ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.
ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
15-05-25 10:16 pm
HK News Desk
Yatnal FIR, Mahatma Gandhi; ಮಹಾತ್ಮ ಗಾಂಧಿ ಪಾಕಿ...
15-05-25 11:59 am
Pro Pakistan slogan, Arrest, Bangalore: ಬೆಂಗಳ...
14-05-25 05:16 pm
Hassan Kidnap: ಅಪ್ಪನ ಎದುರೇ ಮಗಳ ಅಪಹರಣ ; ಬೇಲೂರಿ...
13-05-25 09:50 pm
Davangere Accident, police constable death: ಲ...
13-05-25 09:37 pm
15-05-25 09:09 pm
HK News Desk
Donald Trump: ನಾನೇನೂ ಮಧ್ಯಸ್ಥಿಕೆ ವಹಿಸಿರಲಿಲ್ಲ,...
15-05-25 08:38 pm
Sofia Qureshi, BJP leader, FIR: ಸೋಫಿಯಾ ಭಯೋತ್ಪ...
14-05-25 11:08 pm
Masood Azhar; ಐಎಂಎಫ್ ಸಾಲದ ಹಣವನ್ನೂ ಉಗ್ರರಿಗೆ ಹಂ...
14-05-25 11:08 pm
ಪಾಕ್ ವಶದಲ್ಲಿದ್ದ ಬಿಎಸ್ಎಫ್ ಯೋಧ ಕೊನೆಗೂ ಬಿಡುಗಡೆ ;...
14-05-25 07:33 pm
15-05-25 08:04 pm
Mangalore Correspondent
Lashkar Terror HQ, Pakistan: ಧ್ವಂಸಗೊಂಡ ಲಷ್ಕರ್...
15-05-25 06:36 pm
Lokayukta raid, Mangalore: ಸರ್ವೆ ಇಲಾಖೆ ಮೇಲ್ವಿ...
15-05-25 03:33 pm
Kundapur Suicide: ಸಾಲಬಾಧೆ, ತಂದೆ- ಮಗ ಬಾವಿಗೆ ಹಾ...
15-05-25 01:34 pm
Manjunath Bhandary, Kukke Temple, Mangalore:...
14-05-25 08:05 pm
15-05-25 11:06 pm
HK News Desk
Bangalore Crime, Mobile showroom: ಮೊಬೈಲ್ ಅಂಗಡ...
15-05-25 06:02 pm
Bangalore Job Fraud, Crime; ಮೆಕ್ರೋಸಾಪ್ಟ್ , ಬ...
15-05-25 12:14 pm
ಕೊಲ್ಕತ್ತಾದಲ್ಲಿ ಕಾರು ಅಡ್ಡಗಟ್ಟಿ 2.66 ಕೋಟಿ ದರೋಡೆ...
14-05-25 10:22 pm
Suhas Shetty Murder, Arrest, CCB Police: ಸುಹಾ...
14-05-25 09:23 pm