ಬ್ರೇಕಿಂಗ್ ನ್ಯೂಸ್
17-05-21 10:30 pm Udupi Correspondent ಕರಾವಳಿ
ಉಡುಪಿ, ಮೇ 17: ಕೊರೊನಾ ಕಾರಣದಿಂದ ಶಾಲೆಯಿಂದ ಹೊರಗುಳಿದಿರುವ ಮಕ್ಕಳು ಮೊಬೈಲ್, ವಿಡಿಯೋ ಗೇಮ್ ಹುಚ್ಚಿಗೆ ಬಿದ್ದು ಎಷ್ಟರ ಮಟ್ಟಿಗೆ ಮಾನಸಿಕ ಸ್ವಾಸ್ಥ್ಯ ಕಳಕೊಳ್ಳುತ್ತಿದ್ದಾರೆ ಎಂಬುದಕ್ಕೆ ಈ ಘಟನೆ ನಿದರ್ಶನ. ಇಲ್ಲೊಬ್ಬ 16 ವರ್ಷದ ಹುಡುಗನೊಬ್ಬ ತಂದೆ, ತಾಯಿ ಮೊಬೈಲ್ ನೋಡುತ್ತಿದ್ದುದಕ್ಕೆ ಗದರಿದರೆಂದು ಮನೆಯಿಂದ ಸ್ವಲ್ಪ ದೂರವಿರುವ ಸಾರ್ವಜನಿಕ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾಪು ತಾಲೂಕಿನಲ್ಲಿ ನಡೆದಿದೆ.

ಕಾಪು ತಾಲೂಕಿನ ಮಣಿಪುರ ಗ್ರಾಮದಲ್ಲಿ ಘಟನೆ ನಡೆದಿದ್ದು, ಸುಹೇಬತ್ ಅಸ್ಲಾಮಿಯಾ(16) ಮೃತ ದುರಂತ ಸಾವನ್ನಪ್ಪಿದ ಬಾಲಕ. ಈ ಬಗ್ಗೆ ಹುಡುಗನ ಹೆತ್ತವರಾದ ಜುಬೇದಾ ಮತ್ತು ಶಬಾನ್ ದಂಪತಿ ಕಾಪು ಠಾಣೆಗೆ ದೂರು ನೀಡಿದ್ದಾರೆ. ಅಸ್ಲಾಮಿಯಾ ದಿನವಿಡೀ ಮೊಬೈಲಿನಲ್ಲಿ ವಿಡಿಯೋ ಗೇಮ್ ಆಡುತ್ತಿದ್ದುದಲ್ಲದೆ ತಂದೆ, ತಾಯಿ ಮಾತು ಕೇಳುತ್ತಿರಲಿಲ್ಲ. ಮೇ 15ರಂದು ಸಂಜೆ ಮೊಬೈಲ್ ಒತ್ತುತ್ತಿದ್ದ ಹುಡುಗನಿಗೆ ತಾಯಿ ಗದರಿದ್ದು, ಗೇಮ್ಸ್ ಆಡುವುದು ಬೇಡವೆಂದು ಹೇಳಿ ಮೊಬೈಲ್ ಕಿತ್ತುಕೊಂಡಿದ್ದರು. ಇದರಿಂದ ಸಿಟ್ಟಿಗೆದ್ದ ಹುಡುಗ, ತಾಯಿ ಬಳಿ ಕೋಪದಿಂದ ಮನೆಯ ಮೂಲೆಯಲ್ಲಿ ಕುಳಿತುಕೊಂಡಿದ್ದ.
ಆನಂತರ ಹುಡುಗನ ತಾಯಿ ನಮಾಜ್ ಮಾಡಲೆಂದು ಕೋಣೆಗೆ ತೆರಳಿದ್ದರೆ, ತಂದೆ ಬಾತ್ ರೂಮಿಗೆ ತೆರಳಿದ್ದರು. ನಮಾಜ್ ಮುಗಿಸಿದ ಬಳಿಕ ತಾಯಿ ಹೊರಬಂದಾಗ ಹುಡುಗ ಮನೆಯಲ್ಲಿ ಇರಲಿಲ್ಲ. ಬಳಿಕ ತಂದೆ, ತಾಯಿ ಇಬ್ಬರೂ ಮನೆ ಪರಿಸರದಲ್ಲಿ ಹುಡುಕಾಡಿದ್ದು, ಹೊರಗಡೆ ತೆರಳಿದಾಗ 200 ಮೀಟರ್ ದೂರದಲ್ಲಿ ಬಾವಿ ಬಳಿ ಜನ ಸೇರಿರುವುದು ಕಂಡುಬಂದಿದೆ. ಅಲ್ಲಿ ತೆರಳಿದಾಗ ಹುಡುಗ ಬಾವಿಗೆ ಹಾರಿರುವುದು ತಿಳಿದುಬಂದಿದ್ದು ಬಳಿಕ ಫೈರ್ ಸರ್ವಿಸ್ ನವರು ಬಂದು ಹುಡುಗನನ್ನು ಮೇಲೆತ್ತಿದ್ದು ಅಷ್ಟರಲ್ಲಿ ಸಾವು ಕಂಡಿದ್ದಾನೆ. ಕಾಪು ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
In an incident that highlights how mobile gaming addiction has taken over the lives of youngsters, a 16-year-old boy ended his life after being rebuked by her parents for playing video games on mobile phone. The incident occurred on the evening of May 15 at Manipur Kote, Manipura village, Udupi.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm