ಕರಾವಳಿ

ಸ್ನೇಹಿತರ ಜೊತೆಗೆ ನದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವೇಣೂರು ಠಾಣೆ ವ್ಯಾಪ್ತಿಯ ಪಡಂಗಡಿ ಗ್ರಾಮದಲ್ಲಿ ನಡೆದಿದೆ.

ಬೆಳ್ತಂಗಡಿ, ಮೇ 6: ಸ್ನೇಹಿತರ ಜೊತೆಗೆ ನದಿಗೆ ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ವೇಣೂರು ಠಾಣೆ ವ್ಯಾಪ್ತಿಯ ಪಡಂಗಡಿ ಗ್ರಾಮದಲ್ಲಿ ನಡೆದಿದೆ.

ಮೃತ ಯುವಕನನ್ನು ಪಡಂಗಡಿ ಸಮೀಪದ ಕಾರ್ಯಾಣ ನಿವಾಸಿ ದುಗ್ಗಪ್ಪ ಮೂಲ್ಯ ಎಂಬವರ ಪುತ್ರ ನಿಶಾಂತ್ (22) ಎಂದು ಗುರುತಿಸಲಾಗಿದೆ. ಯುವಕ ತನ್ನ ಇತರ 5 ಮಂದಿ ಸ್ನೇಹಿತರೊಂದಿಗೆ ಸೇರಿ ಮನೆ ಸಮೀಪದ ಫಲ್ಗುಣಿ ಹೊಳೆಯಲ್ಲಿ ಈಜಲು ತೆರಳಿದ್ದರು. ಈ ವೇಳೆ ಅವರ ಪೈಕಿ ಓರ್ವ ನೀರಿನಲ್ಲಿ ಮುಳುಗುತ್ತಿದ್ದಾಗ ಆತನ ರಕ್ಷಣೆಗೆ ನಿಶಾಂತ್ ಮುಂದಾಗಿದ್ದು ಗೆಳೆಯನನ್ನು ರಕ್ಷಿಸಿ ತಾನೇ ನೀರಿನಲ್ಲಿ ಮುಳುಗಿದ್ದಾನೆ ಎನ್ನಲಾಗಿದೆ. ಕೂಡಲೇ ನಿಶಾಂತನನ್ನು ಸ್ನೇಹಿತರು ಸೇರಿ ನೀರಿನಿಂದ ಮೇಲಕ್ಕೆತ್ತಿ ದಡಕ್ಕೆ ತಂದಿದ್ದಾರೆ. ಬಳಿಕ ಆಂಬ್ಯುಲೆನ್ಸ್ ಮೂಲಕ ಸ್ಥಳೀಯ ಆಸ್ಪತ್ರೆಗೆ ಕೊಂಡೊಯ್ದಿದ್ದು ಅಷ್ಟರಲ್ಲಿ ನಿಶಾಂತ್ ಮೃತಪಟ್ಟಿದ್ದರು.

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಘಟನೆ ಬಗ್ಗೆ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

In a tragic accident, a 22-year-old youth who ventured into a river to take bath, drowned. The incident took place in the Phalguni river in Padangady of Beltangady taluk here on Thursday, May 6. The deceased is identified as Nishanth, son of Karyana Dugappa, of Padangady village.