ಬ್ರೇಕಿಂಗ್ ನ್ಯೂಸ್
10-05-21 12:51 pm Udupi Correspondent ಕರಾವಳಿ
Photo credits : newsnext
ಉಡುಪಿ, ಮೇ 10 : ಶಿರೂರು ಮಠದ ಶ್ರೀ ಲಕ್ಷ್ಮೀವರ ತೀರ್ಥ ಶ್ರೀಪಾದರ ನಿಧನದಿಂದ ತೆರವಾಗಿರುವ ಉಡುಪಿ ಅಷ್ಟಮಠಗಳಲ್ಲಿ ಒಂದಾದ ಶಿರೂರು ಮಠದ ಉತ್ತರಾಧಿಕಾರಿ ಆಗಿರುವ ಉಡುಪಿಯ ಅನಿರುದ್ಧ ಸರಳತ್ತಾಯ (16) ಸನ್ಯಾಸ ಸ್ವೀಕಾರ ಹಾಗೂ ಶಿರೂರು ಮಠದ ಯತಿಯಾಗಿ ಪಟ್ಟಾಭಿಷೇಕ ಕಾರ್ಯಕ್ರಮ ಮೇ 11ರಿಂದ 14ರ ವರೆಗೆ ಹಿರಿಯಡ್ಕ ಸಮೀಪದ ಶಿರೂರು ಮೂಲಮಠದಲ್ಲಿ ನಡೆಯಲಿದೆ.
ಶಿರೂರು ಮಠಕ್ಕೆ ಉತ್ತರಾಧಿಕಾರಿಯನ್ನು ನೇಮಿಸುವ ಜವಾಬ್ದಾರಿಯನ್ನು ಹೊಂದಿರುವ ಶಿರೂರು ಮಠದ ದ್ವಂದ್ವ ಮಠವಾದ ಸೋದೆ ವಾದಿರಾಜ ಮಠದ ಶ್ರೀ ವಿಶ್ವವಲ್ಲಭ ತೀರ್ಥ ಶ್ರೀಪಾದರು ಈ ನಿರ್ಧಾರವನ್ನು ತೆಗೆದು ಕೊಂಡಿದ್ದಾರೆ ಎಂದು ಶಿರೂರು ಮಠದ ವ್ಯವಸ್ಥಾಪಕರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.


ಈ ಮೊದಲು ಅನಿರುದ್ಧ ಸರಳತ್ತಾಯರ ಸನ್ಯಾಸ ಸ್ವೀಕಾರ ಹಾಗೂ ಪಟ್ಟಾಭಿಷೇಕ ಕಾರ್ಯಕ್ರಮವನ್ನು ಮೇ 11ರಿಂದ 14ರ ವರೆಗೆ ಶಿರಸಿಯ ಸೋಮದಾ ಕ್ಷೇತ್ರದಲ್ಲಿ ಆಯೋಜಿಸಲು ಸೋದೆ ಶ್ರೀಗಳು ನಿರ್ಧರಿಸಿದ್ದರು. ಆದರೆ ಸರಕಾರದ ಕಠಿಣ ಮಾರ್ಗಸೂಚಿ ಹಿನ್ನೆಲೆಯಲ್ಲಿ ಇದೀಗ ಕಾರ್ಯಕ್ರಮವನ್ನು ಶಿರೂರು ಮಲ ಮಠದಲ್ಲೇ ನಡೆಸಲು ತೀರ್ಮಾನಿಸಲಾಗಿದೆ.

ಸನ್ಯಾಸಾಶ್ರಮ ಸ್ವೀಕರಿಸುವ ವಟುವು ಈಗಾಗಲೇ ತನ್ನ ಪೋಷಕರೊಂದಿಗೆ ಕೆಲವು ಪುಣ್ಯ ಕ್ಷೇತ್ರಗಳಿಗೆ ಭೇಟಿ ನೀಡಿ ದೇವರ ದರ್ಶನ ಪಡೆದು ಉಡುಪಿಗೆ ಹಿಂದಿರುಗಿದ್ದು, ಉಡುಪಿಯ ಅಷ್ಟಮಠಗಳ ಯತಿಗಳ ಆಶೀರ್ವಾದದೊಂದಿಗೆ ಫಲಮಂತ್ರಾಕ್ಷತೆಯನ್ನು ಸ್ವೀಕರಿಸಿದ್ದಾರೆ. ಪೂರ್ವ ನಿಗದಿಯಾದಂತೆ ಮೇ 11ರಿಂದ 14ರ ವರೆಗೆ ಶಿರೂರು ಮೂಲಮಠದಲ್ಲೇ ಸಂಪ್ರದಾಯದಂತೆ ಎಲ್ಲಾ ಧಾರ್ಮಿಕ ವಿಧಿಗಳು ನೆರವೇರಲಿವೆ ಎಂದು ಶಿರೂರು ಮಠದ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.
Udupi Shiroor Mutt Successor Chosen, 16-Year-Old Aniruddha To Be Anointed
08-03-26 10:17 pm
HK News Staffer
ಟ್ರಂಪ್ ತಾಳಕ್ಕೆ ತಕ್ಕಂತೆ ಕುಣಿಯುವ ಗುಲಾಮ ಮೋದಿ ; ಇ...
08-03-26 07:51 pm
ಯುಪಿಎಸ್ಸಿ ಪರೀಕ್ಷೆಯಲ್ಲಿ ಒಟ್ಟು 958 ಮಂದಿ ತೇರ್ಗಡೆ...
08-03-26 07:38 pm
ಅಮಾನುಷ ಕೃತ್ಯ ; 90 ವರ್ಷದ ಅಜ್ಜಿಯನ್ನೂ ಬಿಡದ ಕಾಮುಕ...
08-03-26 04:47 pm
ಮಾನಹಾನಿ ಸುದ್ದಿಗಳ ಜಾಲತಾಣ ಲಿಂಕ್ ತೆರವು ಕೋರಿ ಕರ್ನ...
08-03-26 03:41 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm