ಬ್ರೇಕಿಂಗ್ ನ್ಯೂಸ್
18-05-21 05:17 pm Udupi Correspondent ಕರಾವಳಿ
ಬೈಂದೂರು, ಮೇ 18 : ವಿದ್ಯುತ್ ಕಂಬದ ದುರಸ್ತಿ ವೇಳೆ ರಸ್ತೆಗೆ ಅಡಲಾಗಿ ಜೋತು ಬಿದ್ದ ವಿದ್ಯುತ್ ತಂತಿ ಕುತ್ತಿಗೆಗೆ ಸಿಲುಕಿ ಬೈಕ್ ಸವಾರ ರಸ್ತೆಗೆ ಬಿದ್ದು ಮೃತಪಟ್ಟ ಘಟನೆ ಹೇರೂರು ಬಳಿ ನಡೆದಿದೆ.
ಮೃತರನ್ನು ಹೇರೂರು ಗ್ರಾಮದ ಯರುಕೋಣೆ ನಿವಾಸಿ ಶೇಖರ ಶೆಟ್ಟಿ ಎಂದು ಗುರುತಿಸಲಾಗಿದೆ. ಮೇ 15ರಂದು ರಾತ್ರಿ ಗಾಳಿ ಮಳೆಯಿಂದಾಗಿ ರಸ್ತೆ ಬದಿಯ ವಿದ್ಯುತ್ ತಂತಿ ಮೇಲೆ ಮರ ಬಿದ್ದು ವಿದ್ಯುತ್ ಕಂಬಗಳು ತುಂಡಾಗಿದ್ದವು. ಮೇ 17ರಂದು ಮೆಸ್ಕಾಂ ಇಲಾಖೆಯಿಂದ ವಿದ್ಯುತ್ ತಂತಿ ಅಳವಡಿಸುವ ಕಾರ್ಯ ನಡೆಯುತ್ತಿತ್ತು.
ಆದರೆ ಗುತ್ತಿಗೆದಾರರು ಸ್ಥಳದಲ್ಲಿ ಮುಂಜಾಗ್ರತಾ ಕ್ರಮವಾಗಿ ಯಾವುದೇ ಸೂಚನಾ ಫಲಕ, ಸಿಬ್ಬಂದಿಯನ್ನು ನೇಮಿಸದೆ ದುರಸ್ತಿ ಕಾರ್ಯ ಮಾಡುತ್ತಿದ್ದರು ಎನ್ನಲಾಗಿದ್ದು, ಕಂಬಕ್ಕೆ ವಿದ್ಯುತ್ ತಂತಿ ಜೋಡಿಸುತ್ತಿದ್ದ ಸಂದರ್ಭ ತಂತಿಯೊಂದು ತುಂಡಾಗಿ ರಸ್ತೆಗೆ ಅಡ್ಡಲಾಗಿ ಜೋತು ಬಿದ್ದಿತ್ತು. ಇದೇ ವೇಳೆ ರಸ್ತೆಯಲ್ಲಿ ಬೈಕಿನಲ್ಲಿ ಹೋಗುತ್ತಿದ್ದ ಶೇಖರ ಶೆಟ್ಟಿ ತಂತಿಯನ್ನು ಗಮನಿಸದೆ ತೆರಳಿದ್ದು ತಂತಿ ಅವರ ಕುತ್ತಿಗೆ ಭಾಗಕ್ಕೆ ಸಿಲುಕಿತ್ತು. ಇದರಿಂದ ಅವರು ರಸ್ತೆಗೆ ಬಿದ್ದು ಕುತ್ತಿಗೆ ಮುರಿದಿದ್ದು ಗಂಭೀರ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಈ ಬಗ್ಗೆ ಬೈಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Motorcyclist dies after getting tangled in wire in byndoor. The deceased has been identified as Shekar Shetty.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm