ಬ್ರೇಕಿಂಗ್ ನ್ಯೂಸ್
19-05-21 03:57 pm Mangalore Correspondent ಕರಾವಳಿ
ಮಂಗಳೂರು, ಮೇ 19 : ಕೊರೊನಾ ಲಾಕ್ಡೌನ್ ಮಧ್ಯೆ ರಾಜ್ಯದ ಪಡಿತರ ವ್ಯವಸ್ಥೆಯಲ್ಲಿಯೂ ಸಮಸ್ಯೆ ಉಂಟಾಗಿದ್ದು ಜನರಿಗೆ ಪಡಿತರ ಸಾಮಗ್ರಿಗಳನ್ನು ನೀಡುವಲ್ಲಿ ಸರಕಾರ ವಿಫಲವಾಗಿದೆ. ಈ ಬಗ್ಗೆ ಸರಕಾರ ತಕ್ಷಣ ಗಮನಹರಿಸಿ ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಜನತೆಗೆ ಪಡಿತರ ವ್ಯವಸ್ಥೆಯ ಮೂಲಕ ನೆರವಾಗಬೇಕಿದ್ದ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಅಸಮರ್ಪಕ ಕಾರಣಕ್ಕಾಗಿ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಪೌಷ್ಟಿಕ ಆಹಾರ ಧಾನ್ಯ, ಕುಚ್ಚಲಕ್ಕಿ ಲಭಿಸುತ್ತಿಲ್ಲ. ಒಂದು ಪಡಿತರ ಚೀಟಿಯ ಮೂಲಕ ರಾಜ್ಯದ ಯಾವುದೇ ಮೂಲೆಯಲ್ಲಿ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಸಾಮಗ್ರಿ ಪಡೆಯುವಂತೆ ಮಾಡಿದ್ದ ವ್ಯವಸ್ಥೆ ಸ್ಥಗಿತಗೊಂಡು ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಈ ಸಮಸ್ಯೆ ಇರಲಿಲ್ಲ. ಈಗ ಏಕೆ ಉದ್ಭವವಾಗಿದೆ ಎಂದು ಪ್ರಶ್ನಿಸಿದರು.


ಕೋವಿಡ್ ಸಂಬಂಧಿಸಿ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಸರಕಾರ ಗಮನಹರಿಸಬೇಕಾಗಿತ್ತು. ಈಗ ಒಂದೊಂದು ಆಸ್ಪತ್ರೆಯಲ್ಲಿ ಒಂದೊಂದು ರೀತಿಯ ದರ ವಿಧಿಸಲಾಗುತ್ತಿದೆ. ನಾನು ಅಪಘಾತಕ್ಕೆ ಒಳಗಾಗಿ ಮನೆಯಲ್ಲಿ ಇದ್ದ ಕಾರಣ ಮನೆಯಲ್ಲಿ ಲಸಿಕೆ ಪಡೆಯಬೇಕಾಯಿತು. ಈ ಬಗ್ಗೆ ವಿವಾದ ಮಾಡಬೇಕಾಗಿಲ್ಲ ಎಂದರು.
ಕೋವಿಡ್ ಲಸಿಕೆ ನೀಡುವುದನ್ನು ಹಿಂದೆಯೂ ವಿರೋಧಿಸಿಲ್ಲ. ಆದರೆ ಬಿಜೆಪಿ ಜನಪ್ರತಿನಿಧಿಗಳು ಆರಂಭದಲ್ಲಿ ಲಸಿಕೆ ತೆಗೆದುಕೊಂಡು ಜನರಲ್ಲಿ ವಿಶ್ವಾಸ ಮೂಡಿಸಬೇಕಿತ್ತು. ಅದನ್ನು ಮಾಡದೆ ಈಗ ಇತರರ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲ ಜನರಿಗೆ ಲಸಿಕೆ ನೀಡಲು ಯಾವುದೇ ಪೂರ್ವ ತಯಾರಿ ಮಾಡದೆ ಇದ್ದ ಕಾರಣ ಲಸಿಕೆಗಾಗಿ ಜನ ಪರದಾಡುವಂತಾಗಿದೆ ಎಂದು ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸತೀಶ್ ಶೆಟ್ಟಿ, ಫಾರೂಕ್, ರಫೀಕ್, ರಮ್ಲಾನ್ ಮೊದಲಾದವರು ಉಪಸ್ಥಿತರಿದ್ದರು.
Ration card holders face huge trouble amid lockdown and therefore Government should concentrate on those issues says UT Khader in Mangalore.
03-04-26 04:14 pm
HK News Staffer
ಬಾಗಲಕೋಟ, ದಾವಣಗೆರೆ ಉಪ ಚುನಾವಣೆ; ಗೆಲುವು ಕಷ್ಟ- ಗು...
03-04-26 03:48 pm
ಕ್ಲೈಮ್ಯಾಕ್ಸ್ ಹಂತಕ್ಕೆ ತಲುಪಿದ ಕುಮಾರಸ್ವಾಮಿ- ಎಡಿಜ...
02-04-26 09:31 pm
ನಾನು ಮುಖ್ಯಮಂತ್ರಿಯಾಗಿ ಮುಸ್ಲಿಂ ಅಲ್ಪಸಂಖ್ಯಾತ ಮೀಸಲ...
02-04-26 08:07 pm
ತಮಿಳುನಾಡು ಚುನಾವಣೆಗೆ 44 ಮೀಸಲು ಕ್ಷೇತ್ರದಿಂದ ಕ್ರಿ...
02-04-26 08:03 pm
03-04-26 07:52 pm
HK News Staffer
50 ವರ್ಷಗಳ ಬಳಿಕ ಮಾನವ ಸಹಿತ ಚಂದ್ರಯಾನ; ಅಮೆರಿಕ, ಕೆ...
03-04-26 07:35 am
ಚಿಂತಿಸಬೇಡಿ, ನಿಮ್ಮ ಹಡಗು ಸುರಕ್ಷಿತ; ಹಾರ್ಮುಜ್ ಜಲಸ...
02-04-26 10:24 pm
ಇರಾನ್ ಕದನವಿರಾಮ ಕೇಳುತ್ತಿದೆ, ಒಪ್ಪದಿದ್ದರೆ ಶಿಲಾಯು...
01-04-26 11:03 pm
ಇರಾನ್ ಮೇಲೆ ಅಣ್ವಸ್ತ್ರ ದಾಳಿಗೆ ಅಮೆರಿಕ ಸಿದ್ಧತೆ; ವ...
01-04-26 12:46 pm
03-04-26 11:43 am
HK News Staffer
ಧರ್ಮಸ್ಥಳ ಎಐ ವಿಡಿಯೋ ಪ್ರಕರಣ; ಯೂಟ್ಯೂಬರ್ ಎಂ.ಡಿ....
02-04-26 02:43 pm
ದೂರು ನೀಡಲು ಬಂದ ಮಹಿಳೆಯೊಂದಿಗೆ ಸಂಬಂಧ ಬೆಳೆಸುವುದು...
01-04-26 09:04 pm
ಮುಸ್ಲಿಂ ಮದುವೆಯಲ್ಲಿ ಕೊರಗಜ್ಜ ದೈವದ ಅನುಕರಣೆ ; ಮದು...
31-03-26 10:06 pm
Moodbidri Accident: ಮೂಡುಬಿದ್ರೆ ; ರಸ್ತೆ ಬದಿ ನಿ...
31-03-26 09:02 pm
03-04-26 11:00 pm
HK News Staffer
ಜಿಮ್ ಸೆಂಟರ್ ನೆಪದಲ್ಲಿ ಲವ್ ಜಿಹಾದ್! ಜಿಮ್ ಟ್ರೈ...
03-04-26 10:53 pm
ಮೆಲ್ಕಾರ್ ರಸ್ತೆ ದಾಟುತ್ತಿದ್ದ ವೇಳೆ ಕಾರು ಡಿಕ್ಕಿ;...
01-04-26 02:54 pm
ಕುಂಜತ್ ಬೈಲಿನಲ್ಲಿ ಫಲ್ಗುಣಿ ನದಿಗೆ ಬಿದ್ದು ಇಬ್ಬರು...
01-04-26 02:16 pm
ಜೈಲಿನಲ್ಲಿದ್ದ ಪತಿಯ ನೋಡಲು ಖಾಸಗಿ ಅಂಗದಲ್ಲಿ ಡ್ರಗ್ಸ...
31-03-26 11:11 am