ಬ್ರೇಕಿಂಗ್ ನ್ಯೂಸ್
21-05-21 03:06 pm Udupi Correspondent ಕರಾವಳಿ
ಉಡುಪಿ, ಮೇ 21: ಕೋವಿಡ್ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾಡಳಿತ ಕೊರೊನಾ ಪಾಸಿಟಿವ್ ಕಂಡುಬರುವ ಮನೆಗಳನ್ನು ಪೂರ್ತಿಯಾಗಿ ಸೀಲ್ ಡೌನ್ ಮಾಡಲು ಮುಂದಾಗಿದೆ.
ಪಾಸಿಟಿವ್ ಬಂದು ಸೋಂಕಿತರು ಹೋಂ ಐಸೋಲೇಷನ್ ಆಗುವ ಮನೆಗಳನ್ನು ಗುರುತಿಸಿ ಪಟ್ಟಿ ಅಳವಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ. ಇದರಿಂದ ಯಾವುದೇ ಗ್ರಾಮದಲ್ಲಿ ಪಾಸಿಟಿವ್ ಬಂದವರನ್ನು ಸುಲಭವಾಗಿ ಗುರುತಿಸಲು ಸಾಧ್ಯವಾಗುತ್ತದೆ ಎನ್ನುವ ನಂಬಿಕೆ ಜಿಲ್ಲಾಡಳಿತದ್ದು.
ಅಲ್ಲದೆ ಸೋಂಕಿತರ ಚಲನವನಗಳ ಮೇಲೆ ನಿಗಾ ಇರಿಸುವ ಉದ್ದೇಶವೂ ಇದರ ಹಿಂದಿದೆ. ಈ ರೀತಿಯ ಸೀಲ್ ಡೌನ್ ಮಾಡಲು ಉಡುಪಿ ಜಿಲ್ಲಾಧಿಕಾರಿ ಜಿ. ಜಗದೀಶ ಅವರೇ ಸ್ವತಃ ಮುಂದಾಗಿದ್ದಾರೆ.

ಬ್ರಹ್ಮಾವರ ತಾಲೂಕಿನ ಚಾಂತಾರು ಗ್ರಾಮ ವ್ಯಾಪ್ತಿಯಲ್ಲಿ ಸ್ವತಃ ಜಿಲ್ಲಾಧಿಕಾರಿಗಳೇ ತೆರಳಿ, ಸೀಲ್ ಡೌನ್ ಮಾಡುವುದಕ್ಕಾಗಿ ಮನೆಯ ಸುತ್ತ ಎಚ್ಚರಿಕೆ ಸೂಚಿಸುವ ಟೇಪ್ ಕಟ್ಟಿ ಜಾಗೃತಿ ಮೂಡಿಸಿದ್ದಾರೆ.
ಅಲ್ಲದೆ, ಸೋಂಕಿತರನ್ನು ಮಾತನಾಡಿಸಿದ ಜಿಲ್ಲಾಧಿಕಾರಿ ಆರೋಗ್ಯ ವಿಚಾರಿಸಿ, ಧೈರ್ಯ ತುಂಬಿದ್ದಾರೆ. ಮನೆಯಲ್ಲಿಯೇ ಇದ್ದು, ಆರೋಗ್ಯದ ಬಗ್ಗೆ ನಿಗಾ ಇಡುವಂತೆ ಸೂಚಿಸಿದ್ದಾರೆ.
ಇದೇ ವೇಳೆ, ಇಡೀ ಜಿಲ್ಲೆಯಾದ್ಯಂತ ಕೋವಿಡ್ ಪಾಸಿಟಿವ್ ಬಂದವರ ಮನೆಗಳನ್ನು ಸೀಲ್ ಡೌನ್ ಮಾಡಲು ಕ್ರಮ ಕೈಗೊಂಡಿದ್ದಾರೆ. ಈ ರೀತಿಯ ಕ್ರಮಗಳು ಕಳೆದ ವರ್ಷ ಕೋವಿಡ್ ಮೊದಲ ಅಲೆಯ ವೇಳೆ ಚಾಲ್ತಿಯಲ್ಲಿದ್ದು ಆನಂತರ ಹೆಚ್ಚು ಮುತುವರ್ಜಿ ವಹಿಸಿರಲಿಲ್ಲ. ಇದೀಗ ಹೋಮ್ ಐಸೋಲೇಶನಲ್ಲಿರುವ ಮಂದಿ ಹೊರಗಡೆ ಸುತ್ತಾಡುತ್ತಿದ್ದಾರೆಂದು ಸೋಂಕಿತರ ಓಡಾಟಕ್ಕೆ ಕಡಿವಾಣ ಹಾಕಲು ಈ ರೀತಿಯ ಕ್ರಮ ತೆಗೆದುಕೊಂಡಿದ್ದಾರೆ.
Those tested positive for Covid-19 their homes will be entirely sealed down in order to control the spread of Virus says Udupi Dc Jagadish.
08-09-26 02:24 pm
HK News Staffer
ಐಪಿಎಸ್ ಅಧಿಕಾರಿಗಳ ಭರ್ಜರಿ ವರ್ಗಾವಣೆ: ಮಂಗಳೂರು ಡಿಸ...
07-09-26 01:33 pm
ಜೆನ್ ಜೀಗಳಿಗೆ ಕಾಂಗ್ರೆಸ್ ಸಿದ್ಧಾಂತ, ಜಾತ್ಯತೀತ ಭಾವ...
05-09-26 04:53 pm
400 ಪಶು ವೈದ್ಯಾಧಿಕಾರಿಗಳ ನೇಮಕಾತಿ ಹಗರಣ ; ಪ್ರತಿ ಹ...
02-09-26 05:06 pm
ಬಿಗ್ ಬಾಸ್ ಸೀಸನ್ 13 ಆರಂಭಕ್ಕೂ ಮುನ್ನ ಸಂಕಷ್ಟ ; ಪ...
31-08-26 08:29 pm
05-09-26 11:55 am
HK News Staffer
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
ಹಾರಾಟದ ವೇಳೆ ಪೈಲೆಟ್ ಅಸ್ವಸ್ಥ ; ದೋಹಾ - ಬೆಂಗಳೂರು...
03-09-26 07:27 pm
ಅಯೋಧ್ಯೆ ರಾಮ ಮಂದಿರಕ್ಕೆ ನೂತನ ಸಿಇಓ ಆಗಿ ನಿವೃತ್ತ ಏ...
02-09-26 08:31 pm
ಸ್ಲೀಪರ್ ಬಸ್ನಲ್ಲಿ ಬಾಲಕಿ ಮೇಲೆ ಅತ್ಯಾಚಾರ ; ಎಚ್ಚೆ...
02-09-26 07:16 pm
08-09-26 05:20 pm
HK News Staffer
ದಕ್ಷಿಣ ಕನ್ನಡದಲ್ಲಿ ದಿಢೀರ್ ಲೋಕಾಯುಕ್ತ ದಾಳಿ: ಬಂಟ್...
08-09-26 03:50 pm
Mangalore Jail Raid: ಮಂಗಳೂರು ಜೈಲಿಗೆ ತಡರಾತ್ರಿ...
08-09-26 09:50 am
ಪುತ್ತೂರು ಮಹಾಲಿಂಗೇಶ್ವರನ ಹೆಸರಲ್ಲಿ ಅವ್ಯವಹಾರ ; ಸಣ...
08-09-26 08:27 am
ಪದ್ಮಶ್ರೀ ಹರೇಕಳ ಹಾಜಬ್ಬರಿಗೆ ಎಸ್ಐ ಆರ್ ನೋಟಿಸ್ ! ಬ...
07-09-26 09:57 pm
08-09-26 02:26 pm
HK News Staffer
ಅಪಘಾತದಲ್ಲಿ ಗಾಯಗೊಂಡ ಚಿರತೆಯನ್ನು ರಕ್ಷಣೆ ಮಾಡಲು ಹೋ...
08-09-26 01:11 pm
ಅಪ್ರಾಪ್ತ ಬಾಲಕನ ಮೇಲೆ ಸರಣಿ ಲೈಂಗಿಕ ದೌರ್ಜನ್ಯ ; ವಿ...
08-09-26 11:17 am
ಆಸ್ಪತ್ರೆ ಸಿಬ್ಬಂದಿಗೆ ಪ್ರಜ್ಞೆ ತಪ್ಪಿಸಿ ಲೈಂಗಿಕ ದೌ...
07-09-26 08:56 pm
ದೆಹಲಿಯಲ್ಲಿ ಕಟ್ಟಡ ಕುಸಿತಕ್ಕೆ ಏಳು ಬಲಿ ; ನೆಲಮಹಡಿಯ...
07-09-26 07:44 pm