ಬ್ರೇಕಿಂಗ್ ನ್ಯೂಸ್
19-05-21 03:57 pm Mangalore Correspondent ಕರಾವಳಿ
ಮಂಗಳೂರು, ಮೇ 19 : ಕೊರೊನಾ ಲಾಕ್ಡೌನ್ ಮಧ್ಯೆ ರಾಜ್ಯದ ಪಡಿತರ ವ್ಯವಸ್ಥೆಯಲ್ಲಿಯೂ ಸಮಸ್ಯೆ ಉಂಟಾಗಿದ್ದು ಜನರಿಗೆ ಪಡಿತರ ಸಾಮಗ್ರಿಗಳನ್ನು ನೀಡುವಲ್ಲಿ ಸರಕಾರ ವಿಫಲವಾಗಿದೆ. ಈ ಬಗ್ಗೆ ಸರಕಾರ ತಕ್ಷಣ ಗಮನಹರಿಸಿ ಗ್ರಾಹಕರಿಗೆ ಆಗುತ್ತಿರುವ ತೊಂದರೆಯನ್ನು ಸರಿಪಡಿಸಬೇಕು ಎಂದು ಶಾಸಕ ಯು.ಟಿ.ಖಾದರ್ ಆಗ್ರಹಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೊರೊನಾ ಸಂಕಷ್ಟ ಕಾಲದಲ್ಲಿ ಜನತೆಗೆ ಪಡಿತರ ವ್ಯವಸ್ಥೆಯ ಮೂಲಕ ನೆರವಾಗಬೇಕಿದ್ದ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ. ಅಸಮರ್ಪಕ ಕಾರಣಕ್ಕಾಗಿ ಪಡಿತರ ಚೀಟಿಗಳನ್ನು ರದ್ದು ಮಾಡಲಾಗುತ್ತಿದೆ. ಪೌಷ್ಟಿಕ ಆಹಾರ ಧಾನ್ಯ, ಕುಚ್ಚಲಕ್ಕಿ ಲಭಿಸುತ್ತಿಲ್ಲ. ಒಂದು ಪಡಿತರ ಚೀಟಿಯ ಮೂಲಕ ರಾಜ್ಯದ ಯಾವುದೇ ಮೂಲೆಯಲ್ಲಿ ನ್ಯಾಯಬೆಲೆ ಅಂಗಡಿಯಿಂದ ಪಡಿತರ ಸಾಮಗ್ರಿ ಪಡೆಯುವಂತೆ ಮಾಡಿದ್ದ ವ್ಯವಸ್ಥೆ ಸ್ಥಗಿತಗೊಂಡು ಜನರು ಸಮಸ್ಯೆ ಎದುರಿಸುತ್ತಿದ್ದಾರೆ. ಕಾಂಗ್ರೆಸ್ ಆಡಳಿತದ ಸಂದರ್ಭದಲ್ಲಿ ಈ ಸಮಸ್ಯೆ ಇರಲಿಲ್ಲ. ಈಗ ಏಕೆ ಉದ್ಭವವಾಗಿದೆ ಎಂದು ಪ್ರಶ್ನಿಸಿದರು.


ಕೋವಿಡ್ ಸಂಬಂಧಿಸಿ ಉಚಿತ ಚಿಕಿತ್ಸೆ ನೀಡುವ ಬಗ್ಗೆ ಸರಕಾರ ಗಮನಹರಿಸಬೇಕಾಗಿತ್ತು. ಈಗ ಒಂದೊಂದು ಆಸ್ಪತ್ರೆಯಲ್ಲಿ ಒಂದೊಂದು ರೀತಿಯ ದರ ವಿಧಿಸಲಾಗುತ್ತಿದೆ. ನಾನು ಅಪಘಾತಕ್ಕೆ ಒಳಗಾಗಿ ಮನೆಯಲ್ಲಿ ಇದ್ದ ಕಾರಣ ಮನೆಯಲ್ಲಿ ಲಸಿಕೆ ಪಡೆಯಬೇಕಾಯಿತು. ಈ ಬಗ್ಗೆ ವಿವಾದ ಮಾಡಬೇಕಾಗಿಲ್ಲ ಎಂದರು.
ಕೋವಿಡ್ ಲಸಿಕೆ ನೀಡುವುದನ್ನು ಹಿಂದೆಯೂ ವಿರೋಧಿಸಿಲ್ಲ. ಆದರೆ ಬಿಜೆಪಿ ಜನಪ್ರತಿನಿಧಿಗಳು ಆರಂಭದಲ್ಲಿ ಲಸಿಕೆ ತೆಗೆದುಕೊಂಡು ಜನರಲ್ಲಿ ವಿಶ್ವಾಸ ಮೂಡಿಸಬೇಕಿತ್ತು. ಅದನ್ನು ಮಾಡದೆ ಈಗ ಇತರರ ಮೇಲೆ ಆರೋಪ ಮಾಡುತ್ತಿದ್ದಾರೆ. ಎಲ್ಲ ಜನರಿಗೆ ಲಸಿಕೆ ನೀಡಲು ಯಾವುದೇ ಪೂರ್ವ ತಯಾರಿ ಮಾಡದೆ ಇದ್ದ ಕಾರಣ ಲಸಿಕೆಗಾಗಿ ಜನ ಪರದಾಡುವಂತಾಗಿದೆ ಎಂದು ಖಾದರ್ ಹೇಳಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ದ.ಕ. ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಸತೀಶ್ ಶೆಟ್ಟಿ, ಫಾರೂಕ್, ರಫೀಕ್, ರಮ್ಲಾನ್ ಮೊದಲಾದವರು ಉಪಸ್ಥಿತರಿದ್ದರು.
Ration card holders face huge trouble amid lockdown and therefore Government should concentrate on those issues says UT Khader in Mangalore.
03-02-26 11:53 am
Bangalore Correspondent
Charmadi Ghat: ಚಾರ್ಮಾಡಿ ಘಾಟಿ ಅರಣ್ಯಕ್ಕೆ ಮತ್ತೆ...
02-02-26 11:02 pm
ಮುಖಂಡರ ಬಳಿಕ ಮಕ್ಕಳ ದರ್ಬಾರ್! ದಾವಣಗೆರೆಯಲ್ಲಿ ಕಾಂಗ...
02-02-26 09:52 pm
Manjeshwar Murder: ಆಸ್ತಿ ವಿಚಾರದಲ್ಲಿ ಗಲಾಟೆ ; ಬ...
02-02-26 08:14 pm
ಪೊಲೀಸರಿಗೇ ಸಡ್ಡು ; ಹಾಡಹಗಲೇ ಸಿಲಿಕಾನ್ ಸಿಟಿಯಲ್ಲಿ...
02-02-26 05:12 pm
03-02-26 11:55 am
HK News Desk
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
ಎಪ್ರಿಲ್ 1ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿ ; ಐ...
02-02-26 11:59 am
ಕೇಂದ್ರ ಬಜೆಟ್ ; ಏಳು ಹೈಸ್ಪೀಡ್ ರೈಲು ಕಾರಿಡಾರ್ ಘೋಷ...
01-02-26 02:00 pm
ಫೆಬ್ರವರಿ 1ಕ್ಕೆ ದೇಶದ ಕಣ್ಣು ದೆಹಲಿ ಕಡೆ! ಟ್ಯಾಕ್ಸ್...
31-01-26 10:20 pm
02-02-26 07:36 pm
Udupi Correspondent
ವಿಜಯೇಂದ್ರ ಕಾರ್ಯಶೈಲಿಗೆ ಮಾಜಿ ಸಂಸದ ನಳಿನ್ ಕುಮಾರ್...
02-02-26 05:09 pm
'ನನ್ನ ಭಾಷಣದ ಕಾರಣಕ್ಕೆ ಗಲಾಟೆ, ಸಂಘರ್ಷ ಆಗಿದ್ದಿದೆಯ...
01-02-26 10:29 pm
Karnataka High Court, Mahesh Shetty Timarodi:...
01-02-26 07:52 pm
ಸಿಜೆ ರಾಯ್ ಆತ್ಮಹತ್ಯೆ ಪ್ರಕರಣ ; ಐಟಿ ರಾಜಕೀಯ ಕಾರಣಕ...
31-01-26 08:40 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm