ಬ್ರೇಕಿಂಗ್ ನ್ಯೂಸ್
15-05-21 09:05 pm Udupi Correspondent ಕರಾವಳಿ
ಉಡುಪಿ, ಮೇ 15: ಅರಬ್ಬಿ ಸಮುದ್ರದಲ್ಲಿ ಕಾಣಿಸಿಕೊಂಡ ತೌಕ್ತೆ ಚಂಡಮಾರುತದಿಂದಾಗಿ ಕರಾವಳಿಯಲ್ಲಿ ಕಂಡು ಕೇಳರಿಯದ ರೀತಿ ಸಮುದ್ರ ಅಬ್ಬರಿಸತೊಡಗಿದ್ದು ಉಡುಪಿ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗಿನ ವರೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.
ಮುಂದಿನ ಎರಡು ದಿನ ಉಡುಪಿ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಮಾಡಲಾಗಿದೆ. ಮೇ 16 ಮತ್ತು 17 ರ ವರೆಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ದಿನಕ್ಕೆ 65-115 ಮಿಮೀ ಮಳೆ ಸಾಧ್ಯತೆಯಿದೆ.
ಇದೇ ವೇಳೆ, ಸಮುದ್ರ, ನದಿ ತೀರದಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದೆ. ಮಲ್ಪೆ- ಪಡುಕೆರೆ ಭಾಗದಲ್ಲಿ ಭಾರೀ ಪ್ರಮಾಣದಲ್ಲಿ ಸಮುದ್ರ ಭೋರ್ಗರೆಯುತ್ತಿದ್ದು ಅಲ್ಲಿನ ನಿವಾಸಿಗಳನ್ನು ಸ್ಥಳಾಂತರ ಮಾಡಲು ಜಿಲ್ಲಾಡಳಿತ ಚಿಂತನೆ ನಡೆಸಿದೆ.
ಮಲ್ಪೆ ಪಡುಕೆರೆಯಲ್ಲಿ ಮೀನುಗಾರಿಕಾ ರಸ್ತೆಗಳ ಮೇಲೆ ಸಮುದ್ರ ನೀರು ಬಂದಿದ್ದು ಕಡಲ ತೀರದ ನಿವಾಸಿಗಳಿಗೆ ಅಪಾಯದ ಮುನ್ನೆಚ್ಚರಿಕೆ ನೀಡಲಾಗಿದೆ.
ಸ್ಥಳಕ್ಕೆ ಉಡುಪಿ ಶಾಸಕ ರಘುಪತಿ ಭಟ್, ಪಡುಕೆರೆಯ ಮೀನುಗಾರರ ನಿವಾಸಗಳಿಗೆ ಭೇಟಿ ನೀಡಿದ್ದಾರೆ. ತೀರದ ನಿವಾಸಿಗಳನ್ನು ಸ್ಥಳಾಂತರಿಸಲು ಮನವೊಲಿಸಿದ್ದಾರೆ.
ಸಂಜೆಯ ನಂತರ ಮತ್ತೆ ನೀರಿನ ಅಬ್ಬರ ಇರುವ ಸಾಧ್ಯತೆ ಇರುವುದರಿಂದ ತೀರದ ನಿವಾಸಿಗಳನ್ನು ಸುರಕ್ಷಿತ ಸ್ಥಳಕ್ಕೆ ತೆರಳುವಂತೆ ಸೂಚಿಸಲಾಗಿದೆ. ಇದಕ್ಕಾಗಿ ಮಲ್ಪೆಯ ಏಳೂರು ಮೊಗವೀರ ಭವನದಲ್ಲಿ ಕಾಳಜಿ ಕೇಂದ್ರ ಆರಂಭಿಸಲಾಗಿದೆ.
ಚಂಡಮಾರುತದ ಪರಿಣಾಮ ಜಿಲ್ಲೆಯಲ್ಲಿ ಎಂಟು ಮನೆಗಳಿಗೆ ಹಾನಿಯಾಗಿದ್ದು ಐದು ಮೀನುಗಾರಿಕೆ ಮತ್ತು ಕೃಷಿ ಶೆಡ್ ಗಳಿಗೆ ಭಾಗಶಃ ಹಾನಿಯಾಗಿದೆ. ಇದೇ ವೇಳೆ, ಕಾಪು ತಾಲೂಕಿನಲ್ಲಿ ರಮೇಶ್ (51) ಎಂಬ ಕೃಷಿಕ ವಿದ್ಯುತ್ ತಂತಿ ತುಳಿದು ಸಾವು ಕಂಡಿದ್ದಾರೆ. ಬ್ರಹ್ಮಾವರದ ಕೋಡಿ, ಕಾಪು ಸಮುದ್ರ ತೀರದಲ್ಲಿ ಹೈ ಎಲರ್ಟ್ ಮಾಡಲಾಗಿದೆ. ಅಗತ್ಯ ಬಿದ್ದರೆ ಆಯಾ ಭಾಗದಲ್ಲಿ ಪುನರ್ವಸತಿ ಕೇಂದ್ರ ಕಲ್ಪಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಗದೀಶ್ ಮಾಹಿತಿ ನೀಡಿದ್ದಾರೆ.
With Cyclone Tauktae forming over the Arabian Sea, heavy rains continued to lash Udupi district since May 15 morning. Farmer dies of electrocution due to heavy rains of cyclone in Udupi.
20-07-25 08:35 pm
Bangalore Correspondent
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
Rcb, Bangalore: ಪೊಲೀಸರು 'ಆರ್ಸಿಬಿ ಸೇವಕರು' ಎಂಬ...
19-07-25 03:05 pm
ಎಲ್ಲ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ತಲಾ 50 ಕೋಟಿ ಅ...
18-07-25 10:59 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 04:03 am
Mangaluru Correspondent
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
MRPL, MP Brijesh Chowta, Mangalore: MRPL ಹಸಿರ...
19-07-25 10:01 pm
Mangalore, Derlakatte Raid: ನಿಯಮ ಉಲ್ಲಂಘಿಸಿ ಕಾ...
19-07-25 07:18 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm