ಬ್ರೇಕಿಂಗ್ ನ್ಯೂಸ್
08-05-21 10:16 am Mangalore Correspondent ಕರಾವಳಿ
ಮಂಗಳೂರು, ಮೇ 8: ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವುದರಿಂದ ಮಸೀದಿಗಳ ಒಕ್ಕೂಟ ಕೊರೊನಾ ಸೋಂಕಿತರ ನೆರವಿಗೆ ಧಾವಿಸಿದೆ. ಸೋಂಕಿತರಿಗಾಗಿ ಪ್ರತ್ಯೇಕ ಕೋವಿಡ್ ಕೇರ್ ಸೆಂಟರ್, ಐಸೊಲೇಶನ್ ಸೆಂಟರ್ ತೆರೆಯಲು ಮುಂದಾಗಿದೆ.
ಮಂಗಳೂರಿನ ವಿವಿಧ ಮಸೀದಿಗಳ ಆಡಳಿತ ಮಂಡಳಿಗಳು ಸೇರಿಕೊಂಡು ಒಕ್ಕೂಟ ರಚಿಸಿದ್ದು, ಕೋವಿಡ್ ಸೋಂಕಿತರ ನೆರವಿಗಾಗಿ ಮಸೀದಿ ಆಡಳಿತಕ್ಕೆ ಸೇರಿದ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್ ಆಗಿ ಬದಲಿಸಲು ಮುಂದಾಗಿದೆ. ಮೊದಲಿಗೆ ಅಡ್ಯಾರ್ ನಲ್ಲಿರುವ ಬರಾಕಾ ಇಂಟರ್ನ್ಯಾಶನಲ್ ಸ್ಕೂಲ್ ಅನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ತಯಾರಿ ನಡೆದಿದೆ.

ಸದ್ಯಕ್ಕೆ ಶಾಲೆ, ಕಾಲೇಜು ತೆರೆಯುವುದಿಲ್ಲ ಎಂಬುದು ಖಾತ್ರಿಯಾಗುತ್ತಿದ್ದಂತೆ, ಶಾಲೆಗಳನ್ನೇ ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಲು ಮಸೀದಿ ಕಮಿಟಿಗಳು ನಿರ್ಧರಿಸಿವೆ. ಕೋವಿಡ್ ಪಾಸಿಟಿವ್ ಆಗಿದ್ದವರನ್ನು ಮನೆಯಲ್ಲಿ ಇರಿಸಿಕೊಳ್ಳಲು ಸಾಧ್ಯವಾಗಲ್ಲ ಎಂಬ ಸ್ಥಿತಿಯಲ್ಲಿದ್ದರೆ, ಅವರನ್ನು ಕೋವಿಡ್ ಕೇರ್ ಸೆಂಟರಿನಲ್ಲಿ ಇರಿಸಲಾಗುವುದು. ಅದರ ಜೊತೆಗೆ ಐಸೋಲೇಶನ್ ಸೆಂಟರ್ ನಲ್ಲಿ ವೈದ್ಯಕೀಯ ತಜ್ಞರನ್ನು ಒಳಗೊಂಡು ರೋಗಿಗಳ ಆರೈಕೆ ಮಾಡಲು ನಿರ್ಧರಿಸಲಾಗಿದೆ. ಅದಕ್ಕಾಗಿ ವೈದ್ಯಕೀಯ ಸಂಸ್ಥೆಗಳ ಜೊತೆ ಮಾತುಕತೆ ನಡೆಸಲಾಗಿದೆ ಎಂದು ಮಸೀದಿಗಳ ಒಕ್ಕೂಟದ ಕಮಿಟಿಯ ಸದಸ್ಯ ಮಹಮ್ಮದ್ ಹುಸೇನ್ ತಿಳಿಸಿದ್ದಾರೆ.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ ಸೋಂಕು ಭಾರೀ ವೇಗದಲ್ಲಿ ಹರಡುತ್ತಿದ್ದು, ಈಗ 1500 ಕ್ಕೂ ಹೆಚ್ಚು ಮಂದಿ ಪಾಸಿಟಿವ್ ಬರುತ್ತಿವೆ. ಜಿಲ್ಲಾಡಳಿತದ ಪ್ರಕಾರ, ಒಂದೆರಡು ವಾರಗಳ ನಂತರ ಈ ಸಂಖ್ಯೆ ಎರಡು- ಮೂರು ಸಾವಿರ ಆಗುವ ಸಾಧ್ಯತೆ ಇದೆ. ಅಂತಹ ಸಂದರ್ಭದಲ್ಲಿ ಕೋವಿಡ್ ಚಿಕಿತ್ಸೆಗೆ ನಿಗದಿಯಾಗಿರುವ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಾಧ್ಯವಾಗಲ್ಲ ಎನ್ನುವ ಮಾತು ಕೇಳಿಬರುತ್ತಿದೆ.
ಹೀಗಾಗಿ ಕೋವಿಡ್ ಕೇರ್ ವಿಚಾರದಲ್ಲಿ ಸ್ವಯಂಸೇವಕರಾಗಿ ಕೆಲಸ ಮಾಡುತ್ತಿರುವ ಮುಸ್ಲಿಂ ಸಂಘಟನೆಗಳು ರೋಗಿಗಳ ಆರೈಕೆಗಾಗಿ ಕೇರ್ ಸೆಂಟರ್ ಮಾಡಲು ಮುಂದಾಗಿದ್ದು ಅದನ್ನು ಮಸೀದಿ ಕಮಿಟಿಗಳ ಮೂಲಕ ಜಾರಿಗೆ ತರಲು ಯೋಜನೆ ಹಾಕಿದೆ. ಈ ಕೇಂದ್ರಗಳಲ್ಲಿ ಜಾತಿ, ಧರ್ಮದ ಭೇದ ಇಲ್ಲದೆ, ಎಲ್ಲರಿಗೂ ಮುಕ್ತವಾಗಿ ಸೌಲಭ್ಯ ನೀಡಲಾಗುವುದು. ವಸತಿ, ಆಹಾರ, ವ್ಯವಸ್ಥೆ ಎಲ್ಲವೂ ಉಚಿತವಾಗಿ ಸಿಗಲಿದೆ ಎಂದು ಮತ್ತೊಬ್ಬ ಸದಸ್ಯ ಇಮ್ತಿಯಾಜ್ ಬೋಳಾರ ತಿಳಿಸಿದ್ದಾರೆ.
Barakah school in Adyar to turn as covid center. The Masjid committee had declared many schools and colleges that comes under them will be turned has covid centers due to spike in Covid-19 cases.
08-03-26 10:17 pm
HK News Staffer
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
ಯುಪಿಎಸ್ಸಿ ಪರೀಕ್ಷೆಯಲ್ಲಿ ಒಟ್ಟು 958 ಮಂದಿ ತೇರ್ಗಡೆ...
08-03-26 07:38 pm
ಅಮಾನುಷ ಕೃತ್ಯ ; 90 ವರ್ಷದ ಅಜ್ಜಿಯನ್ನೂ ಬಿಡದ ಕಾಮುಕ...
08-03-26 04:47 pm
ಮಾನಹಾನಿ ಸುದ್ದಿಗಳ ಜಾಲತಾಣ ಲಿಂಕ್ ತೆರವು ಕೋರಿ ಕರ್ನ...
08-03-26 03:41 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm