ಬ್ರೇಕಿಂಗ್ ನ್ಯೂಸ್
15-05-21 10:27 pm Mangaluru Correspondent ಕರಾವಳಿ
ಮಂಗಳೂರು, ಮೇ 15: ತೀವ್ರ ಚಂಡಮಾರುತದ ಪರಿಣಾಮ ಎನ್ಎಂಪಿಟಿ ಬಂದರಿನ ಬಳಿ ಸಮುದ್ರ ಮಧ್ಯೆ ಒಂಬತ್ತು ಕಾರ್ಮಿಕರಿದ್ದ ಟಗ್ ಮಗುಚಿ ಬಿದ್ದಿದ್ದು ಒಬ್ಬನ ಶವ ಪತ್ತೆಯಾಗಿದೆ. ಇಬ್ಬರನ್ನು ರಕ್ಷಣೆ ಮಾಡಲಾಗಿದೆ.
ಮಂಗಳೂರಿನ ಎಂಆರ್ ಪಿಎಲ್ ರಿಫೈನರಿಗೆ ಸೇರಿದ ಟಗ್ ಬೋಟ್ ಆಗಿದ್ದು ಬೃಹದ್ಗಾತ್ರದ ಹಡಗುಗಳಿಂದ ಕಚ್ಚಾತೈಲ ಇಳಿಸಲು ಬಳಸಲಾಗುತ್ತಿತ್ತು. ಸಮುದ್ರ ಮಧ್ಯೆ ಕಾರ್ಯಾಚರಣೆ ವೇಳೆ ಟಗ್ ತೀವ್ರ ಗಾಳಿಗೆ ಮಗುಚಿದ್ದು ಕಾರ್ಮಿಕರಾಗಿದ್ದ ಹೇಮಚಂದ್ರ ಜಾ ಎಂಬವರ ಶವ ಪಡುಬಿದ್ರೆಯಲ್ಲಿ ಪತ್ತೆಯಾಗಿದೆ.



ಟಗ್ ಬೋಟಿನಲ್ಲಿ ಒಟ್ಟು ಒಂಬತ್ತು ಜನರು ಕಾರ್ಯ ನಿರ್ವಹಿಸುತ್ತಿದ್ದರು ಎನ್ನಲಾಗಿದೆ. ಮಂಗಳೂರಿನ ಪಣಂಬೂರಿನ ಬಂದರಿನಿಂದ ಕೆಲವೇ ನಾಟಿಕಲ್ ಮೈಲು ದೂರದಲ್ಲಿ ಘಟನೆ ನಡೆದಿದೆ.
ಚಂಡಮಾರುತದಿಂದ ಎದ್ದ ಬೃಹತ್ ಅಲೆಗೆ ಟಗ್ ಮಗುಚಿ ಬಿದ್ದಿದೆ ಎನ್ನಲಾಗುತ್ತಿದ್ದು ಬೋಟಿನಲ್ಲಿದ್ದ 9 ಜನರು ನೀರುಪಾಲಾಗಿದ್ದರು. ಈ ಪೈಕಿ ಇಬ್ಬರು ಟ್ಯೂಬಿನ ಸಹಾಯದಿಂದ ಸತತ ಎಂಟು ಗಂಟೆ ಕಾಲ ಈಜಿ ಸಾವಿನ ದವಡೆಯಿಂದ ಪಾರಾಗಿದ್ದಾರೆ.
ಸಮುದ್ರ ಮಧ್ಯೆ ಉಡುಪಿಯ ಮಟ್ಟು ಕೊಪ್ಪಲು ಎಂಬಲ್ಲಿ ಕಾಣಿಸಿಕೊಂಡ ಇಬ್ಬರನ್ನು ಸ್ಥಳೀಯರು ದೋಣಿ ಮೂಲಕ ದಡಕ್ಕೆ ಎಳೆದು ರಕ್ಷಿಸಿದ್ದಾರೆ. ಉಳಿದವರ ಪತ್ತೆಗಾಗಿ ಕರಾವಳಿ ಕಾವಲು ಪಡೆ ಶೋಧ ಕಾರ್ಯಾಚರಣೆ ನಡೆಸುತ್ತಿದೆ.
ಉಡುಪಿಯಲ್ಲಿ ಆಸ್ಪತ್ರೆಗೆ ದಾಖಲು
ಟಗ್ ಮಗುಚಿ, ಎಂಟು ಗಂಟೆ ಕಾಲ ಈಜಿ ಜೀವ ಉಳಿಸಿಕೊಂಡ ಇಬ್ಬರಿಗೆ ಉಡುಪಿಯ ಅಜ್ಜರಕಾಡು ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲು ಮಾಡಲಾಗಿದೆ. ಪಶ್ಚಿಮ ಬಂಗಾಳ ಮೂಲದ ಮೊಮಿರುಲ್ ಮುಲ್ಲಾ( 34) ಹಾಗೂ ಕರೀಮುಲ್ಲಾ ಶೇಕ್ (24) ಸಾವಿನ ದವಡೆಗೆ ಸಿಲುಕಿ ಪಾರಾಗಿ ಬಂದವರು. ಮಂಗಳೂರಿನ ಸುರತ್ಕಲ್ ನಿಂದ 17 ನಾಟಿಕಲ್ ದೂರದಲ್ಲಿ ದುರಂತ ನಡೆದಿತ್ತು.
Six fishermen go missing after Mangalore MRPL Tug boat capsizes due to Cyclone Tauktae in which one has been found dead and two have been rescued and have been admitted to govt hospital in Udupi. The search is on for the three.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm