ಬ್ರೇಕಿಂಗ್ ನ್ಯೂಸ್
09-05-21 01:24 pm Mangaluru Correspondent ಕರಾವಳಿ
ಮಂಗಳೂರು, ಮೇ 9: ನಗರದ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಚಿನ್ನದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ದೂರು ಕೇಳಿಬಂದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಬೊಳ್ಳೂರು ನಿವಾಸಿ ಡೀಕಯ್ಯ ಪೂಜಾರಿ ಎಂಬವರು ತಮ್ಮ ತಾಯಿಯ ಬಂಗಾರದ ಕಿವಿಯೋಲೆ ನಾಪತ್ತೆಯಾಗಿದೆ ಎಂದು ವೀಡಿಯೊ ಚಿತ್ರೀಕರಿಸಿ ಅಳಲು ತೋಡಿಕೊಂಡಿದ್ದಾರೆ.
ಮೇ 5ರಂದು ಮಧ್ಯರಾತ್ರಿ ತಾಯಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಮೃತಪಟ್ಟಿದ್ದಾರೆ. ಆಸ್ಪತ್ರೆಯವರು ಮೃತದೇಹ ಹಸ್ತಾಂತರ ಮಾಡುವ ವೇಳೆ ಕಿವಿಯೋಲೆ ನಾಪತ್ತೆಯಾಗಿದೆ ಎಂದು ಡೀಕಯ್ಯ ಪೂಜಾರಿ ದೂರಿದ್ದಾರೆ.
ಉಸಿರಾಟದ ತೊಂದರೆಯಿಂದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ, ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಹಸ್ತಾಂತರಿಸುವ ಸಂದರ್ಭ ತಾಯಿಯ ಕಿವಿಯೋಲೆ ನಾಪತ್ತೆಯಾಗಿದೆ. ಈ ಬಗ್ಗೆ ಅಲ್ಲಿ ವಿಚಾರಿಸಿದಾಗ ಮೃತದೇಹದ ಪೋಟೊ ತೆಗೆಯಬೇಕಿತ್ತು ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆಯ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ತಾನು ಆಸ್ಪತ್ರೆಯ ಡಿಎಂಒ ಡಾ.ಸದಾಶಿವ ಅವರಿಗೆ ಲಿಖಿತ ದೂರು ನೀಡಿದ್ದು, ಈವರೆಗೆ ಯಾವ ಉತ್ತರವೂ ನಮಗೆ ದೊರಕಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ನಾವು ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ದ ಸಂದರ್ಭದಲ್ಲೂ ಸಾಕಷ್ಟು ಹೊತ್ತು ನಮ್ಮನ್ನು ಹೊರಗೆ ಕಾಯುವಂತೆ ಮಾಡಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರೂ ಬೇಗ ದಾಖಲು ಮಾಡಿಲ್ಲ. ಇದು ನಮ್ಮ ಸಮಸ್ಯೆ ಮಾತ್ರವಲ್ಲ, ಇಲ್ಲಿ ಬರುವ ಎಲ್ಲರ ಸಮಸ್ಯೆ ಎಂದು ದೂರಿದ್ದಾರೆ.
A man filed a complaint to the office of district surgeon and medical superintendent of Wenlock hospital urging the authorities to return his mother's missing earrings as gold has been missing from her body. A case has been registered at the Pandeshwar Police station.
09-03-26 09:51 pm
HK News Staffer
ಕೊಡಗು ; ಹತ್ತು ದಿನ ಅಂತರದಲ್ಲಿ ಕಾಡಾನೆಗೆ ಎರಡನೇ ಬಲ...
09-03-26 08:07 pm
ಕ್ಷುಲ್ಲಕ ಕಾರಣಕ್ಕೆ ಪತಿ- ಪತ್ನಿ ಜಗಳ, ಎರಡು ವರ್ಷದ...
09-03-26 05:44 pm
ಅವಕಾಶ ಕೊಟ್ಟರೆ ಮತ್ತೆರಡು ವರ್ಷ ಬಜೆಟ್ ಮಂಡಿಸುತ್ತೇನ...
09-03-26 04:17 pm
ಬಳ್ಳಾರಿ ವಸತಿ ಶಾಲೆಯಲ್ಲೇ ವಿದ್ಯಾರ್ಥಿಗಳ ಸಂಘರ್ಷ ;...
09-03-26 03:24 pm
09-03-26 01:44 pm
HK News Staffer
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
09-03-26 09:52 pm
HK News Staffer
ಗಲ್ಫ್ ಯುದ್ಧ ; ಮಂಗಳೂರಿನಿಂದ ದುಬೈ, ಜೆದ್ದಾ ಸೇರಿ ಹ...
09-03-26 07:29 pm
ತಲಪಾಡಿಯ ಯುವಕ ಬೆಂಗಳೂರಿನಲ್ಲಿ ಕಟ್ಟಡದಿಂದ ಬಿದ್ದು ಸ...
09-03-26 02:53 pm
ಬೇರೆ ರಾಷ್ಟ್ರಗಳಿಂದ ಬಂದವರಿಗೆ ಮಸೀದಿ, ಚರ್ಚ್ ಕಟ್ಟಲ...
09-03-26 12:50 pm
CM Siddaramaiah, Kambala Bantwal: ರಮಾನಾಥ ರೈ ಐ...
07-03-26 11:31 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm