ಬ್ರೇಕಿಂಗ್ ನ್ಯೂಸ್
11-05-21 10:35 am Mangalore Correspondent ಕರಾವಳಿ
ಪುತ್ತೂರು, ಮೇ 11: ಮಂಗಳೂರಿಗೆ ಕೆಲಸ ಅರಸಿಕೊಂಡು ಬಂದು ಲಾಕ್ಡೌನ್ ಕಾರಣ ಸಿಕ್ಕಿಬಿದ್ದು ಒದ್ದಾಡಿದ ಮಡಿಕೇರಿ ಸಮೀಪದ ರಾಣಿಪೇಟೆ ನಿವಾಸಿಯೊಬ್ಬರನ್ನು ಪುತ್ತೂರಿನ ಪೊಲೀಸ್ ಸಿಬಂದಿ ರಕ್ಷಿಸಿದ್ದಾರೆ.
ಐದು ದಿನಗಳ ಹಿಂದೆ ಮಂಗಳೂರಿಗೆ ಕೆಲಸಕ್ಕೆಂದು ಬಂದಿದ್ದು ಲಾಕ್ಡೌನ್ ಪರಿಣಾಮ ಸಿಕ್ಕಿಬಿದ್ದಿದ್ದರು. ಅವರಿಗೆ ಮರಳಿ ಹೋಗಲು ಬಸ್ ಸೌಲಭ್ಯ ಇಲ್ಲದೆ ಹಿಂತಿರುಗುವುದು ಕಷ್ಟವಾಗಿತ್ತು. ಅನಂತರ ಮಡಿಕೇರಿಗೆ ನಡೆದುಕೊಂಡೇ ತೆರಳುವುದಾಗಿ ಹೇಳಿ ಹೊರಟಿದ್ದು ಎರಡು ದಿನಗಳಿಂದ ಊಟ ಸಿಗದೆ ಪರದಾಡಿದ್ದಾರೆ. ಹಸಿವಿನಿಂದ ಬಳಲಿದ ವ್ಯಕ್ತಿ ಪುತ್ತೂರು ಗ್ರಾಮಾಂತರ ಠಾಣೆ ವ್ಯಾಪ್ತಿಯ ಸಂಟ್ಯಾರು ಎಂಬಲ್ಲಿ ಹಕ್ಕಿಗಳು ತಿಂದು ಬಿದ್ದಿರುವ ಹಣ್ಣುಗಳನ್ನು ಹೆಕ್ಕಿ ತಿನ್ನತೊಡಗಿದ್ದರು. ವಿಷಯ ತಿಳಿದ ಪತ್ರಕರ್ತರೊಬ್ಬರು ಪೊಲೀಸರಿಗೆ ಸುದ್ದಿ ಮುಟ್ಟಿಸಿದ್ದಾರೆ.
ಪುತ್ತೂರು ಚೆಕ್ ಪಾಯಿಂಟ್ ನಲ್ಲಿ ಕರ್ತವ್ಯದಲ್ಲಿದ್ದ ಹೆಡ್ ಕಾನ್ಸ್ ಟೇಬಲ್ ದಯಾನಂದ ಹಾಗೂ ಕಿರಣ್ ಎಂಬ ಇಬ್ಬರು ಸಿಬಂದಿ ಕೂಡಲೇ ಸ್ಪಂದಿಸಿದ್ದು ಹಸಿವಿನಿಂದ ಕಂಗಾಲಾಗಿದ್ದ ಆತನಿಗೆ ತಾವು ಮನೆಯಿಂದ ಮಧ್ಯಾಹ್ನದ ಊಟಕ್ಕೆ ತಂದಿದ್ದ ಬುತ್ತಿಯನ್ನು ನೀಡಿದ್ದಾರೆ. ನಂತರ ಇನ್ನೊಂದು ವಾಹನದಲ್ಲಿ ವ್ಯಕ್ತಿಯನ್ನು ಮಡಿಕೇರಿಗೆ ಕಳುಹಿಸಿದ್ದಾರೆ.
ಲಾಕ್ಡೌನ್ ಸಂದರ್ಭದಲ್ಲಿ ತಮ್ಮ ಕರ್ತವ್ಯದ ಜೊತೆ ಮಾನವೀಯತೆ ಮೆರೆದ ಸಿಬಂದಿ ಆದರ್ಶನೀಯ ಎಂದು ಜಿಲ್ಲಾ ಎಸ್ಪಿ ಋಷಿಕುಮಾರ್ ಸೋನವಾನೆ ಶ್ಲಾಘಿಸಿದ್ದಾರೆ.
A youth from Ranipet in Madikeri had come to Mangaluru on May 1 in search of employment. Although he stayed in the city for five days, he neither found a job nor could go back to Madikeri due to the clampdown on transport facilities due to the Covid-induced lockdown.
16-05-25 10:04 am
Bangalore Correspondent
Davanagere Sp, Constable Accident: ದಾವಣಗೆರೆಯಲ...
15-05-25 10:16 pm
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
16-05-25 04:45 pm
HK News Desk
ಮುಸ್ಲಿಂ ವ್ಯಕ್ತಿಗೆ ಕುರಾನ್ ಪ್ರಕಾರ ನಾಲ್ಕು ಮದುವೆ...
15-05-25 09:09 pm
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
16-05-25 10:27 pm
Mangalore Correspondent
Siddaramaiah, Cm Mangalore, BJP black flag: ಸ...
16-05-25 06:05 pm
Mangalore, Dinesh Gundurao: ಇಡಿ ದೇಶದಲ್ಲಿ ಅತೀ...
16-05-25 02:47 pm
Mangalore Cargo Ship, Lakshadweep: ಲಕ್ಷದ್ವೀಪಕ...
16-05-25 10:06 am
Capt Brijesh Chowta, Mangalore Mp, CM Siddara...
15-05-25 08:04 pm
16-05-25 11:06 pm
Mangalore Correspondent
Belagavi Protest, Quran Burnt, Police, Crime:...
16-05-25 09:20 pm
Davanagere Crime, Gold Robbery: ಆನ್ಲೈನ್ ಗೇಮಿಂ...
15-05-25 11:06 pm
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm