ಸ್ಥಳೀಯ ಜನಪ್ರತಿನಿಧಿಗಳನ್ನು ಕೊರೊನಾ ವಾರಿಯರ್ಸ್ ಎಂದು ಗುರುತಿಸಿ ; ಸಿಎಂಗೆ ಕೋಟ ಮನವಿ

18-05-21 09:50 pm       Mangaluru Correspondent   ಕರಾವಳಿ

ಮಹಾನಗರ ಪಾಲಿಕೆ ಮತ್ತು ನಗರ ಪಂಚಾಯತ್‌ಗಳ ಸದಸ್ಯರು ಇವರೆಲ್ಲರಿಗೂ ಕೊರೋನಾ ವಾರಿಯರ್ ಎಂದು ಗುರುತಿಸಿ ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

ಮಂಗಳೂರು, ಮೇ 18: ರಾಜ್ಯದಲ್ಲಿರುವ ಗ್ರಾಮ ಪಂಚಾಯತ್‌ಗಳ ಕಾರ‍್ಯ ಪಡೆಗಳು ಹಾಗೂ ನಗರ ಸಭೆ, ಪುರಸಭೆ, ಪಟ್ಟಣ ಪಂಚಾಯತ್, ಮಹಾನಗರ ಪಾಲಿಕೆ ಮತ್ತು ನಗರ ಪಂಚಾಯತ್‌ಗಳ ಸದಸ್ಯರು ಪ್ರತಿನಿತ್ಯ ಕೊರೊನಾ ಪೀಡಿತರನ್ನು ಭೇಟಿ ಮಾಡಿ ಕರ್ತವ್ಯ ನಿರ್ವಹಿಸಿ ಕೊರೊನಾ ನಿಯಂತ್ರಣಕ್ಕೆ ತರುವ ನಿಟ್ಟಿನಲ್ಲಿ ತಲ್ಲೀನರಾಗಿರುತ್ತಾರೆ.

ಅದ್ದರಿಂದ ಇವರೆಲ್ಲರಿಗೂ ಕೊರೋನಾ ನಿಯಂತ್ರಣಕ್ಕಾಗಿ ಮುಂಚೂಣಿಯಲ್ಲಿ ನಿಂತು ಹೋರಾಡುವ ಕೊರೊನಾ ವಾರಿಯರ್ಸ್ ಗೆ ಕೊಟ್ಟಂತಹ ಪ್ರಾಶಸ್ತ್ಯವನ್ನು ನೀಡಿ ಕೊರೋನಾ ವಾರಿಯರ್ ಎಂದು ಗುರುತಿಸಿ, ಪ್ರಥಮ ಹಂತದಲ್ಲಿ ಆದ್ಯತೆ ಮೇರೆಗೆ ವಾಕ್ಸಿನ್‌ಗಳನ್ನು ನೀಡಲು ಸೂಕ್ತ ಆದೇಶವನ್ನು ನೀಡುವಂತೆ,  ಹಿಂದುಳಿದ ವರ್ಗಗಳ ಕಲ್ಯಾಣ, ಹಿಂದೂ ಧಾರ್ಮಿಕ ಮತ್ತು ಧರ್ಮಾದಾಯ ದತ್ತಿ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿಯವರು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರಿಗೆ ಮನವಿ ಸಲ್ಲಿಸಿದ್ದಾರೆ.

Mangalore Consider Panchyath members and Corporation members as Covid Warriors Kota Srinivas Pojari to CM BS Yedurappa