ಬ್ರೇಕಿಂಗ್ ನ್ಯೂಸ್
16-05-21 12:45 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಎಂಆರ್ ಪಿಎಲ್ ಅಡಿ ಗುತ್ತಿಗೆ ಕೆಲಸ ಮಾಡುತ್ತಿರುವ ಮತ್ತೊಂದು ಟಗ್ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದು ಅದರಲ್ಲಿ ಒಂಬತ್ತು ಮಂದಿ ಕಾರ್ಮಿಕರಿದ್ದಾರೆಂಬ ಮಾಹಿತಿಯಿದೆ. ಟಗ್ ಮತ್ತು ಕಾರ್ಮಿಕರ ರಕ್ಷಣೆಗೆ ಕೋಸ್ಟ್ ಗಾರ್ಡ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.
ಮಂಗಳೂರಿನ ಎಂಆರ್ ಪಿಎಲ್ ಕಚ್ಚಾ ತೈಲ ಹೊತ್ತು ತರುವ ಬೃಹತ್ ಹಡಗುಗಳಿಂದ ತೈಲ ಪೂರೈಕೆಗೆ ಸಹಕರಿಸಲು ಟಗ್ ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಾರೆ. ಎನ್ಎಂಪಿಟಿ ಬಂದರು ವ್ಯಾಪ್ತಿಗೆ ಬರುವ ಟಗ್ ನಲ್ಲಿ ಜನರೇಟರ್ ಸಮಸ್ಯೆ ಆಗಿ ಇಂಜಿನ್ ಕೆಟ್ಟು ಹೋಗಿದ್ದು ಚಂಡಮಾರುತದ ನಡುವೆ ಅಪಾಯಕ್ಕೀಡಾಗಿದೆ.
ಚಂಡಮಾರುತದ ಮುನ್ಸೂಚನೆ ಇದ್ದರೂ, ಎನ್ಎಂಪಿಟಿ ಬಂದರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಟಗ್ ಅನ್ನು ದಡಕ್ಕೆ ತರುವ ಕೆಲಸ ಮಾಡಿರಲಿಲ್ಲ. ಶನಿವಾರ ಟಗ್ ಅಪಾಯಕ್ಕೀಡಾದ ಬಗ್ಗೆ ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿದ್ದು ಐಸಿಜಿ ಶಿಪ್ ಮೂಲಕ ಕಾರ್ಯಾಚರಣೆಗೆ ಪ್ರಯತ್ನ ನಡೆದಿದೆ. ಆದರೆ ಸಮುದ್ರ ಬಿರುಸಾಗಿರುವುದರಿಂದ ಟಗ್ ಇರುವಲ್ಲಿಗೆ ಹಡಗು ತೆರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೂರದಲ್ಲಿ ನಿಂತು ಟಗ್ ಬಗ್ಗೆ ನಿಗಾ ಇಡಲಾಗುತ್ತಿದೆ.
ಸದ್ಯಕ್ಕೆ ಪಡುಬಿದ್ರಿ ಬಳಿಯ ಸಮುದ್ರದಲ್ಲಿ ಅಂದರೆ, ಮಂಗಳೂರಿನ ಎನ್ಎಂಪಿಟಿ ಬಂದರಿನಿಂದ 15 ನಾಟಿಕಲ್ ದೂರದಲ್ಲಿ ಟಗ್ ಉಳಿದುಕೊಂಡಿದ್ದು ಅದರಲ್ಲಿರುವ ಒಂಬತ್ತು ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಬೆಳಗ್ಗಿನ ಮಾಹಿತಿ ಪ್ರಕಾರ, ಚಂಡಮಾರುತದ ಅಬ್ಬರ ಕಡಿಮೆಯಾಗಿದ್ದು ಸಮುದ್ರ ಶಾಂತ ಸ್ಥಿತಿಗೆ ಮರಳುತ್ತಿದೆ. ಚಂಡಮಾರುತ ಉತ್ತರ ಭಾಗದತ್ತ ತೆರಳುತ್ತಿರುವುದರಿಂದ ಸಮುದ್ರದ ಅಬ್ಬರ ಇಂದು ಸಂಜೆ ಹೊತ್ತಿಗೆ ಕಡಿಮೆಯಾಗಲಿದ್ದು ಆನಂತರ ಟಗ್ ಅನ್ನು ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆ ನಡೆಯಲಿದೆ. ಸದ್ಯಕ್ಕೆ ಎರಡು ಕಿಮೀ ಅಂತರದಲ್ಲಿ ಕೋಸ್ಟ್ ಗಾರ್ಡ್ ಪಡೆ ಟಗ್ ಬಗ್ಗೆ ನಿಗಾ ಇಟ್ಟಿದೆ ಎನ್ನುವ ಮಾಹಿತಿ ಕೋಸ್ಟ್ ಗಾರ್ಡ್ ನಿಂದ ಸಿಕ್ಕಿದೆ.
Read: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
Mangalore MRPL tugboat named Alliance with 9 fishermen stranded in danger by cyclone tauktae near Moodbidri. The Mangalore Coast guard ship has reached the spot for the rescue operation. Last night another Tugboat with 5 fishermen capsized in which one was found dead.
13-07-25 08:37 pm
HK News Desk
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
ಧರ್ಮಸ್ಥಳ ಘಟನೆ ; ಒಬ್ಬ ವ್ಯಕ್ತಿಯ ಪರವಾಗಿ ವಕೀಲರು ದ...
11-07-25 06:36 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm