ಬ್ರೇಕಿಂಗ್ ನ್ಯೂಸ್
15-05-21 12:53 pm Udupi Correspondent ಕರಾವಳಿ
ಉಡುಪಿ, ಮೇ 15: ಇಲ್ಲಿನ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೇ ಸೇರಿ ಜೈಲಿನ ಸುಪರಿಡೆಂಟ್ ವಿರುದ್ಧ ಒಂದು ದಿನದ ಉಪವಾಸ ನಡೆಸಿದ್ದಾರೆ. ಜೈಲಿನ ಸುಪರಿಡೆಂಟ್ ಶ್ರೀನಿವಾಸ ಗೌಡ, ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಮ್ಮನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಕೈದಿಗಳು ಉಪವಾಸ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.
ಸರಕಾರದಿಂದ ಕೈದಿಗಳಿಗೆ ಏನೆಲ್ಲಾ ಸೌಲಭ್ಯಗಳನ್ನು ಕೊಡುತ್ತಾರೋ, ಅವನ್ನು ಜೈಲು ಸುಪರಿಡೆಂಟ್ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೈದಿಗಳು ಸೇರಿಕೊಂಡು ಶುಕ್ರವಾರ ಇಡೀ ದಿನ ಆಹಾರ ಸ್ವೀಕರಿಸದೆ ನಿರಶನ ನಡೆಸಿದ್ದಾರೆ. ಜೈಲು ಸುಪರಿಡೆಂಟ್ ಮತ್ತು ಮತ್ತೊಬ್ಬ ಅಧಿಕಾರಿ ಸೇರಿ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದು, ಆಹಾರ ಇನ್ನಿತರ ಸೌಲಭ್ಯ ನೀಡಬೇಕಿದ್ದರೆ ಲಂಚ ಕೇಳುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ಅಲ್ಲದೆ, ಕೈದಿಗಳಿಗೆ ಕಳಪೆ ಆಹಾರವನ್ನು ಪೂರೈಸಲಾಗುತ್ತಿದೆ. ಕಾನೂನು ಪ್ರಕಾರ, ವಾರದಲ್ಲಿ ಒಮ್ಮೆಯಾದರೂ ಮಾಂಸ, ಮೀನಿನ ಪದಾರ್ಥ ಕೊಡಬೇಕೆಂದಿದೆ. ಆದರೆ, ಇಲ್ಲಿ ಕೋಳಿಯ ಕಾಲುಗಳನ್ನು ಹಾಕಿ ಸಾರು ಮಾಡಿ ಕೊಡುತ್ತಿದ್ದಾರೆ. ಜೈಲಿನ ಕೈದಿಗಳಿಗೆ ಸಿಗುತ್ತಿದ್ದ ಸೌಲಭ್ಯ, ಇನ್ನಿತರ ರೇಷನ್ ವಸ್ತುಗಳನ್ನು ಜೈಲಿನ ಅಧಿಕಾರಿಗಳು ತಮ್ಮ ಮನೆಗೆ ಒಯ್ಯುತ್ತಿದ್ದಾರೆ. ಪ್ರತಿಯೊಂದಕ್ಕೂ ಶ್ರೀನಿವಾಸ ಗೌಡ ಸೇರಿ ಜೈಲಿನ ಅಧಿಕಾರಿಗಳು ಕೈದಿಗಳ ಬಳಿಯಿಂದಲೇ ಹಣ ಕೇಳುತ್ತಿದ್ದಾರೆ ಎಂದು ಕೈದಿಯೊಬ್ಬ ಅಲ್ಲಿನ ಪರಿಸ್ಥಿತಿ ಹೇಳಿಕೊಂಡಿದ್ದಾನೆ.
ಜೈಲಿನ ಸ್ಥಿತಿಯ ಬಗ್ಗೆ ಕೈದಿಗಳು ಸೇರಿ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆಬಳಿಕ ಜಿಲ್ಲಾ ನ್ಯಾಯಾಧೀಶರು ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರಿಂದ ಕೈದಿಗಳು ತಮ್ಮ ನಿರಶನ ಅಂತ್ಯಗೊಳಿಸಿದ್ದಾರೆ.
Inmates at Kajaraguthu district prison at Hiriadka, Udupi here held a hunger strike accusing the jail superintendent Srinivas Gowda of misusing the facilities given to the prisoners.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm