ಬ್ರೇಕಿಂಗ್ ನ್ಯೂಸ್
17-05-21 10:20 pm Mangaluru Correspondent ಕರಾವಳಿ
ಮಂಗಳೂರು, ಮೇ 17: ರಾಜ್ಯದಲ್ಲಿ ಕೊರೊನಾ ಸ್ಥಿತಿ ವಿಪರೀತಕ್ಕೆ ಹೋಗುತ್ತಿದ್ದು ರಾಷ್ಟ್ರೀಯ ವಿಪತ್ತಾಗಿ ದೇಶಕ್ಕೆ ಬೆದರಿಕೆಯಾಗಿ ಪರಿಣಮಿಸಿದೆ. ಆದರೆ, ಇದನ್ನು ನಿರ್ವಹಿಸಲು ಕೇಂದ್ರ ಸರ್ಕಾರ ಸಂಪೂರ್ಣ ವಿಫಲವಾಗಿದೆ. ರಾಜ್ಯ ಸರ್ಕಾರ ಕೂಡ ಕೇಂದ್ರದಿಂದ ಪರಿಹಾರ ಪಡೆದುಕೊಳ್ಳುವಲ್ಲಿ ವಿಫಲವಾಗಿದ್ದು ಸಾಮಾನ್ಯ ಜನರ ಸ್ಥಿತಿ ಶೋಚನೀಯವಾಗಿದೆ ಎಂದು ಮಾಜಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

ಮಂಗಳೂರಿನ ಮಲ್ಲಿಕಟ್ಟೆಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಜನರಿಗೆ ಇವತ್ತು ಲಸಿಕೆಯೂ ಸಿಗುತ್ತಿಲ್ಲ. ಔಷಧಿಯೂ ಸಿಗುತ್ತಿಲ್ಲ. ಕಳೆದ ಬಾರಿಗೆ ಕೊರೊನಾ ಹೊಸತಾಗಿತ್ತು. ಆದರೆ, ಒಂದು ವರ್ಷ ಕಳೆದರೂ, ನಿರ್ವಹಣೆ ಮಾಡಲು ಸಾಧ್ಯವಾಗಿಲ್ಲ ಅಂದ್ರೆ ಇವರ ವೈಫಲ್ಯ ಅಲ್ಲದೆ ಮತ್ತೇನು ? ಇಲ್ಲೊಬ್ಬರು ಲೋಕಸಭಾ ಸದಸ್ಯರಿದ್ದಾರೆ. ಬಾಲಿಶವಾಗಿ ಹೇಳಿಕೆ ನೀಡುವುದನ್ನೇ ಕಾಯಕ ಮಾಡಿಕೊಂಡಿದ್ದಾರೆ. ಕೊರೊನಾ ಹೆಚ್ಚಲು ಕಾಂಗ್ರೆಸ್ ಕಾರಣವಂತೆ. ಲಸಿಕೆಯನ್ನು ಜನರಿಗೆ ಕೊಡುವಂತದ್ದು ಅಧಿಕಾರದಲ್ಲಿ ಯಾರಿದ್ದಾರೆ ಅವರ ಕೆಲಸ. ಈಗ ಲಸಿಕೆಯೇ ಸಿಗಲ್ಲ. ಮತ್ತೊಂದೆಡೆ ಮೊದಲ ಡೋಸ್ ಕೊಟ್ಟವರಿಗೆ ಎರಡನೇ ಡೋಸ್ ಪಡೆಯಲು ಸಮಯ ಬಂದಿದ್ದರೆ, ಯಾವಾಗ ಸಿಗಲಿದೆ ಎಂದು ಸಿಎಂಗೇ ಗೊತ್ತಿಲ್ಲದಾಗಿದೆ. ಆಕ್ಸಿಜನ್, ಐಸಿಯು, ಚಿಕಿತ್ಸೆ ಇಲ್ಲದೇ ಜನರು ಸಾಯುತ್ತಿದ್ದಾರೆ. ಬಿಜೆಪಿ ಸರಕಾರ ರಾಜ್ಯದಲ್ಲಿ ಕೆಟ್ಟ ಸ್ಥಿತಿಯನ್ನು ತಂದಿಟ್ಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಕೊರೊನಾ ಪೀಡಿತರಾಗಿ ಮನೆ, ಆಸ್ತಿ ಕಳಕೊಂಡವರಿಗೆ ಪ್ಯಾಕೇಜ್ ಕೊಡಬೇಕು. ಅದರಲ್ಲೂ ಇಂತಹ ಮಂದಿಗೆ ಪ್ಯಾಕೇಜ್ ಕೊಡಲೇಬೇಕು ಎಂದು ಆಗ್ರಹಿಸಿದ ರಮಾನಾಥ ರೈ, ಇವತ್ತು ಕಾಂಗ್ರೆಸ್ ಇದ್ದಿದ್ದರೆ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆ ಇರುತ್ತಿತ್ತು. ಮನೆ ಮನೆಗೆ ಕೊರೊನಾ ಕಿಟ್ ಹೋಗುತ್ತಿತ್ತು ಎಂದು ಸವಾಲೆಸೆದರು.
