ಬ್ರೇಕಿಂಗ್ ನ್ಯೂಸ್
11-05-21 03:51 pm Mangalore Correspondent ಕರಾವಳಿ
ಬೆಳ್ತಂಗಡಿ, ಮೇ 11 : ತಾಲೂಕಿನ ಸುದೆಮುಗೆರು ಪರಿಸರದಲ್ಲಿ ಆರು ಮನೆಗಳ ಹತ್ತು ಮಂದಿಗೆ ಕೋವಿಡ್ ಸೋಂಕು ಕಾಣಿಸಿತ್ತು. ಹೀಗಾಗಿ ಗ್ರಾಮದ 78 ಮನೆಗಳಿಗೂ ಸೀಲ್ ಡೌನ್ ನಿರ್ಬಂಧ ಹೇರಿದ್ದಲ್ಲದೆ, ಇಡೀ ಗ್ರಾಮಕ್ಕೆ ಭೀತಿ ಮೂಡಿಸಿತ್ತು. ಈ ಬಗ್ಗೆ ಆಕ್ರೋಶ ಹೊರಬೀಳುತ್ತಿದ್ದಂತೆ, ಸೀಲ್ ಡೌನ್ ನಿಯಮವನ್ನು ತಾಲೂಕು ಆಡಳಿತ ಸರಳಗೊಳಿಸಿದೆ. ರಸ್ತೆಗೆ ಹಾಕಿದ್ದ ತಡೆ ಬೇಲಿಯನ್ನು ತೆರವುಗೊಳಿಸಿದ್ದು, ಕೋವಿಡ್ ಪಾಸಿಟಿವ್ ಪ್ರಕರಣ ಕಾಣಿಸಿಕೊಂಡ ಆರು ಮನೆಗಳನ್ನು ಮಾತ್ರ ಸೀಲ್ ಡೌನ್ ಮಾಡಿದೆ.

ಸುದೆಮುಗೇರು ಗ್ರಾಮದಲ್ಲಿ ಆರು ಮನೆಗಳ ಹತ್ತು ಮಂದಿಗೆ ಕೊರೋನಾ ಪಾಸಿಟಿವ್ ಬಂದಿತ್ತು. ಈ ಹಿನ್ನೆಲೆಯಲ್ಲಿ ಪಟ್ಟಣ ಪಂಚಾಯತ್ ಹಾಗೂ ಆರೋಗ್ಯ ಇಲಾಖೆ ಇಲ್ಲಿನ ಮುಖ್ಯ ರಸ್ತೆಗೆ ಬೇಲಿ ಹಾಕಿ 78 ಮನೆಗಳನ್ನೂ ಸೀಲ್ ಡೌನ್ ಮಾಡಿ ನಿವಾಸಿಗಳಿಗೆ ದಿಗ್ಬಂಧನ ವಿಧಿಸಿತ್ತು. ಕೂಲಿ ಕಾರ್ಮಿಕರೇ ಹೆಚ್ವಿರುವ ಈ ಪ್ರದೇಶದಲ್ಲಿ ಜನರ ಕಷ್ಟದ ಬಗ್ಗೆ ತಿಳಿದ ಮಾಜಿ ಶಾಸಕ ಕೆ. ವಸಂತ ಬಂಗೇರ ಹಾಗು ಸಿಪಿಐಎಂ ಮುಖಂಡರು ಸೋಮವಾರ ಅಲ್ಲಿನ ಮನೆಯವರಿಗೆ ಅಗತ್ಯ ಸಾಮಗ್ರಿಗಳ ಕಿಟ್ ನೀಡಲು ಹೋದ ವೇಳೆ ಜನರು ತಮ್ಮ ಸಂಕಷ್ಟವನ್ನು ಹೇಳಿಕೊಂಡಿದ್ದರು. ಬಂಗೇರ ಅವರು ತಾಲೂಕು ಆಡಳಿತ ಹಾಗೂ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡು ಕೂಡಲೇ ಅನಗತ್ಯವಾಗಿ ಹಾಕಲಾಗಿರುವ ಬೇಲಿಗಳನ್ಬು ತೆರವು ಮಾಡುವಂತೆ ಸೂಚಿಸಿದ್ದರು.

ಸೀಲ್ಡೌನ್ ಮಾಡಿ ಮೂರು ದಿನಗಳ ಬಳಿಕ ಬಂಗೇರರು ಕರೆ ಮಾಡಿದ ಮೇಲೆ ಪಟ್ಟಣ ಪಂಚಾಯತಿನ ಅಧಿಕಾರಿಗಳು ಸುದೆಮುಗೇರುವಿಗೆ ಬಂದಿದ್ದರು. ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತಿನ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಜನರು ಕೇವಲ ಆರು ಮನೆಗಳಲ್ಲಿ ರೋಗಿಗಳಿದ್ದು ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಹೀಗಿದ್ದರೂ ಇಡೀ ಊರನ್ನು ದಿಗ್ಬಂಧನದಲ್ಲಿ ಇರಿಸಿರುವ ಬಗ್ಗೆ ತರಾಟೆಗೆ ತೆಗೆದುಕೊಂಡರು. ಇದಾದ ಬಳಿಕ ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಸ್ಥಳಕ್ಕೆ ಭೇಟಿ ನೀಡಿ ಜನರ ಸಮಸ್ಯೆಗಳನ್ನು ಆಲಿಸಿ ಕೂಡಲೇ ರಸ್ತೆಗೆ ಅಡ್ಡಲಾಗಿ ಹಾಕಿದ್ದ ತಡೆಬೇಲಿಯನ್ನು ತೆರವುಗೊಳಿಸಿದರು.
ರೋಗ ಕಾಣಿಸಿಕೊಂಡ ಆರು ಮನೆಗಳನ್ನು ಸೀಲ್ ಡೌನ್ ಮಾಡಿ ಇನ್ನು ಯಾರಿಗಾದರೂ ರೋಗ ಕಾಣಿಸಿಕೊಂಡರೆ ಆ ಮನೆಗಳನ್ನೂ ಸೀಲ್ಡೌನ್ ಮಾಡುವುದಾಗಿ ತಿಳಿಸಿದ್ದಾರೆ. ಸೀಲ್ಡೌನ್ ಆಗಿರುವ ಮನೆಗಳಿಗೆ ಆಹಾರ ಸಾಮಗ್ರಿಗಳನ್ನು ತಾವೇ ಒದಗಿಸುವುದಾಗಿ ಸ್ಥಳೀಯ ಜನರು ಜವಾಬ್ದಾರಿ ವಹಿಸಿಕೊಂಡಿದ್ದಾರೆ.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am