ಬ್ರೇಕಿಂಗ್ ನ್ಯೂಸ್
11-05-21 05:20 pm Udupi Correspondent ಕರಾವಳಿ
ಕುಂದಾಪುರ, ಮೇ 11: ಲಾಕ್ಡೌನ್ ಇರುವುದರಿಂದ ಗ್ರೋಸರಿ ತರುವುದಕ್ಕೂ ವಾಹನ ಬಳಸುವಂತಿಲ್ಲ ಎಂದು ರಾಜ್ಯ ಸರಕಾರ ನಿಯಮ ಹೇರಿರುವುದರಿಂದ ಹೆಚ್ಚಿನ ಕಡೆ ಪೊಲೀಸರು ಲಾಠಿ ಬೀಸಿದ್ದು ಪರ- ವಿರೋಧ ಟೀಕೆಗೂ ಕಾರಣವಾಗಿದೆ. ಇದೇ ವೇಳೆ, ಇಲ್ಲಿನ ಕುಂಭಾಸಿಯ ಯುವಕನೊಬ್ಬ ಪೊಲೀಸರ ಲಾಠಿರುಚಿಯನ್ನು ಅಣಕಿಸುವುದಕ್ಕಾಗಿಯೇ ಹೊಸ ತಂತ್ರಕ್ಕೆ ಮೊರೆಹೋಗಿರುವ ಫೋಟೋ ಜಾಲತಾಣದಲ್ಲಿ ಭಾರೀ ವೈರಲ್ ಆಗಿದೆ.
ಕುಂಭಾಸಿಯ ವಿನೇಂದ್ರ ಆಚಾರ್ಯ ಎಂಬವರು ಸೈಕಲ್ ನಲ್ಲಿ ಪೇಟೆಗೆ ಹೊರಟಿದ್ದು ತಲೆಗೆ ಹೆಲ್ಮೆಟ್ ಮತ್ತು ಬೆನ್ನಿಗೆ ತಗಡು ಶೀಟನ್ನು ಕಟ್ಟಿಕೊಂಡಿದ್ದಾರೆ. ಬೆನ್ನಿಗೆ ಪೆಟ್ಟು ಬಿದ್ದರೂ ತಗಡು ಶೀಟ್ ಇದೆಯೆಂಬ ರೀತಿ ಬಿಂಬಿಸಿ, ಸೈಕಲಿನಲ್ಲಿ ಹೊರಟಿರುವ ಫೋಟೋ ಜಾಲತಾಣದಲ್ಲಿ ವೈರಲ್ ಆಗಿದ್ದು, ಪೊಲೀಸರ ಲಾಠಿಗೆ ಪ್ರತಿತಂತ್ರ ಎನ್ನುವ ರೀತಿ ಬಿಂಬಿತವಾಗುತ್ತಿದೆ.

ಬೆಳಗ್ಗೆ ಹತ್ತು ಗಂಟೆ ವರೆಗೆ ಅಗತ್ಯ ಸಾಮಗ್ರಿ ಖರೀದಿಸಲು ಅವಕಾಶ ನೀಡಿದ್ದು ಆದರೆ ನಡೆದುಕೊಂಡೇ ಮನೆ ಪರಿಸರದ ಅಂಗಡಿಗಳಿಂದ ಖರೀದಿ ನಡೆಸಬೇಕು. ಯಾವುದೇ ಕಾರಣಕ್ಕೂ ವಾಹನಗಳಲ್ಲಿ ದೂರಕ್ಕೆ ಪ್ರಯಾಣ ಮಾಡಬಾರದು. ಅಗತ್ಯ ವಸ್ತು ಖರೀದಿಗೆಂದು ಮಾರುಕಟ್ಟೆ ಇನ್ನಿತರ ಪ್ರದೇಶಕ್ಕೆ ಹೋಗಬಾರದೆಂದು ಮಾರ್ಗಸೂಚಿಯಲ್ಲಿ ಹೇಳಲಾಗಿದೆ. ಆದರೆ, ಈ ನಿಯಮವನ್ನು ಬಹುತೇಕ ಕಡೆ ಜನರು ಮುರಿಯುತ್ತಿದ್ದಾರೆ. ಪೊಲೀಸರು ಅಡ್ಡಗಟ್ಟಿದರೂ ಒಳದಾರಿಗಳಿಂದ ಅಂಗಡಿಗಳಿಗೆ ತೆರಳುತ್ತಿದ್ದಾರೆ. ಈ ವೇಳೆ, ಕೆಲವು ಕಡೆ ಪೊಲೀಸರು ಲಾಠಿ ಬೀಸಿ ಜನರನ್ನು ಚದುರಿಸುವ ಘಟನೆ ನಡೆದಿದೆ.
ಪೊಲೀಸರ ಲಾಠಿ ಬೀಸುವ ನಡೆಗೆ ಭಾರೀ ವಿರೋಧ ವ್ಯಕ್ತವಾಗಿದ್ದು, ವಯಸ್ಸಾದವರು ತಮ್ಮ ಸ್ಕೂಟರ್ ಬಳಸದೆ ಗ್ರೋಸರಿ ತರುವುದು ಹೇಗೆಂಬ ಮಾತುಗಳು ಕೇಳಿಬಂದಿದ್ದವು. ಅದಕ್ಕೆ ಕೆಲವು ಕಡೆ ವಯಸ್ಸಾದವರು, ಅಸಹಾಯಕರಿಗೆ ಮಾತ್ರ ವಾಹನ ಬಳಕೆಗೆ ಅವಕಾಶ ನೀಡಲಾಗಿದೆ. ಹೀಗಿದ್ದರೂ, ಜನರು ಅಂಗಡಿ ಮುಂದೆ ಸೇರುವುದು, ಮುಗಿ ಬೀಳುವುದು ಕಾಮನ್ ಆಗಿದೆ. ಇಂಥ ಸಂದರ್ಭದಲ್ಲೇ ಯುವಕನೊಬ್ಬ ಬೆನ್ನಿಗೆ ಕಬ್ಬಿಣದ ಶೀಟ್ ಕಟ್ಟಿಕೊಂಡು ಸೈಕಲಿನಲ್ಲಿ ಪೇಟೆಗೆ ಹೊರಟು ಸುದ್ದಿಯಾಗಿದ್ದಾನೆ.
09-02-26 07:20 pm
Bangalore Correspondent
ಶಿವಮೊಗ್ಗದ ಕಾರು ಚಾಲಕನಲ್ಲಿ 19 ಬಾಡಿಗೆ ಬ್ಯಾಂಕ್ ಖಾ...
09-02-26 01:30 pm
ರಾಷ್ಟ್ರೀಯ ಹೆದ್ದಾರಿ ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ರ...
09-02-26 12:29 pm
Gadag, No phone, Tv: ಎಸ್ಸೆಸ್ಸೆಲ್ಸಿ ಮಕ್ಕಳ ಭವಿಷ...
07-02-26 05:09 pm
ಸಿದ್ದರಾಮಯ್ಯರೇ ಐದು ವರ್ಷ ಸಿಎಂ ; ಪುತ್ರ ಯತೀಂದ್ರ ಪ...
07-02-26 02:58 pm
09-02-26 10:25 pm
HK News Desk
ಜಾಗತಿಕ ಷೇರು ಮಾರುಕಟ್ಟೆಯಲ್ಲಿ 'ಆಂಥ್ರೋಪಿಕ್' AI ಬಿ...
09-02-26 12:27 pm
ಬಿಜೆಪಿಯಿಂದ ನಮಗೆ ಅಚ್ಛೇ ದಿನ್ ಬಂದಿಲ್ಲ, ಸ್ವಯಂಸೇವಕ...
08-02-26 10:18 pm
25 ವರ್ಷಗಳ ಬಳಿಕ ಮುಂಬೈ ಪಾಲಿಕೆ ಬಿಜೆಪಿ ತೆಕ್ಕೆಗೆ ;...
07-02-26 10:53 pm
ಕಣ್ಣೆದುರೇ ನಡೆದ ಅಚ್ಚರಿ ; 1 ಲಕ್ಷ ರೂ. ಮೌಲ್ಯದ ಚಿನ...
06-02-26 10:58 pm
09-02-26 11:20 pm
HK News Desk
Mangalore Accident, Bus: ನಂತೂರಿನಲ್ಲಿ ಅಪಘಾತಕ್ಕ...
09-02-26 08:02 pm
ಕೆಪಿಟಿ ಜಂಕ್ಷನ್ ಬಳಿಯ ಹೆದ್ದಾರಿ ಡಿವೈಡರ್ ಮುಚ್ಚಿದ್...
09-02-26 02:50 pm
ಸೌಜನ್ಯಾ ಕೊಲೆ ಪ್ರಕರಣ ; ದೋಷಪೂರಿತ ತನಿಖೆ ನಡೆಸಿದ ಅ...
08-02-26 11:17 pm
ಜಾಗತಿಕ ಪ್ರವಾಸಿ ತಾಣಗಳ ಅಭಿವೃದ್ಧಿ ; ಕೋಡಿ- ಕನ್ಯಾನ...
08-02-26 10:10 pm
09-02-26 02:04 pm
HK News Desk
ಬೆಳ್ತಂಗಡಿ ; ಕಾಲೇಜು ತೆರಳುತ್ತಿದ್ದ ಅಪ್ರಾಪ್ತ ಯುವತ...
09-02-26 11:26 am
Mangalore Jail Raid: ಮಂಗಳೂರು ಜೈಲಿನಲ್ಲಿ ಬರ್ಕೆ...
08-02-26 02:07 pm
MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದಾಗ ಪೊಲೀಸ್ ದಾ...
08-02-26 12:59 pm
Mangalore Robbery, Crime: ಕಳವಾರಿಗೆ ಮೆಹಂದಿ ಹೋಗ...
08-02-26 12:37 pm