ಬ್ರೇಕಿಂಗ್ ನ್ಯೂಸ್
09-05-21 07:00 pm Mangaluru Correspondent ಕರಾವಳಿ
ಮಂಗಳೂರು, ಮೇ 9: ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಬೈಕಂಪಾಡಿಯ ಮಲಬಾರ್, ಲಕ್ಷ್ಮಿ ಹಾಗೂ ಕಾರ್ನಾಡ್ ಆಕ್ಸಿಜನ್ ರೀಫಿಲ್ಲಿಂಗ್ ಘಟಕಗಳಲ್ಲಿ ಆಕ್ಸಿಜನ್ ಉತ್ಪಾದನೆ ಹಾಗೂ ಸಿಲಿಂಡರ್ ಗಳಿಗೆ ರೀಫಿಲ್ಲಿಂಗ್ ಮಾಡುವ ಪ್ರಕ್ರಿಯೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭದಲ್ಲಿ ಶಾಸಕ ಭರತ್ ಶೆಟ್ಟಿ ,ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಕ ಆಧಿಕಾರಿ ಡಾ. ಕುಮಾರ್, ಸಹಾಯಕ ಔಷಧಿ ನಿಯಂತ್ರಕರುಗಳಾದ ರಮಾಕಾಂತ್ ಕುಂಟೆ, ಶಂಕರ್ ನಾಯ್ಕ್ ಹಾಗೂ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.


ಆಕ್ಸಿಜನ್ ಫಿಲ್ಲಿಂಗ್ ಘಟಕಗಳಿಗೆ ಯಾವ ಜಿಲ್ಲೆಯ ಆಕ್ಸಿಜನ್ ಉತ್ಪಾದನಾ ಘಟಕಗಳಿಂದ ಎಷ್ಟು ಪ್ರಮಾಣದ ಆಕ್ಸಿಜನ್ ಬರುತ್ತದೆ ಹಾಗೂ ಸ್ಥಳೀಯವಾಗಿ ಆಕ್ಸಿಜನ್ ಉತ್ಪಾದಿಸುವ ಬಗ್ಗೆ ಅವುಗಳನ್ನು ರೀಫಿಲ್ಲಿಂಗ್ ಮಾಡಿ ಯಾವ ಯಾವ ತಾಲೂಕಿನ ಆಸ್ಪತ್ರೆಗಳಿಗೆ ಕಳಿಸುತ್ತಿರುವುದಾಗಿ ಮಾಹಿತಿ ಪಡೆದರು.
ಜಿಲ್ಲೆಯಲ್ಲಿನ ಮೂರು ಆಕ್ಸಿಜನ್ ಉತ್ಪಾದನೆ ಹಾಗೂ ರೀಫಿಲ್ಲಿಂಗ್ ಘಟಕಗಳಲ್ಲಿನ ಆಕ್ಸಿಜನ್ ಅನ್ನು ಆಸ್ಪತ್ರೆಗಳಲ್ಲಿನ ರೋಗಿಗಳ ಚಿಕಿತ್ಸೆಗೆ ಬೇಡಿಕೆಗನುಗುಣವಾಗಿ ಪೂರೈಕೆ ಆಗಬೇಕೆಂದು ಸೂಚಿಸಿದರು.
ಜಿಲ್ಲೆಯಲ್ಲಿ ಆಮ್ಲಜನಕದ ಕೊರತೆ ಯಾವುದೇ ಆಸ್ಪತ್ರೆಯಲ್ಲಿ ಆಗದಂತೆ ಮತ್ತು ಅವುಗಳ ಸಾಗಾಣಿಕೆಯಲ್ಲಿ ವ್ಯತ್ಯಯ ಉಂಟಾಗದಂತೆ ಅಗತ್ಯಕ್ಕನುಸಾರವಾಗಿ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ತಿಳಿಸಿದರು.
ಕೈಗಾರಿಕೆಗೆ ಬಳಸಲು ನೀಡುವ ಪ್ರಮಾಣ ಕಡಿತಗೊಳಿಸಿ ವೈದ್ಯಕೀಯ ಕ್ಷೇತ್ರಕ್ಕೆ ಆದ್ಯತೆಯ ಮೇಲೆ ಆಕ್ಸಿಜನ್ ಒದಗಿಸಬೇಕು ಎಂದು ಸೂಚಿಸಿದರಲ್ಲದೆ ಸ್ಥಳೀಯವಾಗಿ ಉತ್ಪಾದಿಸುತ್ತಿರುವ ಪ್ರಮಾಣವನ್ನು ಹೆಚ್ಚಿಸಲು ಮುಂದಾಗುವಂತೆ ಆಕ್ಸಿಜನ್ ತಯಾರಕ ಘಟಕಗಳಿಗೆ ಸೂಚನೆ ನೀಡಿದರು.

ಕರೋನಾ ತೀವ್ರಗೊಂಡ ರೋಗಿಗಳಿಗೆ ಮಾತ್ರ ಆಕ್ಸಿಜನ್ ಪೂರೈಸಲಾಗುತ್ತದೆ. ಯಾರಿಗೆ ನೀಡಬೇಕು, ಯಾರಿಗೆ ಅವಶ್ಯಕತೆ ಇದೆ ಎನ್ನುವುದು ಜಿಲ್ಲಾಡಳಿತ ತೀರ್ಮಾನಿಸುತ್ತದೆ. ತೀವ್ರ ಸಂಕಷ್ಟದಲ್ಲಿರುವ ರೋಗಿಗಳಿಗೆ ಆಕ್ಸಿಜನ್ ಹಾಗೂ ವೆಂಟಿಲೇಟರ್ ಹಾಸಿಗೆ ನೀಡಲಾಗುವುದು ಎಂದರು.
ಡ್ಯೂರೋ ಸಿಲಿಂಡರ್ ಗಳಲ್ಲಿ ಹೆಚ್ಚಿನ ಆಕ್ಸಿಜನ್ ಶೇಖರಣೆ ಮಾಡಬಹುದಾಗಿದ್ದು ಅವುಗಳನ್ನು ತಾಲೂಕು ಆಸ್ಪತ್ರೆಗಳ ವೆಂಟಿಲೇಟರ್ ಗಳ ಬಳಕೆಗೆ ನೀಡಬಹುದಾಗಿದೆ. ಅವುಗಳು ಎರಡು ದಿನ ಬಳಕೆಗೆ ಬರುತ್ತವೆ. ಅವುಗಳನ್ನು ವಿದೇಶದಿಂದ ತರಿಸಲು ಯೋಜನೆ ರೂಪಿಸಲಾಗಿದೆ. ಆಕ್ಸಿಜನ್ ಘಟಕಗಳ ಮೇಲುಸ್ತುವಾರಿಗೆ ಅಧಿಕಾರಿಗಳನ್ನು ದಿನದ 24 ಗಂಟೆಗೆ ಪಾಳಿಯ ಮೇಲೆ ನೇಮಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಸಚಿವರಿಗೆ ತಿಳಿಸಿದರು.
Minister Kota Srinivas Poojary, Mla Bharath Shetty and DC Dr Rajendra Kumar visited three oxygen refilling plant units loacted in Mangalore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm