ಬ್ರೇಕಿಂಗ್ ನ್ಯೂಸ್
19-05-21 04:50 pm Mangalore Correspondent ಕರಾವಳಿ
ಉಳ್ಳಾಲ, ಮೇ 19: ಲಾಕ್ ಡೌನ್ ಮಾಡಿ ಕೊರೊನಾ ಕಡಿಮೆ ಆಗಿಲ್ಲ, ಮೂರು ಸಾವಿರ ಸಂಖ್ಯೆಯಲ್ಲಿದ್ದಾಗ ಕಡಿಮೆ ಆಗದ ಕೊರೊನಾ ಮೂರು ಲಕ್ಷ ಪ್ರಕರಣ ಇರುವಾಗ ಹತೋಟಿಗೆ ಬರ್ತದಾ? ಸರಕಾರಕ್ಕೆ ಬದ್ಧತೆ, ಜನರ ಬಗ್ಗೆ ಕಾಳಜಿ ಇಲ್ಲ. ಪ್ರತಿ ಮನೆಗೂ 10,000 ರೂಪಾಯಿ ಮತ್ತು ಆಹಾರ ಕಿಟ್ ನೀಡಿ ಸಂಪೂರ್ಣ ಲಾಕ್ ಡೌನ್ ಮಾಡಿ ಎಂದು ಮಾಜಿ ಸಚಿವ, ಶಾಸಕ ಯು.ಟಿ ಖಾದರ್ ಸರಕಾರಕ್ಕೆ ಆಗ್ರಹಿಸಿದ್ದಾರೆ.
ಕುರ್ನಾಡು ಗ್ರಾಮ ಪಂಚಾಯತ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ಭಾರತೀಯರಿಗೆ ಲಸಿಕೆ ಕೊಡದೆ ಬಾಂಗ್ಲಾ , ಪಾಕಿಸ್ತಾನಕ್ಕೆ ಲಸಿಕೆ ಕೊಡಲು ಯಾಕೆ ಮುಂದಾದಿರಿ ಎಂದು ಪ್ರಶ್ನಿಸಿದ ಅವರು ಇತರ ದೇಶದಲ್ಲಿ ಜನರ ಆರೋಗ್ಯ ನೋಡಿಕೊಂಡು ಮದ್ದು ವಿತರಿಸಿದರೆ ಬಿಜೆಪಿ ಸರಕಾರದಲ್ಲಿ ದಾಸ್ತಾನು ನೋಡಿ ಮದ್ದು ವಿತರಿಸಲಾಗುತ್ತದೆ ಎಂದು ಲೇವಡಿ ಮಾಡಿದರು.
ಕೊರೊನಾ ನಿಯಂತ್ರಣಕ್ಕಾಗಿ ಸ್ಥಳೀಯ ಸಂಸ್ಥೆಗಳ ಜೊತೆಗೆ ಚರ್ಚಿಸಿಕೊಂಡು ಕ್ಷೇತ್ರದ ಎಲ್ಲ ಗ್ರಾಮ ಪಂಚಾಯಿತಿ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ ಭೇಟಿ ಮಾಡಿದ್ದೇವೆ. ಕೊರೊನಅ ನಿಯಂತ್ರಣಕ್ಕೆ ಮುಖ್ಯವಾಗಿ ಟಾಸ್ಕ್ ಫೋರ್ಸ್ ಸಮರ್ಪಕವಾಗಿ ಕಾರ್ಯ ನಿರ್ವಹಿಸಬೇಕಿದೆ ಎಂದವರು ಹೇಳಿದರು.



ಲ್ಯಾಬ್ ಗೆ ಕೊರೊನಾ ಟೆಸ್ಟ್ ಗೆ ಹೋದವರ ಮಾಹಿತಿ ತಕ್ಷಣ ಗ್ರಾಮ ಪಂಚಾಯಿತಿಗೆ ತಲುಪಬೇಕು. ವರದಿ ಬರೋ ತನಕ ಎಲ್ಲೂ ಹೋಗದಂತೆ ರೋಗಿಯ ಮನವೊಲಿಸಬೇಕು. ಪಾಸಿಟಿವ್ ಕಂಡುಬಂದರೆ ಫಾ. ಮುಲ್ಲರ್ ವಿಶ್ರಾಂತಿ ಕೇಂದ್ರ, ಕೊಣಾಜೆಯ ಲೇಡೀಸ್ ಹಾಸ್ಟೆಲ್, ದೇರಳಕಟ್ಟೆಯ ಯೇನಪೊಯ ಹಸನ್ ಚೇಂಬರ್ ಅಥವಾ ಮನೆಯಲ್ಲಿ ಉಳಿಯುವವರಿಗೆ ಸಹಕಾರ ಕೊಡುವುದರ ಮೂಲಕ ನಿಯಂತ್ರಿಸಲು ಸಾಧ್ಯ ಎಂದರು.
ಅಂಗನವಾಡಿ ,ಆಶಾ ಕಾರ್ಯಕರ್ತೆಯರಿಗೆ ಎನ್ - 90 ಮಾಸ್ಕ್ ವಿತರಣೆಗೆ ಪಂಚಾಯಿತಿಗೆ ಅವಕಾಶ ನೀಡಲಾಗಿದೆ. ಸರಕಾರ ಆಶಾ ಕಾರ್ಯಕರ್ತರು, ಅಂಗನವಾಡಿ, ದಾದಿಯರ ವೇತನವನ್ನು ಆದಷ್ಟು ಶೀಘ್ರದಲ್ಲಿ ನೀಡಬೇಕು. ಈ ಕಾಲಘಟ್ಟದಲ್ಲೂ ಪಡಿತರ ಕಟ್ ಮಾಡುವುದು ಸರಿಯಲ್ಲ, ಸರಕಾರವು ಅವ್ಯವಸ್ಥೆಗಳನ್ನ ಸರಿಪಡಿಸಬೇಕಿದೆ ಎಂದರು.
ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಕುರ್ನಾಡು ಗ್ರಾಪಂ ಅಧ್ಯಕ್ಷ ಗಣೇಶ್ ನಾಯ್ಕ್ ಕುರ್ನಾಡು, ಉಪಾಧ್ಯಕ್ಷೆ ಪ್ರೇಮಾ ಗಟ್ಟಿ , ಜಿಲ್ಲಾ ಪಂಚಾಯಿತಿ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ದೇವದಾಸ್ ಭಂಡಾರಿ ಕುರ್ನಾಡು, ಖಾಸಿಂ, ಲೋಲಾಕ್ಷಿ ಮೊದಲಾದವರು ಇದ್ದರು.
Read: ಪಡಿತರ ವಿತರಣೆಯಲ್ಲೂ ಸಮಸ್ಯೆ ; ರಾಜ್ಯ ಸರಕಾರದ ವಿರುದ್ಧ ಖಾದರ್ ವಾಗ್ದಾಳಿ
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm