ಬ್ರೇಕಿಂಗ್ ನ್ಯೂಸ್
21-05-21 11:03 pm Mangaluru Correspondent ಕರಾವಳಿ
ಮಂಗಳೂರು, ಮೇ 21: ಲಾಕ್ಡೌನ್ ಸಂದರ್ಭದಲ್ಲಿ ಉದ್ಯೋಗದ ಕಾರಣದಿಂದ ವಿದೇಶಗಳಲ್ಲಿ ನೆಲೆಸಿರುವ ಮಂಗಳೂರು ಮೂಲದ ಕುಟುಂಬಗಳ ತುರ್ತು ಸಂಕಷ್ಟಗಳಿಗೆ ಸ್ಪಂದಿಸಲು ಮಂಗಳೂರು ಪೊಲೀಸ್ ಕಮಿಷನರೇಟ್ ಮುಂದಾಗಿದ್ದು ಕೋವಿಡ್ ‘ಸಮನ್ವಯ’ ಹೆಲ್ಪ್ಲೈನ್ಗೆ ಆರಂಭಿಸಲಾಗಿದೆ.
ವಿದೇಶದಲ್ಲಿರುವ ಎನ್ಆರ್ಐಗಳ (ಅನಿವಾಸಿ ಭಾರತೀಯರು) ಜೊತೆ ‘ಸಮನ್ವಯ’ ಎಂಬ ವೆಬಿನಾರ್ ಮೂಲಕ ಸಂವಾದ ನಡೆಸಿದ ಮಂಗಳೂರು ಪೊಲೀಸ್ ಆಯುಕ್ತ ಎನ್.ಶಶಿಕುಮಾರ್, ಇದಕ್ಕಾಗಿ ಸಹಾಯವಾಣಿ ಸಂಖ್ಯೆ (9480802300) ಚಾಲನೆ ನೀಡಿದರು.
ಕುವೈತ್, ಕೆನಡಾ, ಯುಎಸ್ಎ, ಯುಎಇ, ಕತಾರ್, ಒಮಾನ್, ಸೌದಿ ಅರೇಬಿಯಾ, ನ್ಯೂಝಿಲೆಂಡ್, ಆಸ್ಟ್ರೇಲಿಯಾ, ಲಂಡನ್, ಇಸ್ರೇಲ್, ಬಹರೈನ್, ಹಾಂಕಾಂಗ್, ಜರ್ಮನಿ ಸೇರಿದಂತೆ 20 ರಾಷ್ಟ್ರಗಳಿಂದ 100ಕ್ಕೂ ಅಧಿಕ ಮಂದಿ ವೆಬಿನಾರ್ನಲ್ಲಿ ಪಾಲ್ಗೊಂಡಿದ್ದು ಸಮಸ್ಯೆ ಇನ್ನಿತರ ವಿಚಾರಗಳ ಬಗ್ಗೆ ಹಂಚಿಕೊಂಡಿದ್ದಾರೆ. ಈಗಾಗ್ಲೇ ಮಂಗಳೂರಿನ ಸಂಘ ಸಂಸ್ಥೆಗಳು ಸ್ವಯಂಪ್ರೇರಿತರಾಗಿ ಕೋವಿಡ್ ಸಂಕಷ್ಟದ ಸಮಯದಲ್ಲಿ ನೆರವು ನೀಡುವ ಕಾರ್ಯ ಮಾಡುತ್ತಿದ್ದಾರೆ. ಆಹಾರ ವಿತರಣೆ, ರಕ್ತ ಮತ್ತು ಪ್ಲಾಸ್ಮಾ ಸಂಬಂಧಿಸಿದ ವ್ಯವಸ್ಥೆ, ಉಚಿತ ಆ್ಯಂಬುಲೆನ್ಸ್, ಆಸ್ಪತ್ರೆಗಳಲ್ಲಿ ಟೆಲಿ ಮೆಡಿಸಿನ್, ತುರ್ತು ಸಂದರ್ಭದಲ್ಲಿ ಖಾಸಗಿ ವಾಹನಗಳನ್ನು ಒದಗಿಸುವುದು, ಅಂತ್ಯಸಂಸ್ಕಾರ ಹೀಗೆ ಹಲವು ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು ಇವನ್ನು ಸಮನ್ವಯ ಎಂಬ ಒಂದೇ ವೇದಿಕೆಯಡಿ ತರಲಾಗಿದೆ. ಇವುಗಳ ಮೂಲಕ ಎನ್ಆರ್ಐಗಳ ಕುಟುಂಬಸ್ಥರಿಗೂ ತುರ್ತು ಸೇವೆಗಳನ್ನು ಒದಗಿಸಲಾಗುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ತಿಳಿಸಿದ್ದಾರೆ.
ಸಾರ್ವಜನಿಕು ಸ್ಥಳೀಯವಾಗಿ ಕೊರೊನಾಗೆ ಸಂಬಂಧಿಸಿ ಸಮಸ್ಯೆಗಳಿದ್ದರೆ ಪೊಲೀಸ್ ಕಂಟ್ರೋಲ್ ರೂಮ್ (9480802321)ಗೆ ಕರೆ ಮಾಡಬಹುದು. ಲಾಕ್ಡೌನ್ ನಿಯಮ ಉಲ್ಲಂಘನೆ, ಔಷಧ ಮತ್ತು ಮೂಲಸೌಕರ್ಯಗಳಿಗೆ ಸಂಬಂಧಿಸಿದ ವಂಚನೆ, ಬ್ಲಾಕ್ಮೇಲ್ ಮೊದಲಾದ ಘಟನೆಗಳ ಬಗ್ಗೆ 112 ಸಹಾಯವಾಣಿಗೂ ಕರೆ ಮಾಡಬಹುದು ಎಂದು ಆಯುಕ್ತರು ತಿಳಿಸಿದ್ದಾರೆ.
ಅನಿವಾಸಿ ಭಾರತೀಯರು ಯಾವುದೇ ನೆರವಿಗಾಗಿ, ಸಹಾಯವಾಣಿ ಸಂಖ್ಯೆಗೆ ಸಂದೇಶ ಅಥವಾ ವಾಯ್ಸ್ ರೆಕಾರ್ಡ್, ವೀಡಿಯೋ ಸಂದೇಶ ಕಳುಹಿಸಿದಾಗ, ಸಂಬಂಧ ಪಟ್ಟವರಿಂದ ಪರಿಹಾರ ಒದಗಿಸಲು ಪ್ರಯತ್ನಿಸಲಾಗುವುದು ಎಂದು ಕಮಿಷನರ್ ಶಶಿಕುಮಾರ್ ಹೇಳಿದ್ದಾರೆ.
ಪೊಲೀಸರ ಕಾರ್ಯಕ್ಕೆ ಮೆಚ್ಚುಗೆ
ಮಂಗಳೂರು ಪೊಲೀಸರು ಸಲಹೆ ಕೇಳಿ ಸಹಾಯಕ್ಕೆ ಮುಂದಾಗಿರುವುದಕ್ಕೆ ಎನ್ಆರ್ಐಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ. ವಿದೇಶದಲ್ಲಿ ಸಿಲುಕಿರುವ ನಮ್ಮಂತಹ ಅನೇಕ ಮಂದಿಯ ಕುಟುಂಬಸ್ಥರು ಊರಿನಲ್ಲಿ ಗೊಂದಲದಲ್ಲಿದ್ದಾರೆ. ಅವರಿಗೆ ನೆರವಾಗುವ ಉದ್ದೇಶದಿಂದ ಪೊಲೀಸ್ ಆಯುಕ್ತರು ನೆರವಿಗೆ ಮುಂದಾಗಿರುವುದು ಶ್ಲಾಘನೀಯ ಎಂದು ಸಂವಾದದಲ್ಲಿ ಎನ್ಆರ್ ಐಗಳು ಪಾಲ್ಗೊಂಡವರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
Mangaluru city police on Friday, May 21 launched a helpline number 9480802300 for NRIs (Non-Resident Indian) and Indian diaspora of Mangaluru origin regarding the problem of their relatives and friends staying in Dakshina Kannada with regard to challenges posed by the Covid-19 pandemic. This helpline number will provide 24/7 service, stated a press release issued by the commissioner's office.
21-07-25 01:31 pm
Bangalore Correspondent
Tulu Nadu High Court Advocates, Bangalore; ಯೇ...
21-07-25 04:16 am
ಅಣ್ಣಾಮಲೈಗೆ ಬಿಜೆಪಿ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಕ...
20-07-25 08:35 pm
ವಾಲ್ಮೀಕಿ ನಿಗಮ ಹಗರಣ ರೀತಿಯಲ್ಲೇ ಮತ್ತೊಂದು ಹಗರಣ ;...
20-07-25 07:55 pm
Dharmasthala SIT Case, Parameshwar: ಎಸ್ಐಟಿ ರ...
20-07-25 04:24 pm
20-07-25 04:47 pm
HK News Desk
Kerala Nurse Yemen; ನರ್ಸ್ ನಿಮಿಷಾ ಉಳಿವಿಗೆ ಗಲ್ಫ...
16-07-25 09:58 pm
Changur Baba: ಲವ್ ಜಿಹಾದ್, ಹಿಂದು ಯುವತಿಯರ ಮತಾಂತ...
14-07-25 03:24 pm
ಅಹ್ಮದಾಬಾದ್ ವಿಮಾನ ದುರಂತ ; ಭಾರೀ ಅನುಮಾನ ಹುಟ್ಟಿಸಿ...
12-07-25 09:25 pm
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
21-07-25 03:11 pm
Mangalore Correspondent
ತನಿಖೆ ಆಗೋ ಸಂದರ್ಭದಲ್ಲಿ ನಿರ್ಣಯಕ್ಕೆ ಬರೋದಲ್ಲ, ಪವಿ...
21-07-25 02:11 pm
Dharmasthala SIT, Parshwanath Jain; ಸರ್ಕಾರದ ಎ...
21-07-25 04:03 am
Mangalore Bantwal Rural PSI, Suicide: ಬಂಟ್ವಾಳ...
20-07-25 10:35 pm
Dharmasthala Case, SIT, Pronab Mohanty: ಧರ್ಮಸ...
20-07-25 03:06 pm
20-07-25 08:52 pm
HK News Desk
ಅಮೆರಿಕ, ಕೆನಡಾದಿಂದಲೂ ವಿದೇಶಿ ಫಂಡ್, ಯುವತಿಯರೇ ಟಾರ...
20-07-25 12:16 pm
Fraudster Roshan Saldanha, Fraud: ಬಹುಕೋಟಿ ವಂಚ...
19-07-25 09:25 pm
Mangalore Conman Roshan Saldanha Arrest: ಚಾಲಾ...
19-07-25 12:26 pm
Mangalore crime, cyber crime: ಮುಂಬೈ ಪೊಲೀಸ್ ಅಧ...
18-07-25 12:40 pm