ಬ್ರೇಕಿಂಗ್ ನ್ಯೂಸ್
15-05-21 09:05 pm Udupi Correspondent ಕರಾವಳಿ
ಉಡುಪಿ, ಮೇ 15: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಕಂಡು ಕೇಳರಿಯದ ರೀತಿ ಸಮುದ್ರ ಅಬ್ಬರಿಸತೊಡಗಿದ್ದು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಮಾಡಲಾಗಿದೆ. ಮೇ 16 ಮತ್ತು 17 ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಿನಕ್ಕೆ 65-115 ಮಿಮೀ ಮಳೆ ಸಾಧ್ಯತೆಯಿದೆ.
ಇದೇ ವೇಳೆ, ಸಮುದ್ರ, ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಮಲ್ಪೆ- ಪಡುಕೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಸಮುದ್ರ ಭೋರ್ಗರೆಯುತ್ತಿದ್ದು ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಮಲ್ಪೆ ಪಡುಕೆರೆಯಲ್ಲಿ ಮೀನುಗಾರಿಕಾ ರಸ್ತೆಗಳ ಮೇಲೆ ಸಮುದ್ರ ನೀರು ಬಂದಿದ್ದು ಕಡಲ ತೀರದ ನಿವಾಸಿಗಳಿಗೆ ಅಪಾಯದ ಮುನ್ನೆಚ್ಚರಿಕೆ ನೀಡಲಾಗಿದೆ.
ಸ್ಥಳಕ್ಕೆ ಉಡುಪಿ ಶಾಸಕ ರಘುಪತಿ ಭಟ್, ಪಡುಕೆರೆಯ ಮೀನುಗಾರರ ನಿವಾಸಗಳಿಗೆ ಭೇಟಿ ನೀಡಿದ್ದಾರೆ. ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಮನವೊಲಿಸಿದ್ದಾರೆ.
ಸಂಜೆಯ ನಂತರ ಮತ್ತೆ ನೀರಿನ ಅಬ್ಬರ ಇರುವ ಸಾಧ್ಯತೆ ಇರುವುದರಿಂದ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.
ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಹಾನಿಯಾಗಿದ್ದು ಐದು ಮೀನುಗಾರಿಕೆ ಮತ್ತು ಕೃಷಿ ಶೆಡ್ ಗಳಿಗೆ ಭಾಗಶಃ ಹಾನಿಯಾಗಿದೆ. ಇದೇ ವೇಳೆ, ಕಾಪು ತಾಲೂಕಿನಲ್ಲಿ ರಮೇಶ್ (51) ಎಂಬ ಕೃಷಿಕ ವಿದ್ಯುತ್ ತಂತಿ ತುಳಿದು ಸಾವು ಕಂಡಿದ್ದಾರೆ. ಬ್ರಹ್ಮಾವರದ ಕೋಡಿ, ಕಾಪು ಸಮುದ್ರ ತೀರದಲ್ಲಿ ಹೈ ಎಲರ್ಟ್ ಮಾಡಲಾಗಿದೆ. ಅಗತ್ಯ ಬಿದ್ದರೆ ಆಯಾ ಭಾಗದಲ್ಲಿ ಪುನರ್ವಸತಿ ಕೇಂದ್ರ ಕಲ್ಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
With Cyclone Tauktae forming over the Arabian Sea, heavy rains continued to lash Udupi district since May 15 morning. Farmer dies of electrocution due to heavy rains of cyclone in Udupi.
09-09-25 10:52 pm
Bangalore Correspondent
U T Khader: ಯುಟಿ ಖಾದರ್ ಏಕಪಕ್ಷೀಯ ತೀರ್ಮಾನ ತೆಗೆದ...
09-09-25 09:14 pm
Shivamogga Accident: ಸೆ.25ಕ್ಕೆ ಹಸೆಮಣೆ ಏರಬೇಕಿದ...
08-09-25 08:07 pm
ವೀರಶೈವ ಲಿಂಗಾಯತರು ಹಿಂದು ಬದಲು ಇತರರು ಎಂದು ನಮೂದಿಸ...
08-09-25 06:48 pm
ಮಸೀದಿ ಎದುರಲ್ಲಿ ಗಣೇಶ ವಿಸರ್ಜನೆ ವೇಳೆ ಕಲ್ಲು ತೂರಾಟ...
08-09-25 05:21 pm
10-09-25 04:22 pm
HK News Desk
ನೇಪಾಳದಲ್ಲಿ ಹಿಂಸಾಚಾರ ತೀವ್ರ ; ದೇಶ ಬಿಟ್ಟು ಓಡಿದ ಪ...
09-09-25 11:09 pm
ನೂತನ ಉಪ ರಾಷ್ಟ್ರಪತಿಯಾಗಿ ಎನ್.ಡಿ.ಎ ಮೈತ್ರಿಕೂಟದ ಸಿ...
09-09-25 09:38 pm
ಕಾಸರಗೋಡು ; ರಾಷ್ಟ್ರೀಯ ಹೆದ್ದಾರಿ ದಾಟಲೆತ್ನಿಸಿದ ಮಹ...
08-09-25 11:06 pm
ನೇಪಾಳದಲ್ಲಿ ಸೋಶಿಯಲ್ ಮೀಡಿಯಾ ಬ್ಯಾನ್ ; ದೇಶಾದ್ಯಂತ...
08-09-25 10:59 pm
10-09-25 10:50 pm
Mangalore Correspondent
Yenepoya Hospital, Mangalore: ಯೆನಪೋಯ ಆಸ್ಪತ್ರೆ...
10-09-25 08:46 pm
ಕೊಲ್ಲೂರು ಮೂಕಾಂಬಿಕೆಗೆ ನಾಲ್ಕು ಕೋಟಿ ಮೌಲ್ಯದ ವಜ್ರ...
10-09-25 08:14 pm
Mangalore, Baikampady Fire, Aromazen: ಬೈಕಂಪಾಡ...
10-09-25 02:10 pm
ಬಂಟ್ವಾಳ : ತನ್ನ ಮೇಲೆ ಹಲ್ಲೆ, ಕೊಲೆಯತ್ನವೆಂದು ಸುಳ್...
10-09-25 11:02 am
08-09-25 10:34 pm
Mangalore Correspondent
ಮಂಗಳೂರು ಏರ್ಪೋರ್ಟ್ ಟರ್ಮಿನಲ್ ಬಿಲ್ಡಿಂಗ್ ಧ್ವಂಸ ಬೆ...
07-09-25 03:34 pm
Mangalore SAF Police Constable, Arrest: ವಕೀಲ...
06-09-25 08:32 pm
60 Crore Fraud, Actress Shilpa Shetty, Raj Ku...
06-09-25 07:45 pm
ಲಷ್ಕರ್ ಉಗ್ರರ ಹೆಸರಲ್ಲಿ ಮುಂಬೈ ಸ್ಫೋಟದ ಬೆದರಿಕೆ ಸಂ...
06-09-25 05:26 pm