ಬ್ರೇಕಿಂಗ್ ನ್ಯೂಸ್
15-05-21 09:05 pm Udupi Correspondent ಕರಾವಳಿ
ಉಡುಪಿ, ಮೇ 15: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಕಂಡು ಕೇಳರಿಯದ ರೀತಿ ಸಮುದ್ರ ಅಬ್ಬರಿಸತೊಡಗಿದ್ದು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಮಾಡಲಾಗಿದೆ. ಮೇ 16 ಮತ್ತು 17 ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಿನಕ್ಕೆ 65-115 ಮಿಮೀ ಮಳೆ ಸಾಧ್ಯತೆಯಿದೆ.
ಇದೇ ವೇಳೆ, ಸಮುದ್ರ, ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಮಲ್ಪೆ- ಪಡುಕೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಸಮುದ್ರ ಭೋರ್ಗರೆಯುತ್ತಿದ್ದು ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಮಲ್ಪೆ ಪಡುಕೆರೆಯಲ್ಲಿ ಮೀನುಗಾರಿಕಾ ರಸ್ತೆಗಳ ಮೇಲೆ ಸಮುದ್ರ ನೀರು ಬಂದಿದ್ದು ಕಡಲ ತೀರದ ನಿವಾಸಿಗಳಿಗೆ ಅಪಾಯದ ಮುನ್ನೆಚ್ಚರಿಕೆ ನೀಡಲಾಗಿದೆ.
ಸ್ಥಳಕ್ಕೆ ಉಡುಪಿ ಶಾಸಕ ರಘುಪತಿ ಭಟ್, ಪಡುಕೆರೆಯ ಮೀನುಗಾರರ ನಿವಾಸಗಳಿಗೆ ಭೇಟಿ ನೀಡಿದ್ದಾರೆ. ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಮನವೊಲಿಸಿದ್ದಾರೆ.
ಸಂಜೆಯ ನಂತರ ಮತ್ತೆ ನೀರಿನ ಅಬ್ಬರ ಇರುವ ಸಾಧ್ಯತೆ ಇರುವುದರಿಂದ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.
ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಹಾನಿಯಾಗಿದ್ದು ಐದು ಮೀನುಗಾರಿಕೆ ಮತ್ತು ಕೃಷಿ ಶೆಡ್ ಗಳಿಗೆ ಭಾಗಶಃ ಹಾನಿಯಾಗಿದೆ. ಇದೇ ವೇಳೆ, ಕಾಪು ತಾಲೂಕಿನಲ್ಲಿ ರಮೇಶ್ (51) ಎಂಬ ಕೃಷಿಕ ವಿದ್ಯುತ್ ತಂತಿ ತುಳಿದು ಸಾವು ಕಂಡಿದ್ದಾರೆ. ಬ್ರಹ್ಮಾವರದ ಕೋಡಿ, ಕಾಪು ಸಮುದ್ರ ತೀರದಲ್ಲಿ ಹೈ ಎಲರ್ಟ್ ಮಾಡಲಾಗಿದೆ. ಅಗತ್ಯ ಬಿದ್ದರೆ ಆಯಾ ಭಾಗದಲ್ಲಿ ಪುನರ್ವಸತಿ ಕೇಂದ್ರ ಕಲ್ಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
With Cyclone Tauktae forming over the Arabian Sea, heavy rains continued to lash Udupi district since May 15 morning. Farmer dies of electrocution due to heavy rains of cyclone in Udupi.
05-10-25 07:18 pm
HK News Desk
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm