ಬ್ರೇಕಿಂಗ್ ನ್ಯೂಸ್
15-05-21 12:53 pm Udupi Correspondent ಕರಾವಳಿ
ಉಡುಪಿ, ಮೇ 15: ಇಲ್ಲಿನ ಹಿರಿಯಡ್ಕದಲ್ಲಿರುವ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳೇ ಸೇರಿ ಜೈಲಿನ ಸುಪರಿಡೆಂಟ್ ವಿರುದ್ಧ ಒಂದು ದಿನದ ಉಪವಾಸ ನಡೆಸಿದ್ದಾರೆ. ಜೈಲಿನ ಸುಪರಿಡೆಂಟ್ ಶ್ರೀನಿವಾಸ ಗೌಡ, ಯಾವುದೇ ಸೌಲಭ್ಯಗಳನ್ನು ನೀಡುತ್ತಿಲ್ಲ. ನಮ್ಮನ್ನು ಶೋಷಣೆ ಮಾಡುತ್ತಿದ್ದಾರೆಂದು ಆರೋಪಿಸಿ ಕೈದಿಗಳು ಉಪವಾಸ ನಡೆಸಿ ಜಿಲ್ಲಾಡಳಿತದ ಗಮನ ಸೆಳೆದಿದ್ದಾರೆ.
ಸರಕಾರದಿಂದ ಕೈದಿಗಳಿಗೆ ಏನೆಲ್ಲಾ ಸೌಲಭ್ಯಗಳನ್ನು ಕೊಡುತ್ತಾರೋ, ಅವನ್ನು ಜೈಲು ಸುಪರಿಡೆಂಟ್ ಕೊಡುತ್ತಿರಲಿಲ್ಲ ಎನ್ನಲಾಗಿದೆ. ಹೀಗಾಗಿ ಕೈದಿಗಳು ಸೇರಿಕೊಂಡು ಶುಕ್ರವಾರ ಇಡೀ ದಿನ ಆಹಾರ ಸ್ವೀಕರಿಸದೆ ನಿರಶನ ನಡೆಸಿದ್ದಾರೆ. ಜೈಲು ಸುಪರಿಡೆಂಟ್ ಮತ್ತು ಮತ್ತೊಬ್ಬ ಅಧಿಕಾರಿ ಸೇರಿ ಕೈದಿಗಳಿಗೆ ಕಿರುಕುಳ ನೀಡುತ್ತಿದ್ದು, ಆಹಾರ ಇನ್ನಿತರ ಸೌಲಭ್ಯ ನೀಡಬೇಕಿದ್ದರೆ ಲಂಚ ಕೇಳುತ್ತಿದ್ದರು ಎಂದು ಆರೋಪ ಕೇಳಿಬಂದಿದೆ.
ಅಲ್ಲದೆ, ಕೈದಿಗಳಿಗೆ ಕಳಪೆ ಆಹಾರವನ್ನು ಪೂರೈಸಲಾಗುತ್ತಿದೆ. ಕಾನೂನು ಪ್ರಕಾರ, ವಾರದಲ್ಲಿ ಒಮ್ಮೆಯಾದರೂ ಮಾಂಸ, ಮೀನಿನ ಪದಾರ್ಥ ಕೊಡಬೇಕೆಂದಿದೆ. ಆದರೆ, ಇಲ್ಲಿ ಕೋಳಿಯ ಕಾಲುಗಳನ್ನು ಹಾಕಿ ಸಾರು ಮಾಡಿ ಕೊಡುತ್ತಿದ್ದಾರೆ. ಜೈಲಿನ ಕೈದಿಗಳಿಗೆ ಸಿಗುತ್ತಿದ್ದ ಸೌಲಭ್ಯ, ಇನ್ನಿತರ ರೇಷನ್ ವಸ್ತುಗಳನ್ನು ಜೈಲಿನ ಅಧಿಕಾರಿಗಳು ತಮ್ಮ ಮನೆಗೆ ಒಯ್ಯುತ್ತಿದ್ದಾರೆ. ಪ್ರತಿಯೊಂದಕ್ಕೂ ಶ್ರೀನಿವಾಸ ಗೌಡ ಸೇರಿ ಜೈಲಿನ ಅಧಿಕಾರಿಗಳು ಕೈದಿಗಳ ಬಳಿಯಿಂದಲೇ ಹಣ ಕೇಳುತ್ತಿದ್ದಾರೆ ಎಂದು ಕೈದಿಯೊಬ್ಬ ಅಲ್ಲಿನ ಪರಿಸ್ಥಿತಿ ಹೇಳಿಕೊಂಡಿದ್ದಾನೆ.
ಜೈಲಿನ ಸ್ಥಿತಿಯ ಬಗ್ಗೆ ಕೈದಿಗಳು ಸೇರಿ ಜಿಲ್ಲಾ ನ್ಯಾಯಾಧೀಶರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ. ಆಬಳಿಕ ಜಿಲ್ಲಾ ನ್ಯಾಯಾಧೀಶರು ಮತ್ತು ಕಾಪು ಶಾಸಕ ಲಾಲಾಜಿ ಮೆಂಡನ್ ಜೈಲಿಗೆ ಭೇಟಿ ನೀಡಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳುವ ಬಗ್ಗೆ ಭರವಸೆ ನೀಡಿದ್ದರಿಂದ ಕೈದಿಗಳು ತಮ್ಮ ನಿರಶನ ಅಂತ್ಯಗೊಳಿಸಿದ್ದಾರೆ.
Inmates at Kajaraguthu district prison at Hiriadka, Udupi here held a hunger strike accusing the jail superintendent Srinivas Gowda of misusing the facilities given to the prisoners.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm