ಲೈನ್ ದುರಸ್ತಿ ಪಡಿಸುತ್ತಿದ್ದ ವೇಳೆ ವಿದ್ಯುತ್ ಆಘಾತ ; ಮೆಸ್ಕಾಂ ಸಿಬಂದಿ ಮೃತ್ಯು

17-05-21 11:42 am       Mangalore Correspondent   ಕರಾವಳಿ

ಕರ್ತವ್ಯ ನಿರತ ಪವರ್ ಮೇನ್ ಒಬ್ಬರು ವಿದ್ಯುತ್ ಶಾಕ್ ಒಳಗಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಉಪ್ಪಿನಂಗಡಿ, ಮೇ 17 :  ವಿದ್ಯುತ್ ಕಂಬದಲ್ಲಿ ಕೆಲಸ ಮಾಡುತ್ತಿದ್ದ ಸಂದರ್ಭ ಪವರ್ ಮೇನ್ ಒಬ್ಬರು ವಿದ್ಯುತ್ ಶಾಕ್ ಒಳಗಾಗಿ ಸಾವನ್ನಪ್ಪಿದ ಘಟನೆ ಉಪ್ಪಿನಂಗಡಿ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. 

ಕರ್ತವ್ಯ ನಿರತ ಕಲ್ಲೇರಿ ಸೆಕ್ಷನ್ ಆಫೀಸರ್ ಮೆಸ್ಕಾಂ ಸಿಬಂದಿ ವಿಕಾಸ್ ಮೃತಪಟ್ಟವರು. ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಪಿಂಡಿಕಲ್ಲು ಎಂಬಲ್ಲಿ ಘಟನೆ ಸಂಭವಿಸಿದೆ. ಭಾರೀ ಮಳೆಯ ಕಾರಣ ಈ ಭಾಗದಲ್ಲಿ ಕಳೆದ ಎರಡು ದಿನದಿಂದ ವಿದ್ಯುತ್ ಅಡಚಣೆ ಉಂಟಾಗಿತ್ತು.

ವಿದ್ಯುತ್ ಸರಬರಾಜು ಸರಿಪಡಿಸುವ ಸಂದರ್ಭದಲ್ಲಿ ದುರ್ಘಟನೆಯ ಸಂಭವಿಸಿದೆ. ಘಟನಾ ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.

ಮೂಲತಃ ಬಿಜಾಪುರ ನಿವಾಸಿಯಾಗಿರುವ ಇವರು ಕಳೆದ 5 ವರ್ಷಗಳಿಂದ ಮೆಸ್ಕಾಂ  ಉದ್ಯೋಗಿಯಾಗಿದ್ದು, ಕಲ್ಲೇರಿ ವಲಯ ಮೆಸ್ಕಾಂನಲ್ಲಿ ಪವರ್ ಮ್ಯಾನ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಮೃತ ವಿಕಾಸ್ ವಿವಾಹಿತರಾಗಿದ್ದು, ಪತ್ನಿ ಹಾಗೂ ಒಂದು ತಿಂಗಳು ಪ್ರಾಯದ ಪುಟ್ಟ ಮಗುವನ್ನು ಅಗಲಿದ್ದಾರೆ.