ಬ್ರೇಕಿಂಗ್ ನ್ಯೂಸ್
19-05-21 04:50 pm Mangalore Correspondent ಕರಾವಳಿ
ಉಳ್ಳಾಲ, ಮೇ 19: ಲಾಕ್ ಡೌನ್ ಮಾಡಿ ಕೊರೊನಾ ಕಡಿಮೆ ಆಗಿಲ್ಲ, ಮೂರು ಸಾವಿರ ಸಂಖ್ಯೆಯಲ್ಲಿದ್ದಾಗ ಕಡಿಮೆ ಆಗದ ಕೊರೊನಾ ಮೂರು ಲಕ್ಷ ಪ್ರಕರಣ ಇರುವಾಗ ಹತೋಟಿಗೆ ಬರ್ತದಾ? ಸರಕಾರಕ್ಕೆ ಬದ್ಧತೆ, ಜನರ ಬಗ್ಗೆ ಕಾಳಜಿ ಇಲ್ಲ. ಪ್ರತಿ ಮನೆಗೂ 10,000 ರೂಪಾಯಿ ಮತ್ತು ಆಹಾರ ಕಿಟ್ ನೀಡಿ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಕುರ್ನಾಡು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಭಾರತೀಯರಿಗೆ ಲಸಿಕೆ ಕೊಡದೆ ಬಾಂಗ್ಲಾ , ಪಾಕಿಸ್ತಾನಕ್ಕೆ ಲಸಿಕೆ ಕೊಡಲು ಯಾಕೆ ಮುಂದಾದಿರಿ ಎಂದು ಪ್ರಶ್ನಿಸಿದ ಅವರು ಇತರ ದೇಶದಲ್ಲಿ ಜನರ ಆರೋಗ್ಯ ನೋಡಿಕೊಂಡು ಮದ್ದು ವಿತರಿಸಿದರೆ ಬಿಜೆಪಿ ಸರಕಾರದಲ್ಲಿ ದಾಸ್ತಾನು ನೋಡಿ ಮದ್ದು ವಿತರಿಸಲಾಗುತ್ತದೆ ಎಂದು ಲೇವಡಿ ಮಾಡಿದರು.
ಕೊರೊನಾ ನಿಯಂತ್ರಣಕ್ಕಾಗಿ ಸ್ಥಳೀಯ ಸಂಸ್ಥೆಗಳ ಜೊತೆಗೆ ಚರ್ಚಿಸಿಕೊಂಡು ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಭೇಟಿ ಮಾಡಿದ್ದೇವೆ. ಕೊರೊನಅ ನಿಯಂತ್ರಣಕ್ಕೆ ಮುಖ್ಯವಾಗಿ ಟಾಸ್ಕ್ ಫೋರ್ಸ್ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದವರು ಹೇಳಿದರು.



ಲ್ಯಾಬ್ ಗೆ ಕೊರೊನಾ ಟೆಸ್ಟ್ ಗೆ ಹೋದವರ ಮಾಹಿತಿ ತಕ್ಷಣ ಗ್ರಾಮ ಪಂಚಾಯಿತಿಗೆ ತಲುಪಬೇಕು. ವರದಿ ಬರೋ ತನಕ ಎಲ್ಲೂ ಹೋಗದಂತೆ ರೋಗಿಯ ಮನವೊಲಿಸಬೇಕು. ಪಾಸಿಟಿವ್ ಕಂಡುಬಂದರೆ ಫಾ. ಮುಲ್ಲರ್ ವಿಶ್ರಾಂತಿ ಕೇಂದ್ರ, ಕೊಣಾಜೆಯ ಲೇಡೀಸ್ ಹಾಸ್ಟೆಲ್, ದೇರಳಕಟ್ಟೆಯ ಯೇನಪೊಯ ಹಸನ್ ಚೇಂಬರ್ ಅಥವಾ ಮನೆಯಲ್ಲಿ ಉಳಿಯುವವರಿಗೆ ಸಹಕಾರ ಕೊಡುವುದರ ಮೂಲಕ ನಿಯಂತ್ರಿಸಲು ಸಾಧ್ಯ ಎಂದರು.
ಅಂಗನವಾಡಿ ,ಆಶಾ ಕಾರ್ಯಕರ್ತೆಯರಿಗೆ ಎನ್ - 90 ಮಾಸ್ಕ್ ವಿತರಣೆಗೆ ಪಂಚಾಯಿತಿಗೆ ಅವಕಾಶ ನೀಡಲಾಗಿದೆ. ಸರಕಾರ ಆಶಾ ಕಾರ್ಯಕರ್ತರು, ಅಂಗನವಾಡಿ, ದಾದಿಯರ ವೇತನವನ್ನು ಆದಷ್ಟು ಶೀಘ್ರದಲ್ಲಿ ನೀಡಬೇಕು. ಈ ಕಾಲಘಟ್ಟದಲ್ಲೂ ಪಡಿತರ ಕಟ್ ಮಾಡುವುದು ಸರಿಯಲ್ಲ, ಸರಕಾರವು ಅವ್ಯವಸ್ಥೆಗಳನ್ನ ಸರಿಪಡಿಸಬೇಕಿದೆ ಎಂದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಕುರ್ನಾಡು ಗ್ರಾಪಂ ಅಧ್ಯಕ್ಷ ಗಣೇಶ್ ನಾಯ್ಕ್ ಕುರ್ನಾಡು, ಉಪಾಧ್ಯಕ್ಷೆ ಪ್ರೇಮಾ ಗಟ್ಟಿ , ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ದೇವದಾಸ್ ಭಂಡಾರಿ ಕುರ್ನಾಡು, ಖಾಸಿಂ, ಲೋಲಾಕ್ಷಿ ಮೊದಲಾದವರು ಇದ್ದರು.
Read: ಪಡಿತರ ವಿತರಣೆಯಲ್ಲೂ ಸಮಸ್ಯೆ ; ರಾಜ್ಯ ಸರಕಾರದ ವಿರುದ್ಧ ಖಾದರ್ ವಾಗ್ದಾಳಿ
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm