ಬ್ರೇಕಿಂಗ್ ನ್ಯೂಸ್
09-05-21 01:24 pm Mangaluru Correspondent ಕರಾವಳಿ
ಮಂಗಳೂರು, ಮೇ 9: ನಗರದ ಜಿಲ್ಲಾ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಕೋವಿಡ್ ಸೋಂಕಿನಿಂದ ಮೃತಪಟ್ಟ ಮಹಿಳೆಯ ಚಿನ್ನದ ಕಿವಿಯೋಲೆ ನಾಪತ್ತೆಯಾಗಿರುವ ಬಗ್ಗೆ ದೂರು ಕೇಳಿಬಂದಿದೆ.
ಬಂಟ್ವಾಳ ತಾಲೂಕಿನ ಸರಪಾಡಿ ಗ್ರಾಮದ ಬೊಳ್ಳೂರು ನಿವಾಸಿ ಡೀಕಯ್ಯ ಪೂಜಾರಿ ಎಂಬವರು ತಮ್ಮ ತಾಯಿಯ ಬಂಗಾರದ ಕಿವಿಯೋಲೆ ನಾಪತ್ತೆಯಾಗಿದೆ ಎಂದು ವೀಡಿಯೊ ಚಿತ್ರೀಕರಿಸಿ ಅಳಲು ತೋಡಿಕೊಂಡಿದ್ದಾರೆ.
ಮೇ 5ರಂದು ಮಧ್ಯರಾತ್ರಿ ತಾಯಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೇ 7ರಂದು ಮೃತಪಟ್ಟಿದ್ದಾರೆ. ಆಸ್ಪತ್ರೆಯವರು ಮೃತದೇಹ ಹಸ್ತಾಂತರ ಮಾಡುವ ವೇಳೆ ಕಿವಿಯೋಲೆ ನಾಪತ್ತೆಯಾಗಿದೆ ಎಂದು ಡೀಕಯ್ಯ ಪೂಜಾರಿ ದೂರಿದ್ದಾರೆ.
ಉಸಿರಾಟದ ತೊಂದರೆಯಿಂದ ವೆನ್ಲಾಕ್ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ತಾಯಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಆದರೆ, ಅವರ ಮೃತದೇಹವನ್ನು ಆಸ್ಪತ್ರೆಯಲ್ಲಿ ಹಸ್ತಾಂತರಿಸುವ ಸಂದರ್ಭ ತಾಯಿಯ ಕಿವಿಯೋಲೆ ನಾಪತ್ತೆಯಾಗಿದೆ. ಈ ಬಗ್ಗೆ ಅಲ್ಲಿ ವಿಚಾರಿಸಿದಾಗ ಮೃತದೇಹದ ಪೋಟೊ ತೆಗೆಯಬೇಕಿತ್ತು ಎಂದು ಆಸ್ಪತ್ರೆ ಸಿಬ್ಬಂದಿ ಉಡಾಫೆಯ ಮಾತುಗಳನ್ನಾಡಿದ್ದಾರೆ.
ಈ ಬಗ್ಗೆ ತಾನು ಆಸ್ಪತ್ರೆಯ ಡಿಎಂಒ ಡಾ.ಸದಾಶಿವ ಅವರಿಗೆ ಲಿಖಿತ ದೂರು ನೀಡಿದ್ದು, ಈವರೆಗೆ ಯಾವ ಉತ್ತರವೂ ನಮಗೆ ದೊರಕಿಲ್ಲ ಎಂದು ದೂರಿದ್ದಾರೆ. ಅಲ್ಲದೆ, ನಾವು ತಾಯಿಯನ್ನು ಆಸ್ಪತ್ರೆಗೆ ಕೊಂಡೊಯ್ದ ಸಂದರ್ಭದಲ್ಲೂ ಸಾಕಷ್ಟು ಹೊತ್ತು ನಮ್ಮನ್ನು ಹೊರಗೆ ಕಾಯುವಂತೆ ಮಾಡಿದ್ದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರೂ ಬೇಗ ದಾಖಲು ಮಾಡಿಲ್ಲ. ಇದು ನಮ್ಮ ಸಮಸ್ಯೆ ಮಾತ್ರವಲ್ಲ, ಇಲ್ಲಿ ಬರುವ ಎಲ್ಲರ ಸಮಸ್ಯೆ ಎಂದು ದೂರಿದ್ದಾರೆ.
