ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.
ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
05-10-25 03:22 pm
Mangalore Correspondent
Shivamogga Murder, Mother: ಶಿವಮೊಗ್ಗ ; ಮಗಳನ್ನು...
04-10-25 02:57 pm
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm