ಬ್ರೇಕಿಂಗ್ ನ್ಯೂಸ್
16-05-21 08:41 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಎಂಆರ್ ಪಿಎಲ್ ಗೆ ಸೇರಿದ ಮತ್ತೊಂದು ಟಗ್ ನಲ್ಲಿರುವ ಕಾರ್ಮಿಕರ ರಕ್ಷಣೆಗೆ ಭಾರತೀಯ ನೌಕಾಪಡೆಯಿಂದ ಹೆಲಿಕಾಪ್ಟರ್ ಬಳಸಲು ಜಿಲ್ಲಾಡಳಿತ ಮುಂದಾಗಿದೆ. ರಾಜ್ಯ ಸರಕಾರದ ಮೂಲಕ ನೌಕಾಪಡೆಯ ನೆರವು ಪಡೆಯಲಾಗಿದ್ದು, ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯ ನಡೆಸಲಾಗುವುದು ಎಂದು ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾಹಿತಿ ನೀಡಿದ್ದಾರೆ.
ಕೋರಮಂಡಲ್ ಹೆಸರಿನ ಟಗ್ ಎನ್ಎಂಪಿಟಿ ಬಂದರು ವ್ಯಾಪ್ತಿಯಲ್ಲಿ ಎಂಆರ್ ಪಿಎಲ್ ನಿಂದ ಕಚ್ಚಾ ತೈಲ ಸಾಗಾಟದ ಕೆಲಸ ಮಾಡಲು ಗುತ್ತಿಗೆ ಪಡೆದಿತ್ತು. ಆದರೆ, ಇದರ ಗುತ್ತಿಗೆ ಕಾರ್ಯ ಮುಗಿದಿದ್ದರೂ ಸಮುದ್ರ ಮಧ್ಯೆ ಲಂಗರು ಹಾಕಿದ್ದರಿಂದ ಚಂಡಮಾರುತಕ್ಕೆ ಸಿಲುಕಿತ್ತು. ಒಂಬತ್ತು ಸಿಬಂದಿಗಳಿದ್ದ ಕೋರಮಂಡಲ್ ಟಗ್ ನೀರಿನಲ್ಲಿ ಗಾಳಿಯೊಂದಿಗೆ ಚಲಿಸುತ್ತಿದ್ದು ಶನಿವಾರ ರಾತ್ರಿಯಿಂದ ಒಂದೂವರೆ ಮೈಲ್ ದೂರಕ್ಕೆ ಚಲಿಸಿದೆ. ಸದ್ಯ ಪಡುಬಿದ್ರಿ ಬಳಿಯಿಂದ 5 ಮೈಲ್ ದೂರದಲ್ಲಿರುವ ಸಮುದ್ರ ಮಧ್ಯದ ಮೂಲ್ಕಿ ರಾಕ್ ಎಂಬ ಜಾಗದಲ್ಲಿ ಟಗ್ ಸಿಲುಕಿದೆ ಎನ್ನುವ ಮಾಹಿತಿಗಳಿವೆ.


ಕೋಸ್ಟ್ ಗಾರ್ಡ್ ನವರು ಅರ್ಧ ಕಿಮೀ ಅಂತರದಲ್ಲಿ ಟಗ್ ಮತ್ತು ಕಾರ್ಮಿಕರ ಬಗ್ಗೆ ನಿಗಾ ಇಟ್ಟಿದ್ದಾರೆ. ಆದರೆ, ಭಾರೀ ಗಾಳಿ ಬೀಸುತ್ತಿರುವುದು ಮತ್ತು ಐದಾರು ಮೀಟರ್ ಎತ್ತರಕ್ಕೆ ಅಲೆಗಳು ಏಳುತ್ತಿರುವುದರಿಂದ ಟಗ್ ಬಳಿ ಹೋಗುವುದು ಸಾಧ್ಯವಾಗದೆ ಹವಾಮಾನ ಸರಿಯಾಗಲು ಕಾಯುತ್ತಿದ್ದಾರೆ. ಹವಾಮಾನ ಸರಿಯಾದ ಕೂಡಲೇ ಗೋವಾದಿಂದ ಹೆಲಿಕಾಪ್ಟರ್ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸಲಾಗುವುದು. ಈ ಬಗ್ಗೆ ಈಗಾಗ್ಲೇ ರಾಜ್ಯದ ಮುಖ್ಯಮಂತ್ರಿ ಕಚೇರಿಯಿಂದ ಅನುಮತಿ ಪಡೆದು, ನೌಕಾಪಡೆಯಿಂದ ನೆರವು ಕೇಳಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಮೂಲ್ಕಿ ರಾಕ್ ನಲ್ಲಿ ಇರುವ ಬಂಡೆಕಲ್ಲಿಗೆ ಏಂಕರ್ ಹಾಕಿ ಟಗ್ ಅನ್ನು ನಿಯಂತ್ರಣಕ್ಕೆ ತರಲಾಗಿದೆ. ಅದರಲ್ಲಿರುವ ಒಂಬತ್ತು ಮಂದಿ ಕಾರ್ಮಿಕರನ್ನು ಕೂಡಲೇ ರಕ್ಷಣೆ ಮಾಡಲು ಆದ್ಯತೆ ನೀಡಲಾಗಿದೆ. ಇದೇ ವೇಳೆ, ಎನ್ಎಂಪಿಟಿ ಬಂದರು ಅಥವಾ ಎಂಆರ್ ಪಿಎಲ್ ಅಧಿಕಾರಿಗಳ ಜೊತೆ ಜಿಲ್ಲಾಡಳಿತದಿಂದ ಸಭೆ ನಡೆಸಲಾಗಿದೆ. ಯಾಕಾಗಿ ಟಗ್ ಸಮುದ್ರ ಮಧ್ಯೆ ಉಳಿದುಕೊಂಡಿತ್ತು ಎನ್ನುವುದರ ಬಗ್ಗೆ ವರದಿ ಕೇಳಿದ್ದೇವೆ. ಆ ಬಗ್ಗೆ ಮಾಹಿತಿ ಪಡೆದು ಸರಕಾರಕ್ಕೆ ವರದಿ ನೀಡುವುದರ ಜೊತೆಗೆ ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ರಾಜೇಂದ್ರ ತಿಳಿಸಿದ್ದಾರೆ.
ಪಡುಬಿದ್ರಿ ಬಳಿ ಅಪಾಯಕ್ಕೀಡಾದ ಮತ್ತೊಂದು ಟಗ್ ; ಎನ್ಎಂಪಿಟಿ ಅಧಿಕಾರಿಗಳ ನಿರ್ಲಕ್ಷ್ಯದಿಂದ ಕಾರ್ಮಿಕರಿಗೆ ಆಪತ್ತು !
ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
Mangalore MRPL Stranded tugboat found near Mulki Rock helicopter rescue operation to be done if weather conditions are clear said Mangalore DC DR Rajendra Kumar.
11-07-26 01:48 pm
HK News Staffer
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:12 pm
ರಾಮಮಂದಿರದ ಶ್ರೇಯಸ್ಸು ಪಡೆದವರೇ, ದೇಣಿಗೆ ಕಳ್ಳತನದ ಹ...
10-07-26 07:42 pm
ಸಚಿವ ಸಂಪುಟ ವಿಸ್ತರಣೆಯಾದರೆ ಸರ್ಕಾರ ಸ್ವಲ್ಪಮಟ್ಟಿಗೆ...
09-07-26 02:56 pm
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
11-07-26 06:32 pm
HK News Staffer
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
ಮೋದಿಯನ್ನ ಪ್ರಶ್ನಿಸುವ ಕೈ ಮುಖಂಡ ಅಭಿಷೇಕ್ ಮೂಡಾ ಭ್ರ...
09-07-26 10:47 pm
11-07-26 08:40 pm
HK News Staffer
ಸಣ್ಣ ಗಾಯಕ್ಕೆ ಚಿಕಿತ್ಸೆ, ಆದರೆ ಮರಳಲಿಲ್ಲ ಪ್ರಜ್ಞೆ...
11-07-26 08:37 pm
ಮಂಗಳೂರು- ವಿಟ್ಲ ಖಾಸಗಿ ಬಸ್ಸಿನಲ್ಲಿ ವಿದ್ಯಾರ್ಥಿನಿಯ...
11-07-26 04:28 pm
ಮಾಜಿ ಸಾರಿಗೆ ಅಧಿಕಾರಿ ಮನೆಯಲ್ಲಿ ಕುಬೇರನ ಖಜಾನೆ ! ಗ...
10-07-26 10:14 pm
ಷೇರು ಮಾರ್ಕೆಟ್ ಹೆಸ್ರಲ್ಲಿ 10 ಲಕ್ಷ ರೂ. ವಂಚನೆ ; ಮ...
10-07-26 08:22 pm