ಬ್ರೇಕಿಂಗ್ ನ್ಯೂಸ್
16-05-21 05:41 pm Udupi Correspondent ಕರಾವಳಿ
ಉಡುಪಿ, ಮೇ 16: ಕರಾವಳಿಗೆ ಅಪ್ಪಳಿಸಿರುವ ತೌಕ್ತೆ ಚಂಡಮಾರುತವನ್ನು ಸಮರ್ಥವಾಗಿ ಎದುರಿಸಿ, ಚಂಡಮಾರುತದಿಂದ ಯಾವುದೇ ಅಪಾಯ ಆಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಉಡುಪಿ ಜಿಲ್ಲಾ ಉಸ್ತುವಾರಿ ಹಾಗೂ ರಾಜ್ಯ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಸೂಚನೆ ನೀಡಿದ್ದಾರೆ.
ಬೆಂಗಳೂರಿನಿಂದ ವೀಡಿಯೋ ಕಾನ್ಫರೆನ್ಸ್ ಮೂಲಕ ಉಡುಪಿ ಜಿಲ್ಲಾಡಳಿತ ಹಾಗೂ ಜನಪ್ರತಿನಿಧಿಗಳ ಜತೆ ನಡೆಸಿದ ಸಭೆಯಲ್ಲಿ ಅವರು ಈ ಸೂಚನೆ ನೀಡಿದರು.

ಇದೇ ವೇಳೆ, ಎಸ್ಡಿಆರ್ಎಫ್ ನಿಧಿಯಿಂದ ನೀಡಲಾಗಿರುವ 60 ಕೋಟಿ ಹಣವನ್ನು ಸಮರ್ಪಕ ಬಳಕೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.
ತೌಕ್ತೆ ಚಂಡಮಾರುತದ ಪ್ರಭಾವ ನಾಲ್ಕು ದಿನ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಕರಾವಳಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಬೇಕು. ತಗ್ಗು ಪ್ರದೇಶದಿಂದ ಸಾರ್ವಜನಿಕರನ್ನು ಸ್ಥಳಾಂತರಗೊಳಿಸಿ. ಸ್ಥಳಾಂತರಗೊಂಡ ಜನರಿಗೆ ಆಹಾರ ಮತ್ತು ಇತರೆ ವಸ್ತುಗಳನ್ನು ಪೂರೈಸುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಕರಾವಳಿಗೆ ಹೊಂದಿಕೊಂಡಿರುವ ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ ಜಿಲ್ಲೆಯಲ್ಲಿ ಚಂಡಮಾರುತದ ಪ್ರಭಾವ ಉಂಟಾಗುವ ಸಾಧ್ಯತೆ ಇದೆ. ಯಾವುದೇ ರೀತಿಯ ಅನಾಹುತ, ಆಪತ್ತು ಎದುರಾದರೂ ಅದನ್ನು ನಿವಾರಿಸಲು ಸಿದ್ಧತೆ ಮಾಡಿಕೊಳ್ಳಿ. ತೌಕ್ತೆ ಚಂಡಮಾರುತದ ಬಗ್ಗೆ ಎಚ್ಚರ ಇರಲಿ ಎಂದರು.
ಇದಲ್ಲದೆ, ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ಹೆಚ್ಚು ಆದ್ಯತೆ ನೀಡಿ. ಖಾಸಗಿ ಆಸ್ಪತ್ರೆಗಳಿಂದ ಸರಕಾರಕ್ಕೆ ಬರಬೇಕಾದ ಬೆಡ್ಗಳನ್ನು ಪಡೆಯಿರಿ. ಆಕ್ಸಿಜನ್ ಪೂರೈಕೆಯನ್ನು ಸಮರ್ಪಕವಾಗಿ ಕೈಗೊಳ್ಳಿ. ಆಮ್ಲಜನಕವನ್ನು ಅಗತ್ಯಕ್ಕೆ ಅನುಗುಣವಾಗಿ ಬಳಕೆ ಮಾಡಿ. ಚಿಕಿತ್ಸೆ ಪಡೆದು ಗುಣಮುಖರಾಗಿರುವ ಸೋಂಕಿತರನ್ನು ಕೋವಿಡ್ ಕೇರ್ ಸೆಂಟರ್ಗೆ ದಾಖಲಿಸಿ. ತೆರವಾದ ಐಸಿಯು ಮತ್ತು ಎಚ್ಡಿಯು ಬೆಡ್ ಗಳನ್ನು ಗಂಭೀರವಾಗಿ ಸೋಂಕಿತಗೊಂಡ ವ್ಯಕ್ತಿಗಳಿಗೆ ಬಳಸಿಕೊಳ್ಳಿ ಎಂದವರು ಸೂಚಿಸಿದರು.
ಸಭೆಯಲ್ಲಿ ಸಂಸದೆ ಶೋಭಾ ಕರಂದ್ಲಾಜೆ, ಶಾಸಕರಾದ ಸುನಿಲ್ಕುಮರ್, ಲಾಲಾಜಿ ಆರ್ ಮೆಂಡನ್, ಜಿಲ್ಲಾದಿಕಾರಿ ಜಿ.ಜಗದೀಶ್, ಜಿಪಂ ಸಿಇಓ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು, ಡಿಹೆಚ್ಓ ಡಾ.ಸುಧೀರ್ಚಂದ್ರ ಸೂಡಾ ಮತ್ತಿತರರು ಉಪಸ್ಥಿತರಿದ್ದರು.
Karnatakas Home Minister Basavaraj Bommai holds review meeting online over Cyclone Tauktae in Udupi. Home Minister a meeting with administrator of Udupi to check preparedness ahead of the cyclone.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 08:45 pm
HK News Staffer
ಪುತ್ತೂರು ಜನಸೇವಾ ಕೇಂದ್ರ ಗಲಾಟೆ ಪ್ರಕರಣ: ಪೊಲೀಸರ ಕ...
08-09-26 02:26 pm
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm