ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.
ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm