ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
07-03-26 08:05 pm
HK News Staffer
ಗ್ಯಾರಂಟಿ ಯೋಜನೆ ಸರಿದೂಗಿಸಲು ಸಿದ್ದರಾಮಯ್ಯ ಎಂಟು ಲಕ...
07-03-26 07:17 pm
ಜನಸಂಖ್ಯೆ ಕುಸಿತ ತಡೆಯಲು ಆಂಧ್ರ ಸರ್ಕಾರ ಹೊಸ ಯೋಜನೆ...
07-03-26 12:01 pm
ಕಾರವಾರ, ಯಾದಗಿರಿಗೆ 100 ಕೋಟಿ ರೂ. ವೆಚ್ಚದಲ್ಲಿ ಸೂಪ...
06-03-26 07:03 pm
ಅನ್ನಭಾಗ್ಯದಲ್ಲಿ ದೊಡ್ಡ ಬದಲಾವಣೆ ; ಹೆಚ್ಚುವರಿ ಅಕ್...
06-03-26 03:50 pm
07-03-26 11:58 am
HK News Staffer
ರಾಜಧಾನಿ ಟೆಹ್ರಾನಲ್ಲಿದ್ದ ಅಯತೊಲ್ಲಾ ಖಮೇನಿಗೆ ಸೇರಿದ...
06-03-26 11:04 pm
ಲವ್ ಜಿಹಾದ್ ಕಡಿವಾಣಕ್ಕೆ ಮಹಾರಾಷ್ಟ್ರದಲ್ಲಿ ಹೊಸ ಮಸೂ...
06-03-26 10:58 pm
ಹರ್ಮುಜ್ ಜಲಸಂಧಿ ಅಮೆರಿಕ ಮಿತ್ರ ರಾಷ್ಟ್ರಗಳಿಗೆ ಮಾತ್...
06-03-26 11:40 am
ಮಾರ್ಕ್-48 ಜಗತ್ತಿನ ಅತಿ ಶಕ್ತಿಶಾಲಿ ಜಲಾಂತರ್ಗಾಮಿ ಸ...
06-03-26 09:50 am
07-03-26 11:31 pm
HK News Desk
ಮಂಗಳೂರು ರಿಫೈನರಿ ಸ್ಥಗಿತ ವದಂತಿ ತಳ್ಳಿಹಾಕಿದ ಎಂಆರ್...
07-03-26 10:17 pm
ತಾಲೂಕು ಆಸ್ಪತ್ರೆಗಳಲ್ಲಿ ವೈದ್ಯರ ಕೊರತೆ ; ಹೆರಿಗೆ ಸ...
07-03-26 09:45 pm
ನೇತ್ರಾವತಿ ತೀರದಲ್ಲಿ ರಾಶಿ ರಾಶಿ ಆಧಾರ್ ಕಾರ್ಡ್ ಪತ್...
07-03-26 07:20 pm
ಬಜೆಟ್ ನಲ್ಲಿ ಮೀನುಗಾರಿಕೆ ಕ್ಷೇತ್ರಕ್ಕೆ ಬಂಪರ್; ಉಚಿ...
06-03-26 07:01 pm
28-02-26 11:12 am
Mangalore Staffer
Mangalore Cybercrime,Fraud, Arrest: ಸ್ನೇಹಿತನಿ...
27-02-26 09:23 pm
Mangalore, Car Street, Fight: ನಡು ರಸ್ತೆಯಲ್ಲಿ...
27-02-26 01:32 pm
Shivamogga Fraud, Police: ಸೈಬರ್ ಅಪರಾಧಕ್ಕೆ ಬಳಸ...
27-02-26 12:34 pm
ಅಮೆರಿಕದ ಷೇರು ಹೆಸರಿನಲ್ಲಿ 1.77 ಕೋಟಿ ರೂ. ಹೂಡಿಕೆ...
26-02-26 11:04 pm