ಬ್ರೇಕಿಂಗ್ ನ್ಯೂಸ್
15-05-21 09:05 pm Udupi Correspondent ಕರಾವಳಿ
ಉಡುಪಿ, ಮೇ 15: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಕಂಡು ಕೇಳರಿಯದ ರೀತಿ ಸಮುದ್ರ ಅಬ್ಬರಿಸತೊಡಗಿದ್ದು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಮಾಡಲಾಗಿದೆ. ಮೇ 16 ಮತ್ತು 17 ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಿನಕ್ಕೆ 65-115 ಮಿಮೀ ಮಳೆ ಸಾಧ್ಯತೆಯಿದೆ.


ಇದೇ ವೇಳೆ, ಸಮುದ್ರ, ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಮಲ್ಪೆ- ಪಡುಕೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಸಮುದ್ರ ಭೋರ್ಗರೆಯುತ್ತಿದ್ದು ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಮಲ್ಪೆ ಪಡುಕೆರೆಯಲ್ಲಿ ಮೀನುಗಾರಿಕಾ ರಸ್ತೆಗಳ ಮೇಲೆ ಸಮುದ್ರ ನೀರು ಬಂದಿದ್ದು ಕಡಲ ತೀರದ ನಿವಾಸಿಗಳಿಗೆ ಅಪಾಯದ ಮುನ್ನೆಚ್ಚರಿಕೆ ನೀಡಲಾಗಿದೆ.
ಸ್ಥಳಕ್ಕೆ ಉಡುಪಿ ಶಾಸಕ ರಘುಪತಿ ಭಟ್, ಪಡುಕೆರೆಯ ಮೀನುಗಾರರ ನಿವಾಸಗಳಿಗೆ ಭೇಟಿ ನೀಡಿದ್ದಾರೆ. ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಮನವೊಲಿಸಿದ್ದಾರೆ.


ಸಂಜೆಯ ನಂತರ ಮತ್ತೆ ನೀರಿನ ಅಬ್ಬರ ಇರುವ ಸಾಧ್ಯತೆ ಇರುವುದರಿಂದ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.
ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಹಾನಿಯಾಗಿದ್ದು ಐದು ಮೀನುಗಾರಿಕೆ ಮತ್ತು ಕೃಷಿ ಶೆಡ್ ಗಳಿಗೆ ಭಾಗಶಃ ಹಾನಿಯಾಗಿದೆ. ಇದೇ ವೇಳೆ, ಕಾಪು ತಾಲೂಕಿನಲ್ಲಿ ರಮೇಶ್ (51) ಎಂಬ ಕೃಷಿಕ ವಿದ್ಯುತ್ ತಂತಿ ತುಳಿದು ಸಾವು ಕಂಡಿದ್ದಾರೆ. ಬ್ರಹ್ಮಾವರದ ಕೋಡಿ, ಕಾಪು ಸಮುದ್ರ ತೀರದಲ್ಲಿ ಹೈ ಎಲರ್ಟ್ ಮಾಡಲಾಗಿದೆ. ಅಗತ್ಯ ಬಿದ್ದರೆ ಆಯಾ ಭಾಗದಲ್ಲಿ ಪುನರ್ವಸತಿ ಕೇಂದ್ರ ಕಲ್ಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
With Cyclone Tauktae forming over the Arabian Sea, heavy rains continued to lash Udupi district since May 15 morning. Farmer dies of electrocution due to heavy rains of cyclone in Udupi.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am