ಬ್ರೇಕಿಂಗ್ ನ್ಯೂಸ್
16-05-21 12:45 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಎಂಆರ್ ಪಿಎಲ್ ಅಡಿ ಗುತ್ತಿಗೆ ಕೆಲಸ ಮಾಡುತ್ತಿರುವ ಮತ್ತೊಂದು ಟಗ್ ಸಮುದ್ರ ಮಧ್ಯೆ ಅಪಾಯಕ್ಕೀಡಾಗಿದ್ದು ಅದರಲ್ಲಿ ಒಂಬತ್ತು ಮಂದಿ ಕಾರ್ಮಿಕರಿದ್ದಾರೆಂಬ ಮಾಹಿತಿಯಿದೆ. ಟಗ್ ಮತ್ತು ಕಾರ್ಮಿಕರ ರಕ್ಷಣೆಗೆ ಕೋಸ್ಟ್ ಗಾರ್ಡ್ ಪಡೆ ಕಾರ್ಯಾಚರಣೆ ನಡೆಸುತ್ತಿದೆ.
ಮಂಗಳೂರಿನ ಎಂಆರ್ ಪಿಎಲ್ ಕಚ್ಚಾ ತೈಲ ಹೊತ್ತು ತರುವ ಬೃಹತ್ ಹಡಗುಗಳಿಂದ ತೈಲ ಪೂರೈಕೆಗೆ ಸಹಕರಿಸಲು ಟಗ್ ನಲ್ಲಿ ಕಾರ್ಮಿಕರು ಕೆಲಸ ಮಾಡುತ್ತಾರೆ. ಎನ್ಎಂಪಿಟಿ ಬಂದರು ವ್ಯಾಪ್ತಿಗೆ ಬರುವ ಟಗ್ ನಲ್ಲಿ ಜನರೇಟರ್ ಸಮಸ್ಯೆ ಆಗಿ ಇಂಜಿನ್ ಕೆಟ್ಟು ಹೋಗಿದ್ದು ಚಂಡಮಾರುತದ ನಡುವೆ ಅಪಾಯಕ್ಕೀಡಾಗಿದೆ.
ಚಂಡಮಾರುತದ ಮುನ್ಸೂಚನೆ ಇದ್ದರೂ, ಎನ್ಎಂಪಿಟಿ ಬಂದರು ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದರಿಂದ ಟಗ್ ಅನ್ನು ದಡಕ್ಕೆ ತರುವ ಕೆಲಸ ಮಾಡಿರಲಿಲ್ಲ. ಶನಿವಾರ ಟಗ್ ಅಪಾಯಕ್ಕೀಡಾದ ಬಗ್ಗೆ ಕೋಸ್ಟ್ ಗಾರ್ಡ್ ಪಡೆಗೆ ಮಾಹಿತಿ ನೀಡಲಾಗಿದ್ದು ಐಸಿಜಿ ಶಿಪ್ ಮೂಲಕ ಕಾರ್ಯಾಚರಣೆಗೆ ಪ್ರಯತ್ನ ನಡೆದಿದೆ. ಆದರೆ ಸಮುದ್ರ ಬಿರುಸಾಗಿರುವುದರಿಂದ ಟಗ್ ಇರುವಲ್ಲಿಗೆ ಹಡಗು ತೆರಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ ದೂರದಲ್ಲಿ ನಿಂತು ಟಗ್ ಬಗ್ಗೆ ನಿಗಾ ಇಡಲಾಗುತ್ತಿದೆ.
ಸದ್ಯಕ್ಕೆ ಪಡುಬಿದ್ರಿ ಬಳಿಯ ಸಮುದ್ರದಲ್ಲಿ ಅಂದರೆ, ಮಂಗಳೂರಿನ ಎನ್ಎಂಪಿಟಿ ಬಂದರಿನಿಂದ 15 ನಾಟಿಕಲ್ ದೂರದಲ್ಲಿ ಟಗ್ ಉಳಿದುಕೊಂಡಿದ್ದು ಅದರಲ್ಲಿರುವ ಒಂಬತ್ತು ಕಾರ್ಮಿಕರು ಸುರಕ್ಷಿತವಾಗಿದ್ದಾರೆ ಎನ್ನಲಾಗುತ್ತಿದೆ. ಇಂದು ಬೆಳಗ್ಗಿನ ಮಾಹಿತಿ ಪ್ರಕಾರ, ಚಂಡಮಾರುತದ ಅಬ್ಬರ ಕಡಿಮೆಯಾಗಿದ್ದು ಸಮುದ್ರ ಶಾಂತ ಸ್ಥಿತಿಗೆ ಮರಳುತ್ತಿದೆ. ಚಂಡಮಾರುತ ಉತ್ತರ ಭಾಗದತ್ತ ತೆರಳುತ್ತಿರುವುದರಿಂದ ಸಮುದ್ರದ ಅಬ್ಬರ ಇಂದು ಸಂಜೆ ಹೊತ್ತಿಗೆ ಕಡಿಮೆಯಾಗಲಿದ್ದು ಆನಂತರ ಟಗ್ ಅನ್ನು ಅಪಾಯದಿಂದ ರಕ್ಷಿಸುವ ಕಾರ್ಯಾಚರಣೆ ನಡೆಯಲಿದೆ. ಸದ್ಯಕ್ಕೆ ಎರಡು ಕಿಮೀ ಅಂತರದಲ್ಲಿ ಕೋಸ್ಟ್ ಗಾರ್ಡ್ ಪಡೆ ಟಗ್ ಬಗ್ಗೆ ನಿಗಾ ಇಟ್ಟಿದೆ ಎನ್ನುವ ಮಾಹಿತಿ ಕೋಸ್ಟ್ ಗಾರ್ಡ್ ನಿಂದ ಸಿಕ್ಕಿದೆ.
Read: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
Mangalore MRPL tugboat named Alliance with 9 fishermen stranded in danger by cyclone tauktae near Moodbidri. The Mangalore Coast guard ship has reached the spot for the rescue operation. Last night another Tugboat with 5 fishermen capsized in which one was found dead.
22-10-24 11:13 pm
Bangalore Correspondent
ಚನ್ನಪಟ್ಟಣ ; ಯೋಗೀಶ್ವರ್ ಗೆ ಮೈತ್ರಿ ಟಿಕೆಟ್ ನೀಡಲು...
22-10-24 11:06 pm
Kengari body found, Bangalore: ಬಿಂದಿಗೆ ಎತ್ತಿಕ...
22-10-24 08:27 pm
ಬೆಂಗಳೂರಿನಲ್ಲಿ 6 ಅಂತಸ್ಥಿನ ನಿರ್ಮಾಣ ಹಂತದ ಕಟ್ಟಡ ಮ...
22-10-24 07:19 pm
ಸಿ.ಪಿ ಯೋಗೀಶ್ವರ್ ಕಾಂಗ್ರೆಸ್ ಸೇರೋದು ಪಕ್ಕಾ ; ಮುಖ್...
22-10-24 05:26 pm
21-10-24 02:23 pm
HK News Desk
2023ರಲ್ಲಿ ಗ್ಲೋಬಲ್ ಯೂತ್ ಐಕಾನ್ ಆಗಿದ್ದ ಬಿಲಿಯನೇರ್...
20-10-24 10:53 pm
ಮನೆ ಮಾಲೀಕನ ಮೇಲಿನ ಸಿಟ್ಟಿನಲ್ಲಿ ಚಪಾತಿ ಹಿಟ್ಟಿಗೆ ಮ...
17-10-24 11:16 am
Mumbai Road Rage Video; ಮುಂಬೈ ; ಕಾರಿಗೆ ಆಟೋ ರಿ...
15-10-24 03:51 pm
ಡಿ ಕಂಪನಿ ಹಾದಿಯಲ್ಲಿ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್...
14-10-24 10:12 pm
22-10-24 10:26 pm
Mangalore Correspondent
'ಅಕಾಡೆಮಿಡ್ ಒಂಜಿ ದಿನ : ಬಲೆ ತುಳು ಓದುಗ' ; ಅ.25ರ...
22-10-24 09:44 pm
Mangalore college, News: ಸರಕಾರಿ ಪ್ರಥಮ ದರ್ಜೆ ಕ...
22-10-24 07:28 pm
Mangalore, Ullal, railway track stone: ರೈಲು ಹ...
22-10-24 05:29 pm
Kalladka road, Mangalore News: ಮಳೆ- ಬಿಸಿಲಿಗೆ...
21-10-24 09:49 pm
22-10-24 02:49 pm
HK News Desk
Udupi Murder, Crime news: ಕುಡಿದ ಮತ್ತಿನಲ್ಲಿ ಸ್...
22-10-24 02:29 pm
Mangalore stone railway track, Thokottu; ರೈಲು...
20-10-24 11:47 am
Belagavi Cash Seized, crime, Police: ಮಹಾರಾಷ್ಟ...
19-10-24 02:38 pm
ಸಿಸಿಬಿ ಪೊಲೀಸರ ಭರ್ಜರಿ ಬೇಟೆ ; ಪೋಸ್ಟ್ ಆಫೀಸ್ನಲ್ಲ...
18-10-24 03:11 pm