ಬ್ರೇಕಿಂಗ್ ನ್ಯೂಸ್
20-05-21 08:05 pm Mangaluru Correspondent ಕರಾವಳಿ
ಮಂಗಳೂರು, ಮೇ 20: ಕ್ರೈಸ್ತ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆ ಎನ್ನಲಾದ ಉಡುಪಿ ಸಂಸದೆ ಶೋಭಾ ಕರಂದ್ಲಾಜೆ ವಿರುದ್ಧ ಕಾಂಗ್ರೆಸ್ ಮುಖಂಡ, ಎಐಸಿಸಿ ಕಾರ್ಯದರ್ಶಿ ಐವಾನ್ ಡಿಸೋಜ ನಗರದ ಪಾಂಡೇಶ್ವರ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಲಸಿಕೆ ಪಡೆಯದಂತೆ ಕ್ರೈಸ್ತ ಸಮುದಾಯಕ್ಕೆ ಚರ್ಚ್ ಕಡೆಯಿಂದ ಸೂಚನೆ ನೀಡಲಾಗಿದೆ ಎಂದು ಸಂಸದೆ ಶೋಭಾ ಹೇಳಿಕೆ ನೀಡಿದ್ದಾಗಿ ಸುದ್ದಿಯಾಗಿತ್ತು. ಈ ಬಗ್ಗೆ ಕ್ರೈಸ್ತ ಸಮುದಾಯದ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದರು. ಇದೀಗ ಮಾಜಿ ಎಂಎಲ್ಸಿ ಐವಾನ್ ಡಿಸೋಜ ನೇತೃತ್ವದಲ್ಲಿ ಕಾಂಗ್ರೆಸ್ ನಾಯಕರ ನಿಯೋಗ ಕಮಿಷನರನ್ನು ಭೇಟಿಯಾಗಿ ದೂರು ನೀಡಿದ್ದಾರೆ.
ಇದೇ ವೇಳೆ, ಮಾತನಾಡಿರುವ ಐವಾನ್ ಡಿಸೋಜ, ಲಸಿಕೆ ಕೊಡುವ ಯೋಗ್ಯತೆ ಇವರಿಗೆ ಇಲ್ಲ. ಆದರೂ ಕ್ರೈಸ್ತ ಸಮುದಾಯದ ಅತಿ ಹೆಚ್ಚು ಮಂದಿ ಲಸಿಕೆ ಪಡೆದಿದ್ದಾರೆ. ಸಮುದಾಯಕ್ಕೆ ಸೇರಿದ ಆಸ್ಪತ್ರೆಗಳಲ್ಲಿ ಲಸಿಕೆ ನೀಡುವ ವ್ಯವಸ್ಥೆಯನ್ನೂ ಮಾಡಲಾಗಿದೆ. ಕೋವಿಡ್ ಕೇರ್ ಸೆಂಟರ್ ಗಳನ್ನೂ ಮಾಡಲಾಗಿದೆ. ಶೋಭಾ ಕರಂದ್ಲಾಜೆ ಒಂದು ಸಮುದಾಯವನ್ನು ಕೀಳಾಗಿ ಬಿಂಬಿಸಿ ಹೇಳಿಕೆ ನೀಡಿದ್ದಾರೆ. ಇವರ ಕಚೇರಿಯ ಮುಂದೆ ಹತ್ತು ಸಾವಿರ ಮಂದಿಯನ್ನು ಸೇರಿಸಿ ಲಸಿಕೆ ಕೊಡಿ ಎಂದು ಪ್ರತಿಭಟನೆ ಮಾಡುತ್ತೇವೆ. ಇವರಿಗೆ ಲಸಿಕೆ ಕೊಡಿಸುವ ತಾಕತ್ತು ಇದೆಯಾ, ನೋಡೋಣ ಎಂದು ಸವಾಲು ಹಾಕಿದ್ದಾರೆ.
ಈ ಬಗ್ಗೆ ಐವನ್ ಡಿಸೋಜ ಅವರನ್ನು ಕೇಳಿದಾಗ, ಪಾಂಡೇಶ್ವರ ಠಾಣೆಯಲ್ಲಿ ದೂರು ನೀಡಿದ್ದು ಎಫ್ಐಆರ್ ಆಗಿದೆ. ಈಗಾಗಲೇ ಮಂಗಳೂರು ಡಯಾಸಿಸ್ ಅಡಿ ದ.ಕ. ಜಿಲ್ಲೆಯಾದ್ಯಂತ 40 ಕ್ಕೂ ಹೆಚ್ಚು ವಿವಿಧ ಠಾಣೆಯಲ್ಲಿ ದೂರು ದಾಖಲು ಮಾಡಿದ್ದೇವೆ. ಗುಲ್ಬರ್ಗ, ಬೆಂಗಳೂರು, ಯಾದಗಿರಿ ಹೀಗೆ ಹಲವು ಕಡೆ ದೂರು ದಾಖಲಾಗಿದೆ. ಒಂದು ಸಮುದಾಯವನ್ನು ಅವಹೇಳನ ಮಾಡಿದ ಶೋಭಾರನ್ನು ಹಾಗೇ ಬಿಡುವುದಿಲ್ಲ ಎಂದು ಹೆಡ್ ಲೈನ್ ಕರ್ನಾಟಕಕ್ಕೆ ತಿಳಿಸಿದ್ದಾರೆ.
Congress Senior leader Ivan Dsouza files complaint against Udupi MP Shobha Karandlaje for her controversial statement against Churches over vaccine. A FIR has been registered against her at Pandeshwar Police Station. Speaking to Headline Karnataka Ivan said more then 40 cases has been registered against her in Dakshina Kannada by Catholic Diocese.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm