ಬ್ರೇಕಿಂಗ್ ನ್ಯೂಸ್
16-05-21 09:53 pm Mangaluru Correspondent ಕರಾವಳಿ
ಮಂಗಳೂರು, ಮೇ 16: ಸಮುದ್ರ ಮಧ್ಯೆ ಸಿಕ್ಕಿಬಿದ್ದು ನೀರುಪಾಲಾಗಿದ್ದ ಐಎನ್ಎಸ್ ಎಲಯನ್ಸ್ ಎನ್ನುವ ಟಗ್ ನಲ್ಲಿದ್ದ ಮತ್ತೊಬ್ಬ ವ್ಯಕ್ತಿ ಪವಾಡ ಸದೃಶ ಸಮುದ್ರದಲ್ಲಿ ಈಜಾಡಿ ಬದುಕಿ ಬಂದಿದ್ದಾರೆ ಎನ್ನುವ ಮಾಹಿತಿ ಸಿಕ್ಕಿದೆ. ಇದನ್ನು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಸ್ಪಷ್ಟ ಪಡಿಸಿದ್ದಾರೆ.
ಎಲಯನ್ಸ್ ಟಗ್ ನಲ್ಲಿ ಎಂಟು ಜನರಿದ್ದು, ಅದರಲ್ಲಿದ್ದ ಇಬ್ಬರು ಟೈರಿನಲ್ಲಿ ಈಜುತ್ತಾ ಶನಿವಾರ ಉಡುಪಿ ಬಳಿಯ ಸಮುದ್ರದಲ್ಲಿ ದಡ ಸೇರಿದ್ದರು. ಇಂದು ಮತ್ತೊಬ್ಬ ಅದೇ ರೀತಿ ಈಜುತ್ತಲೇ ದಡ ಸೇರಿದ್ದಾನೆ. ಶನಿವಾರ ಒಬ್ಬನ ಶವ ಪಡುಬಿದ್ರಿ ಬಳಿ ಸಿಕ್ಕಿದ್ದರೆ, ಇಂದು ಮತ್ತೊಂದು ಶವ ಸಿಕ್ಕಿದೆ. ಇನ್ನೂ ಮೂವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆದಿದೆ. ಬದುಕಿ ಬಂದ ಮೂವರು ಮಲ್ಪೆ ಮತ್ತು ಉಡುಪಿಯಲ್ಲಿ ಆಸ್ಪತ್ರೆಯಲ್ಲಿದ್ದು ಸುರಕ್ಷಿತವಾಗಿದ್ದಾರೆ. ಇದೇ ವೇಳೆ, ಎಲಯನ್ಸ್ ಟಗ್ ಪಡುಬಿದ್ರಿ ಸಮುದ್ರದಲ್ಲಿ ದಡಕ್ಕೆ ಬಂದಿದ್ದು ಅದರಲ್ಲಿ ಯಾರಾದ್ರೂ ಸಿಕ್ಕಿಕೊಂಡಿದ್ದಾರೆಯೇ ಎಂದು ಕೋಸ್ಟ್ ಗಾರ್ಡ್ ಸಿಬಂದಿ ತನಿಖೆ ನಡೆಸುತ್ತಿದೆ ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದ್ದಾರೆ.

ಮಂಗಳೂರಿನ ಎಂಆರ್ ಪಿಎಲ್ ನಲ್ಲಿ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುವ ಅಲಯನ್ಸ್ ಟಗ್ ಶುಕ್ರವಾರ ಕೆಲಸ ಮುಗಿಸಿ, ನಿರ್ಗಮಿಸುವ ಹಾದಿಯಲ್ಲಿತ್ತು. ಚಂಡಮಾರುತ ಹಿನ್ನೆಲೆಯಲ್ಲಿ ಎನ್ಎಂಪಿಟಿ ಬಂದರಿನಿಂದ ದಡಕ್ಕೆ ಬರುವಂತೆ ಸೂಚನೆ ನೀಡಲಾಗಿತ್ತೆಂದು ಅಲ್ಲಿನ ಅಧಿಕಾರಿಗಳು ಹೇಳುತ್ತಿದ್ದಾರೆ. ಆದರೆ, ಅವರು ಯಾಕೆ ಬಂದಿರಲಿಲ್ಲ ಎನ್ನುವುದು ಗೊತ್ತಾಗಿಲ್ಲ. ಈ ಬಗ್ಗೆ ಎನ್ಎಂಪಿಟಿ ಮತ್ತು ಎಂಆರ್ ಪಿಎಲ್ ಅಧಿಕಾರಿಗಳಿಂದ ವರದಿ ಕೇಳಿದ್ದೇನೆ. ನಿರ್ಲಕ್ಷ್ಯದಿಂದ ಈ ಘಟನೆ ಆಗಿದೆಯೋ ಎನ್ನುವ ಬಗ್ಗೆ ರಾಜ್ಯ ಸರಕಾರಕ್ಕೆ ವರದಿ ನೀಡಲಿದ್ದೇನೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
READ: ಎಂಆರ್ ಪಿಎಲ್ ಟಗ್ ಬೋಟ್ ಸಮುದ್ರ ಮಧ್ಯೆ ಪಲ್ಟಿ ; ಆರು ಮಂದಿ ನಾಪತ್ತೆ , ಒಬ್ಬನ ಶವ ಪತ್ತೆ , ಇಬ್ಬರು ಪವಾಡಸದೃಶ ಪಾರು !
MRPL Tug boat capsized due to Cyclone Tauktae one Missing Fishermen swims ashore says Mangalore Dc Dr Rajendra Kumar. The search operation is going on for the missing three.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 11:31 am
Mangalore Correspondent
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm
ಅಂದು ರೀಟಾ, ಇಂದು ಸಾದಿಯಾ! ಮದುವೆ ಬಳಿಕ ಬಲವಂತದ ಮತ...
31-01-26 01:33 pm