ಬ್ರೇಕಿಂಗ್ ನ್ಯೂಸ್
19-05-21 04:50 pm Mangalore Correspondent ಕರಾವಳಿ
ಉಳ್ಳಾಲ, ಮೇ 19: ಲಾಕ್ ಡೌನ್ ಮಾಡಿ ಕೊರೊನಾ ಕಡಿಮೆ ಆಗಿಲ್ಲ, ಮೂರು ಸಾವಿರ ಸಂಖ್ಯೆಯಲ್ಲಿದ್ದಾಗ ಕಡಿಮೆ ಆಗದ ಕೊರೊನಾ ಮೂರು ಲಕ್ಷ ಪ್ರಕರಣ ಇರುವಾಗ ಹತೋಟಿಗೆ ಬರ್ತದಾ? ಸರಕಾರಕ್ಕೆ ಬದ್ಧತೆ, ಜನರ ಬಗ್ಗೆ ಕಾಳಜಿ ಇಲ್ಲ. ಪ್ರತಿ ಮನೆಗೂ 10,000 ರೂಪಾಯಿ ಮತ್ತು ಆಹಾರ ಕಿಟ್ ನೀಡಿ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಕುರ್ನಾಡು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಭಾರತೀಯರಿಗೆ ಲಸಿಕೆ ಕೊಡದೆ ಬಾಂಗ್ಲಾ , ಪಾಕಿಸ್ತಾನಕ್ಕೆ ಲಸಿಕೆ ಕೊಡಲು ಯಾಕೆ ಮುಂದಾದಿರಿ ಎಂದು ಪ್ರಶ್ನಿಸಿದ ಅವರು ಇತರ ದೇಶದಲ್ಲಿ ಜನರ ಆರೋಗ್ಯ ನೋಡಿಕೊಂಡು ಮದ್ದು ವಿತರಿಸಿದರೆ ಬಿಜೆಪಿ ಸರಕಾರದಲ್ಲಿ ದಾಸ್ತಾನು ನೋಡಿ ಮದ್ದು ವಿತರಿಸಲಾಗುತ್ತದೆ ಎಂದು ಲೇವಡಿ ಮಾಡಿದರು.
ಕೊರೊನಾ ನಿಯಂತ್ರಣಕ್ಕಾಗಿ ಸ್ಥಳೀಯ ಸಂಸ್ಥೆಗಳ ಜೊತೆಗೆ ಚರ್ಚಿಸಿಕೊಂಡು ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಭೇಟಿ ಮಾಡಿದ್ದೇವೆ. ಕೊರೊನಅ ನಿಯಂತ್ರಣಕ್ಕೆ ಮುಖ್ಯವಾಗಿ ಟಾಸ್ಕ್ ಫೋರ್ಸ್ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದವರು ಹೇಳಿದರು.



ಲ್ಯಾಬ್ ಗೆ ಕೊರೊನಾ ಟೆಸ್ಟ್ ಗೆ ಹೋದವರ ಮಾಹಿತಿ ತಕ್ಷಣ ಗ್ರಾಮ ಪಂಚಾಯಿತಿಗೆ ತಲುಪಬೇಕು. ವರದಿ ಬರೋ ತನಕ ಎಲ್ಲೂ ಹೋಗದಂತೆ ರೋಗಿಯ ಮನವೊಲಿಸಬೇಕು. ಪಾಸಿಟಿವ್ ಕಂಡುಬಂದರೆ ಫಾ. ಮುಲ್ಲರ್ ವಿಶ್ರಾಂತಿ ಕೇಂದ್ರ, ಕೊಣಾಜೆಯ ಲೇಡೀಸ್ ಹಾಸ್ಟೆಲ್, ದೇರಳಕಟ್ಟೆಯ ಯೇನಪೊಯ ಹಸನ್ ಚೇಂಬರ್ ಅಥವಾ ಮನೆಯಲ್ಲಿ ಉಳಿಯುವವರಿಗೆ ಸಹಕಾರ ಕೊಡುವುದರ ಮೂಲಕ ನಿಯಂತ್ರಿಸಲು ಸಾಧ್ಯ ಎಂದರು.
ಅಂಗನವಾಡಿ ,ಆಶಾ ಕಾರ್ಯಕರ್ತೆಯರಿಗೆ ಎನ್ - 90 ಮಾಸ್ಕ್ ವಿತರಣೆಗೆ ಪಂಚಾಯಿತಿಗೆ ಅವಕಾಶ ನೀಡಲಾಗಿದೆ. ಸರಕಾರ ಆಶಾ ಕಾರ್ಯಕರ್ತರು, ಅಂಗನವಾಡಿ, ದಾದಿಯರ ವೇತನವನ್ನು ಆದಷ್ಟು ಶೀಘ್ರದಲ್ಲಿ ನೀಡಬೇಕು. ಈ ಕಾಲಘಟ್ಟದಲ್ಲೂ ಪಡಿತರ ಕಟ್ ಮಾಡುವುದು ಸರಿಯಲ್ಲ, ಸರಕಾರವು ಅವ್ಯವಸ್ಥೆಗಳನ್ನ ಸರಿಪಡಿಸಬೇಕಿದೆ ಎಂದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಕುರ್ನಾಡು ಗ್ರಾಪಂ ಅಧ್ಯಕ್ಷ ಗಣೇಶ್ ನಾಯ್ಕ್ ಕುರ್ನಾಡು, ಉಪಾಧ್ಯಕ್ಷೆ ಪ್ರೇಮಾ ಗಟ್ಟಿ , ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ದೇವದಾಸ್ ಭಂಡಾರಿ ಕುರ್ನಾಡು, ಖಾಸಿಂ, ಲೋಲಾಕ್ಷಿ ಮೊದಲಾದವರು ಇದ್ದರು.
Read: ಪಡಿತರ ವಿತರಣೆಯಲ್ಲೂ ಸಮಸ್ಯೆ ; ರಾಜ್ಯ ಸರಕಾರದ ವಿರುದ್ಧ ಖಾದರ್ ವಾಗ್ದಾಳಿ
04-11-25 04:38 pm
Bangalore Correspondent
ಸಚಿವ ಸತೀಶ್ ಜಾರಕಿಹೊಳಿ ದಿಢೀರ್ ದೆಹಲಿಗೆ ; ಕೆಪಿಸಿಸ...
03-11-25 05:17 pm
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
04-11-25 10:51 pm
Mangalore Correspondent
Mangalore Police, Panambur Beach: ಗಂಡ - ಹೆಂಡತ...
04-11-25 08:37 pm
ಅಬಕಾರಿ ಇಲಾಖೆಯಲ್ಲಿ ವ್ಯಾಪಕ ಭ್ರಷ್ಟಾಚಾರ, ಹಣಕ್ಕಾಗಿ...
04-11-25 06:15 pm
ವ್ಯಾಟಿಕನ್ ಸಿಟಿಯ ಭಾರತದ ರಾಯಭಾರಿ ಆ್ಯಂಡ್ರಿಯಾ ಫಾನ್...
04-11-25 05:06 pm
ಧರ್ಮಸ್ಥಳ ಪ್ರಕರಣ ; ಎಸ್ಐಟಿ ತನಿಖಾ ಪ್ರಕ್ರಿಯೆಗೆ ಮಹ...
04-11-25 05:03 pm
04-11-25 02:11 pm
Mangalore Correspondent
ಟೋಪಿ ನೌಫಾಲ್ ಕೊಲೆಯಲ್ಲ, ರೈಲು ಡಿಕ್ಕಿ ಹೊಡೆದು ಸಾವು...
03-11-25 12:33 pm
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm