ಬ್ರೇಕಿಂಗ್ ನ್ಯೂಸ್
18-05-21 12:25 pm Mangalore Correspondent ಕರಾವಳಿ
ಮಂಗಳೂರು, ಮೇ 18: ಮಂಗಳೂರಿನ ದ.ಕ. ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಪ್ರೊಬೇಶನರಿ ಪಿಎಸ್ಐ ಆಗಿ ಕರ್ತವ್ಯದಲ್ಲಿದ್ದ ಮಹಿಳಾ ಅಧಿಕಾರಿಯೊಬ್ಬರು ಕೋವಿಡ್ ಸೋಂಕಿಗೆ ತುತ್ತಾಗಿ ಸಾವು ಕಂಡಿದ್ದಾರೆ.
ಕೋಲಾರ ಮೂಲದ ಶ್ಯಾಮಿಲಿ (24) ಮೃತಪಟ್ಟ ಅಧಿಕಾರಿ. ಕೊರೊನಾ ಸೋಂಕಿಗೆ ಬಲಿಯಾದ ಅತಿ ಕಿರಿಯ ಅಧಿಕಾರಿಯೆಂದು ಡಿಜಿಪಿ ಪ್ರವೀಣ್ ಸೂದ್ ಟ್ವೀಟ್ ಮೂಲಕ ಕಂಬನಿ ಮಿಡಿದಿದ್ದಾರೆ.
ಕಳೆದ 2021ರ ಜನವರಿ 11ರಂದು ಪೊಲೀಸ್ ಇಲಾಖೆ ಸೇರಿದ್ದ ಶ್ಯಾಮಿಲಿ ಅವರನ್ನು ದ.ಕ. ಜಿಲ್ಲಾ ಎಸ್ಪಿ ಕಚೇರಿಯಲ್ಲಿ ಆಡಳಿತ ವಿಭಾಗದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು. ಕೋಲಾರ ಮೂಲದ ಶ್ಯಾಮಿಲಿ ಗರ್ಭಿಣಿಯಾಗಿದ್ದ ಕಾರಣ ಎರಡು ತಿಂಗಳ ಹಿಂದೆ ಇಲಾಖಾ ರಜೆ ಪಡೆದು ತಮ್ಮ ಊರು ಕೋಲಾರಕ್ಕೆ ತೆರಳಿದ್ದರು. ಊರಲ್ಲಿದ್ದ ವೇಳೆ ಕೋವಿಡ್ ಸೋಂಕಿಗೆ ಒಳಗಾದ ಶ್ಯಾಮಿಲಿ ಅವರನ್ನು ಕಳೆದ ಮೇ 2ರಂದು ಕೋಲಾರದ ಆರ್.ಎಂ. ಜಾಲಪ್ಪ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಗರ್ಭಿಣಿಯಾಗಿದ್ದ ಹಿನ್ನೆಲೆಯಲ್ಲಿ ಅವರಿಗೆ ಕೊರೊನಾ ಲಸಿಕೆ ನೀಡಿರಲಿಲ್ಲ.
ಚಿಕಿತ್ಸೆಗೆ ಸ್ಪಂದಿಸದ ಶ್ಯಾಮಿಲಿ ಇಂದು ನಸುಕಿನಲ್ಲಿ ಅಸುನೀಗಿದ್ದಾರೆ ಎಂದು ದ.ಕ. ಎಸ್ಪಿ ಋಷಿಕುಮಾರ್ ಸೋನವಾನೆ ತಿಳಿಸಿದ್ದಾರೆ.
Youngest member of the police family to succumb to Covid. 24 year old, PSI Shamili of Kolar, attached to DK district lost her battle with COVID.
— DGP KARNATAKA (@DgpKarnataka) May 18, 2021
May her soul rest in peace.
But it could be any of us. Please cooperate with police, stay home and stay safe. pic.twitter.com/s7ecNSdZ67
In a tragic incident, a Pregnant woman police constable from Kolar working in SP office Mangalore died of Covid 19. The deceased has been identified as Shamili (24). As she was expecting she did not take the covid vaccine.DGP Praveen Sood has also tweeted.
05-10-25 07:18 pm
HK News Desk
ಮಕ್ಕಳ ಸಿರಪ್ ; ರಾಜ್ಯದಲ್ಲಿ ಪೂರೈಕೆ ಇಲ್ಲ, ಆತಂಕ ಪಡ...
04-10-25 10:54 pm
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm