ಬ್ರೇಕಿಂಗ್ ನ್ಯೂಸ್
12-05-21 03:34 pm Mangalore Correspondent ಕರಾವಳಿ
ಮಂಗಳೂರು, ಮೇ 12: ಅರಬ್ಬೀ ಸಮುದ್ರದಲ್ಲಿ ಭಾರೀ ಚಂಡಮಾರುತ ಕಾಣಿಸಿಕೊಳ್ಳುವ ಸಾಧ್ಯತೆ ಇರುವುದರಿಂದ ಸಮುದ್ರಕ್ಕೆ ತೆರಳಿರುವ ಮೀನುಗಾರರು ಕೂಡಲೇ ದಡಕ್ಕೆ ತೆರಳುವಂತೆ ಇಂಡಿಯನ್ ಕೋಸ್ಟ್ ಗಾರ್ಡ್ ಸೂಚನೆ ನೀಡಿದೆ.
ಕೋಸ್ಟ್ ಗಾರ್ಡ್ ಪಡೆಯ ಹಡಗಿನ ಮೂಲಕ ಸಮುದ್ರ ಕರಾವಳಿಯ ಉದ್ದಕ್ಕೂ ಎಚ್ಚರಿಕೆ ಸೂಚನೆ ರವಾನಿಸಲಾಗುತ್ತಿದೆ. ಕೋಸ್ಟ್ ಗಾರ್ಡ್ ಸಿಬಂದಿ ಸ್ವತಃ ಸಮುದ್ರದಲ್ಲಿ ಮೀನುಗಾರಿಕೆ ನಡೆಸುತ್ತಿರುವ ಬೋಟ್ ಗಳ ಮೀನುಗಾರರಿಗೆ ಅಲರ್ಟ್ ಆಗುವಂತೆ ಮೈಕ್ ಅನೌನ್ಸ್ ಮಾಡಿಕೊಂಡು ತೆರಳುತ್ತಿದ್ದಾರೆ.




ಚಂಡಮಾರುತದ ಎಫೆಕ್ಟ್ ವಿಪರೀತ ಆಗುವ ಸಾಧ್ಯತೆ ಇರುವುದರಿಂದ ಕೂಡಲೇ ಮೀನುಗಾರರು ಸಮುದ್ರದಿಂದ ನಿಮ್ಮ ಹತ್ತಿರದಲ್ಲಿರುವ ತೀರ ಪ್ರದೇಶಗಳಿಗೆ ತೆರಳಬೇಕು. ಮೇ 13ರಿಂದಲೇ ಚಂಡಮಾರುತದ ಪರಿಣಾಮ ಕಾಣಿಸಿಕೊಳ್ಳಲಿದೆ ಎಂದು ಸಿಬಂದಿ ಹಿಂದಿ, ಇಂಗ್ಲಿಷ್, ಕನ್ನಡ ಹೀಗೆ ಹಲವು ಭಾಷೆಗಳಲ್ಲಿ ಮೈಕ್ ಅನೌನ್ಸ್ ಮಾಡುತ್ತಿರುವ ವಿಡಿಯೋವನ್ನು ಮಾಧ್ಯಮಕ್ಕೆ ಕೋಸ್ಟ್ ಗಾರ್ಡ್ ಬಿಡುಗಡೆ ಮಾಡಿದೆ.
ತೌಕ್ತೆ ಎನ್ನುವ ಹೆಸರಿನ ಚಂಡಮಾರುತ ಮೇ 16ರ ವೇಳೆಗೆ ಕೇರಳ, ಕರ್ನಾಟಕದ ಕರಾವಳಿಗೆ ಅಪ್ಪಳಿಸಲಿದೆ ಎನ್ನುವ ಮಾಹಿತಿಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಲಕ್ಷದ್ವೀಪದ ಬಳಿಯ ಸಮುದ್ರದಲ್ಲಿ ಹುಟ್ಟಿಕೊಳ್ಳುವ ಚಂಡಮಾರುತ ಆಬಳಿಕ ಕೇರಳ, ಕರ್ನಾಟಕ ತೀರಗಳಿಗೆ ಬೀಸಲಿದೆ ಎಂದು ಮುನ್ಸೂಚನೆ ನೀಡಿದೆ.
Video:
The Mangalore Coast Gaurd alerts fishermen to go back to their harbors due to the first cyclonic storm Tauktae. The warning was being issued in the native language for fishermen.
22-03-26 11:44 am
HK News Staffer
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
ಪಾವಗಡ ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕನ ಕಿರುಕ...
21-03-26 05:32 pm
22-03-26 03:14 pm
HK News Staffer
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
ಲಂಡನ್ ರಸ್ತೆಯಲ್ಲಿ ಪಾನ್ ಉಗುಳಿದ ಭಾರತ ಮೂಲದ ಇಬ್ಬರ...
19-03-26 04:51 pm
ಹೊರ್ಮುಜ್ ಜಲಸಂಧಿಯತ್ತ ಭಾರತ ನೌಕಾಪಡೆ ; ಗಲ್ಫ್ ನಲ್ಲ...
19-03-26 04:35 pm
22-03-26 05:07 pm
HK News Staffer
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
ಕಲ್ಲಡ್ಕದ ಫ್ಯಾಬ್ರಿಕೇಶನ್ ಉದ್ಯಮಿ ಸುಳ್ಯದ ಲಾಡ್ಜ್ ನ...
21-03-26 08:23 pm
ಮೆಲ್ಕಾರ್ ಪೆಟ್ರೋಲ್ ಪಂಪ್ ನಲ್ಲಿ ಪಾನಮತ್ತ ಯುವಕನ ರಂ...
21-03-26 06:31 pm
20-03-26 04:09 pm
HK News Desk
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm
Mangalore Crime: 9ರ ಹರೆಯದ ಬಾಲಕನಿಗೆ ಅಶ್ಲೀಲ ವೀಡ...
18-03-26 11:01 pm
Indian American Family Robbery: ಒಂದೇ ನಿಮಿಷದಲ್...
15-03-26 12:49 pm