ಕೊರೊನಾ ನಿರ್ವಹಣೆಯಿಂದ ವೈಫಲ್ಯಕ್ಕೀಡಾಗಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಪ್ರಧಾನಿ ಮುಜುಗರಕ್ಕೀಡಾಗಿದ್ದಾರೆ. ಪ್ರಧಾನಿಯವರ ಇಮೇಜನ್ನು ಹೇಗೆ ಸೇವ್ ಮಾಡುವುದು ಅಂತಾ ಬಿಜೆಪಿಯವರು ಯೋಚಿಸುತ್ತಿದ್ದಾರೆಯೇ ವಿನಾ ಜನರ ಪ್ರಾಣ ಕಾಪಾಡುವ ಬಗ್ಗೆ ಯಾವುದೇ ಯೋಚನೆ ಅವರಿಗಿಲ್ಲ. ಜನರ ಬಗ್ಗೆ ಕನಿಷ್ಠ ಕಾಳಜಿ ಇರುತ್ತಿದ್ದರೆ ಇಷ್ಟು ನಿರ್ಲಕ್ಷ್ಯ ಮಾಡುತ್ತಿರಲಿಲ್ಲ ಎಂದು ಕಿಡಿಕಾರಿದರು.
The state and union government have completely failed in handling the pandemic, said district Congress president Harish Kumar.
03-05-26 01:30 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ; ರಾತ್ರಿಯ...
03-05-26 12:34 pm
2028ರ ಅಸೆಂಬ್ಲಿಯತ್ತ ಕಾಂಗ್ರೆಸ್ ಹೈಕಮಾಂಡ್ ದೃಷ್ಟಿ...
02-05-26 06:35 pm
ತುಮಕೂರಿನಲ್ಲಿ ವಾರದ ಅಂತರದಲ್ಲಿ 44 ನವಿಲು ಸಾವು ; ಬ...
02-05-26 04:48 pm
ಮಲ್ಲಿಕಾnರ್ಜುನ ಖರ್ಗೆ ಸಿಎಂ ಬದಲಾವಣೆ ಇಲ್ಲ ಎಂದಿರುವ...
01-05-26 08:33 pm
03-05-26 05:18 pm
HK News Staffer
ಯುದ್ಧ ನಮ್ಮ ಆಯ್ಕೆಯಲ್ಲ, ಹೇರಲ್ಪಟ್ಟದ್ದು.. ; ಇರಾನ್...
03-05-26 02:35 pm
ದೇಶಾದ್ಯಂತ ಮೊಬೈಲ್ಗಳಿಗೆ ಎಚ್ಚರಿಕೆ ಧ್ವನಿ; ‘ಸೆಲ್...
02-05-26 08:26 pm
ಆನ್ಲೈನ್ ಗೇಮ್ ವಿರುದ್ಧ ಕೇಂದ್ರ ಗದಾಪ್ರಹಾರ ; ಮಕ್ಕಳ...
02-05-26 11:18 am
Actor Vijay, Election, Poll: ಚುನಾವಣೋತ್ತರ ಸಮೀಕ...
29-04-26 11:18 pm
02-05-26 11:05 pm
Mangalore Correspondent
ತುಂಬೆ ಅಣೆಕಟ್ಟಿನಲ್ಲಿ ಕೃತಕ ಅಭಾವ ಸೃಷ್ಟಿ ; ಸ್ಥಳಕ್...
02-05-26 08:58 pm
Mangalore Accident: ಬಜತ್ತೂರಿನಲ್ಲಿ ಬೈಕ್ - ಲಾರಿ...
29-04-26 11:05 pm
ತಾಲೂಕು ಆಸ್ಪತ್ರೆ ಖಾಸಗಿ ವಶಕ್ಕೆ ; ಆರೋಗ್ಯ ಸಚಿವರ ಉ...
28-04-26 09:18 pm
ASI Assault Case, Mangalore: ಎಎಸ್ಐ ಮೇಲೆ ಹಲ್ಲೆ...
28-04-26 01:35 pm
03-05-26 09:19 pm
HK News Staffer
ವಿಶೇಷ ಪೂಜೆಗೆ ಬೆತ್ತಲೆ ಫೋಟೊ ಕಳಿಸು, 30 ಲಕ್ಷ ಕೊಡ್...
03-05-26 02:31 pm
ಮಕ್ಕಳನ್ನು ರಕ್ಷಿಸಲು ಹೋಗಿ 2 ತಿಂಗಳ ಗರ್ಭಿಣಿ ಜಲಸಮಾ...
02-05-26 08:35 pm
ಕುಕ್ಕರ್ ಬಾಂಬರ್ ಗೆ 10 ವರ್ಷ ಶಿಕ್ಷೆ ; ಎನ್ಐಎ ಅಧಿಕ...
02-05-26 12:19 pm
ಕೋರ್ಟ್ ಜಟಾಪಟಿ ಬಳಿಕ ಕುದ್ರೋಳಿ ಕ್ಷೇತ್ರಕ್ಕೆ ಹೊಸ ಕ...
01-05-26 09:24 pm