ಬ್ರೇಕಿಂಗ್ ನ್ಯೂಸ್
11-05-21 05:20 pm Udupi Correspondent ಕರಾವಳಿ
ಕುಂದಾಪುರ, ಮೇ 11: ಲಾಕ್ಡೌನ್ ಇರುವುದರಿಂದ ಗ್ರೋಸರಿ ತರುವುದಕ್ಕೂ ವಾಹನ ಬಳಸುವಂತಿಲ್ಲ ಎಂದು ರಾಜ್ಯ ಸರಕಾರ ನಿಯಮ ಹೇರಿರುವುದರಿಂದ ಹೆಚ್ಚಿನ ಕಡೆ ಪೊಲೀಸರು ಲಾಠಿ ಬೀಸಿದ್ದು ಪರ- ವಿರೋಧ ಟೀಕೆಗೂ ಕಾರಣವಾಗಿದೆ. ಇದೇ ವೇಳೆ, ಇಲ್ಲಿನ ಕುಂಭಾಸಿಯ ಯುವಕನೊಬ್ಬ ಪೊಲೀಸರ ಲಾಠಿರುಚಿಯನ್ನು ಅಣಕಿಸುವುದಕ್ಕಾಗಿಯೇ ಹೊಸ ತಂತ್ರಕ್ಕೆ ಮೊರೆಹೋಗಿರುವ ಫೋಟೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕುಂಭಾಸಿಯ ವಿನೇಂದ್ರ ಆಚಾರ್ಯ ಎಂಬವರು ಸೈಕಲ್ ನಲ್ಲಿ ಪೇಟೆಗೆ ಹೊರಟಿದ್ದು ತಲೆಗೆ ಹೆಲ್ಮೆಟ್ ಮತ್ತು ಬೆನ್ನಿಗೆ ತಗಡು ಶೀಟನ್ನು ಕಟ್ಟಿಕೊಂಡಿದ್ದಾರೆ. ಬೆನ್ನಿಗೆ ಪೆಟ್ಟು ಬಿದ್ದರೂ ತಗಡು ಶೀಟ್ ಇದೆಯೆಂಬ ರೀತಿ ಬಿಂಬಿಸಿ, ಸೈಕಲಿನಲ್ಲಿ ಹೊರಟಿರುವ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಲಾಠಿಗೆ ಪ್ರತಿತಂತ್ರ ಎನ್ನುವ ರೀತಿ ಬಿಂಬಿತವಾಗುತ್ತಿದೆ.
ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಿದ್ದು ಆದರೆ ನಡೆದುಕೊಂಡೇ ಮನೆ ಪರಿಸರದ ಅಂಗಡಿಗಳಿಂದ ಖರೀದಿ ನಡೆಸಬೇಕು. ಯಾವುದೇ ಕಾರಣಕ್ಕೂ ವಾಹನಗಳಲ್ಲಿ ದೂರಕ್ಕೆ ಪ್ರಯಾಣ ಮಾಡಬಾರದು. ಅಗತ್ಯ ವಸ್ತು ಖರೀದಿಗೆಂದು ಮಾರುಕಟ್ಟೆ ಇನ್ನಿತರ ಪ್ರದೇಶಕ್ಕೆ ಹೋಗಬಾರದೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಆದರೆ, ಈ ನಿಯಮವನ್ನು ಬಹುತೇಕ ಕಡೆ ಜನರು ಮುರಿಯುತ್ತಿದ್ದಾರೆ. ಪೊಲೀಸರು ಅಡ್ಡಗಟ್ಟಿದರೂ ಒಳದಾರಿಗಳಿಂದ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಈ ವೇಳೆ, ಕೆಲವು ಕಡೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ಘಟನೆ ನಡೆದಿದೆ.
ಪೊಲೀಸರ ಲಾಠಿ ಬೀಸುವ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಯಸ್ಸಾದವರು ತಮ್ಮ ಸ್ಕೂಟರ್ ಬಳಸದೆ ಗ್ರೋಸರಿ ತರುವುದು ಹೇಗೆಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಕೆಲವು ಕಡೆ ವಯಸ್ಸಾದವರು, ಅಸಹಾಯಕರಿಗೆ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದೆ. ಹೀಗಿದ್ದರೂ, ಜನರು ಅಂಗಡಿ ಮುಂದೆ ಸೇರುವುದು, ಮುಗಿ ಬೀಳುವುದು ಕಾಮನ್ ಆಗಿದೆ. ಇಂಥ ಸಂದರ್ಭದಲ್ಲೇ ಯುವಕನೊಬ್ಬ ಬೆನ್ನಿಗೆ ಕಬ್ಬಿಣದ ಶೀಟ್ ಕಟ್ಟಿಕೊಂಡು ಸೈಕಲಿನಲ್ಲಿ ಪೇಟೆಗೆ ಹೊರಟು ಸುದ್ದಿಯಾಗಿದ್ದಾನೆ.
19-07-25 03:05 pm
Bangalore Correspondent
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
ರಾಜ್ಯದಲ್ಲಿ ಪರಮಾಣು ಸ್ಥಾವರಕ್ಕೆ ಒಪ್ಪಿಗೆ ; ಮತ್ತೆ...
18-07-25 10:31 pm
Accident in Chitradurga: ಟಾಟಾ ಏಸ್ ಗಾಡಿ ಹರಿದು...
18-07-25 08:01 pm
ಸಿಎಂ ಸಿದ್ದರಾಮಯ್ಯ ನಿಧನ ; ಫೇಸ್ಬುಕ್ ಅವಾಂತರಕ್ಕೆ...
18-07-25 07:11 pm
16-07-25 09:58 pm
HK News Desk
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
19-07-25 10:01 pm
Mangalore Correspondent
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
RCB Stampede, DySP Anupama Shenoy: ಕಾಲ್ತುಳಿತ...
19-07-25 06:51 pm
Dharmasthala Case, Santosh Kumar, CPIM: ಧರ್ಮಸ...
19-07-25 06:14 pm
Yakshagana Pataala Venkataramana Bhat: ಯಕ್ಷಗಾ...
19-07-25 02:32 pm
19-07-25 09:25 pm
Mangalore Correspondent
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm
Mangalore Fraud, WhatsApp, crime: ಕಂಪನಿಯ ಎಂಡಿ...
18-07-25 12:01 pm
Mangalore Kadri Police, Crime, Snake; ಹೆಬ್ಬಾವ...
18-07-25 11:36 am