A man filed a complaint to the office of district surgeon and medical superintendent of Wenlock hospital urging the authorities to return his mother's missing earrings as gold has been missing from her body. A case has been registered at the Pandeshwar Police station.
17-12-25 10:30 pm
HK News Desk
ಯಶವಂತಪುರ - ಕಾರವಾರ ಗೋಮಟೇಶ್ವರ ಎಕ್ಸ್ ಪ್ರೆಸ್ ರೈಲು...
17-12-25 12:45 pm
ಶೃಂಗೇರಿ ; ಬಿಕಾಂ ಓದುತ್ತಿದ್ದ ವಿದ್ಯಾರ್ಥಿನಿ ಹಠಾತ್...
17-12-25 12:42 pm
ಶಿವಮೊಗ್ಗ, ಧಾರವಾಡ ಸೇರಿ ಹಲವೆಡೆ ಲೋಕಾಯುಕ್ತ ದಾಳಿ ;...
16-12-25 03:08 pm
ಮಂಗಳೂರು ಬೆನ್ನಲ್ಲೇ ತುಮಕೂರು ಜಿಲ್ಲಾಧಿಕಾರಿ ಕಚೇರಿಗ...
16-12-25 12:57 pm
17-12-25 10:27 pm
HK News Desk
ಆಸ್ಟ್ರೇಲಿಯಾ ಬೋಂಡಿ ಬೀಚ್ ದಾಳಿ ; ಹೈದ್ರಾಬಾದ್ ಮೂಲದ...
17-12-25 01:38 pm
ಯುಕೆಯ ಮಿಡ್ಲಾಂಡ್ಸ್ ನಲ್ಲಿ ಕನ್ನಡ ರಾಜ್ಯೋತ್ಸವ ; ಬರ...
16-12-25 06:33 pm
ಭಟ್ಕಳ ತಹಸೀಲ್ದಾರ್ ಕಚೇರಿಗೂ ಸ್ಫೋಟದ ಬೆದರಿಕೆ ; ತಮಿ...
16-12-25 01:56 pm
ಪಾಕಿಸ್ತಾನದ ಎರಡು ವಿವಿಗಳಲ್ಲಿ ಸಂಸ್ಕೃತ ಕಲಿಯಲು ಕೋರ...
15-12-25 08:12 pm
17-12-25 08:54 pm
Mangalore Correspondent
New year 2026, Mangalore Rules: ಹೊಸ ವರ್ಷಾಚರಣೆ...
17-12-25 08:19 pm
Udupi, Baby death: ಉಡುಪಿ ; ತಾಯಿ ಕೈಯಿಂದ ಜಾರಿ ಬ...
17-12-25 05:23 pm
Mangalore Jail, Fight, Ccb Police: ಮಂಗಳೂರು ಜೈ...
17-12-25 05:05 pm
Mangalore Landslide, Death: ಗುಡ್ಡ ಕುಸಿದು ಕಾರ್...
16-12-25 10:25 pm
17-12-25 11:14 am
Bangalore Correspondent
ಕದ್ರಿಯಲ್ಲಿ ಬೈಕ್ ಕದ್ದು ಭಟ್ಕಳದಲ್ಲಿ ಮಹಿಳೆಯ ಸರ ಕಸ...
16-12-25 10:35 pm
Mangalore Crime, Robbery, Mukka: 'ಬಂಗಾರ್ ಒಲ್ಪ...
15-12-25 10:26 pm
Udupi Murder, Brahmavar, Update: ಕುಡಿದ ಮತ್ತಿನ...
15-12-25 05:37 pm
Brahmavar Murder, Udupi Crime: ಎಣ್ಣೆ ಪಾರ್ಟಿಯಲ...
15-12-25 12:19 pm