ಬ್ರೇಕಿಂಗ್ ನ್ಯೂಸ್
            
                        11-05-21 05:20 pm Udupi Correspondent ಕರಾವಳಿ
            ಕುಂದಾಪುರ, ಮೇ 11: ಲಾಕ್ಡೌನ್ ಇರುವುದರಿಂದ ಗ್ರೋಸರಿ ತರುವುದಕ್ಕೂ ವಾಹನ ಬಳಸುವಂತಿಲ್ಲ ಎಂದು ರಾಜ್ಯ ಸರಕಾರ ನಿಯಮ ಹೇರಿರುವುದರಿಂದ ಹೆಚ್ಚಿನ ಕಡೆ ಪೊಲೀಸರು ಲಾಠಿ ಬೀಸಿದ್ದು ಪರ- ವಿರೋಧ ಟೀಕೆಗೂ ಕಾರಣವಾಗಿದೆ. ಇದೇ ವೇಳೆ, ಇಲ್ಲಿನ ಕುಂಭಾಸಿಯ ಯುವಕನೊಬ್ಬ ಪೊಲೀಸರ ಲಾಠಿರುಚಿಯನ್ನು ಅಣಕಿಸುವುದಕ್ಕಾಗಿಯೇ ಹೊಸ ತಂತ್ರಕ್ಕೆ ಮೊರೆಹೋಗಿರುವ ಫೋಟೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕುಂಭಾಸಿಯ ವಿನೇಂದ್ರ ಆಚಾರ್ಯ ಎಂಬವರು ಸೈಕಲ್ ನಲ್ಲಿ ಪೇಟೆಗೆ ಹೊರಟಿದ್ದು ತಲೆಗೆ ಹೆಲ್ಮೆಟ್ ಮತ್ತು ಬೆನ್ನಿಗೆ ತಗಡು ಶೀಟನ್ನು ಕಟ್ಟಿಕೊಂಡಿದ್ದಾರೆ. ಬೆನ್ನಿಗೆ ಪೆಟ್ಟು ಬಿದ್ದರೂ ತಗಡು ಶೀಟ್ ಇದೆಯೆಂಬ ರೀತಿ ಬಿಂಬಿಸಿ, ಸೈಕಲಿನಲ್ಲಿ ಹೊರಟಿರುವ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಲಾಠಿಗೆ ಪ್ರತಿತಂತ್ರ ಎನ್ನುವ ರೀತಿ ಬಿಂಬಿತವಾಗುತ್ತಿದೆ.

ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಿದ್ದು ಆದರೆ ನಡೆದುಕೊಂಡೇ ಮನೆ ಪರಿಸರದ ಅಂಗಡಿಗಳಿಂದ ಖರೀದಿ ನಡೆಸಬೇಕು. ಯಾವುದೇ ಕಾರಣಕ್ಕೂ ವಾಹನಗಳಲ್ಲಿ ದೂರಕ್ಕೆ ಪ್ರಯಾಣ ಮಾಡಬಾರದು. ಅಗತ್ಯ ವಸ್ತು ಖರೀದಿಗೆಂದು ಮಾರುಕಟ್ಟೆ ಇನ್ನಿತರ ಪ್ರದೇಶಕ್ಕೆ ಹೋಗಬಾರದೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಆದರೆ, ಈ ನಿಯಮವನ್ನು ಬಹುತೇಕ ಕಡೆ ಜನರು ಮುರಿಯುತ್ತಿದ್ದಾರೆ. ಪೊಲೀಸರು ಅಡ್ಡಗಟ್ಟಿದರೂ ಒಳದಾರಿಗಳಿಂದ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಈ ವೇಳೆ, ಕೆಲವು ಕಡೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ಘಟನೆ ನಡೆದಿದೆ.
ಪೊಲೀಸರ ಲಾಠಿ ಬೀಸುವ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಯಸ್ಸಾದವರು ತಮ್ಮ ಸ್ಕೂಟರ್ ಬಳಸದೆ ಗ್ರೋಸರಿ ತರುವುದು ಹೇಗೆಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಕೆಲವು ಕಡೆ ವಯಸ್ಸಾದವರು, ಅಸಹಾಯಕರಿಗೆ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದೆ. ಹೀಗಿದ್ದರೂ, ಜನರು ಅಂಗಡಿ ಮುಂದೆ ಸೇರುವುದು, ಮುಗಿ ಬೀಳುವುದು ಕಾಮನ್ ಆಗಿದೆ. ಇಂಥ ಸಂದರ್ಭದಲ್ಲೇ ಯುವಕನೊಬ್ಬ ಬೆನ್ನಿಗೆ ಕಬ್ಬಿಣದ ಶೀಟ್ ಕಟ್ಟಿಕೊಂಡು ಸೈಕಲಿನಲ್ಲಿ ಪೇಟೆಗೆ ಹೊರಟು ಸುದ್ದಿಯಾಗಿದ್ದಾನೆ.
            
            
            
    
            
             04-11-25 04:38 pm
                        
            
                  
                Bangalore Correspondent    
            
                    
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
    
            
             03-11-25 01:13 pm
                        
            
                  
                HK News Desk    
            
                    
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
    
            
             04-11-25 08:37 pm
                        
            
                  
                Mangalore Correspondent    
            
                    
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
ಹಿಂದುಗಳು, ಬಿಜೆಪಿಗರೆಂದು ತಾರತಮ್ಯಗೈದರೆ ಕ್ಷೇತ್ರದ...
03-11-25 10:47 pm
    
            
             04-11-25 02:11 pm
                        
            
                  
                Mangalore Correspondent    
            
                    
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm