ಬ್ರೇಕಿಂಗ್ ನ್ಯೂಸ್
22-05-21 09:40 pm Mangaluru Correspondent ಕರಾವಳಿ
ಮಂಗಳೂರು, ಮೇ 22: ಕೊರೊನಾ ಸೋಂಕಿತರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಖಾಸಗಿ ಆಸ್ಪತ್ರೆಗಳಲ್ಲಿ ಶೇಕಡಾ ಐವತ್ತು ಬೆಡ್ ಗಳ ಉಚಿತ ಚಿಕಿತ್ಸೆ ಆದೇಶವನ್ನು ತಕ್ಷಣ ಜಾರಿಗೆ ತರಬೇಕು. ಆಯುಷ್ಮಾನ್ ಯೋಜನೆಯಡಿ ಐಸಿಯು, ವೆಂಟಿಲೇಟರ್ ಬೆಡ್ ಗಳಲ್ಲಿ ಉಚಿತ ಚಿಕಿತ್ಸೆ ನೀಡಲು ನಿರಾಕರಿಸುವ ಮತ್ತು ಸರಕಾರ ನಿಗದಿಪಡಿಸಿದ ದರವನ್ನು ಮೀರಿ ಕೊರೊನಾ ರೋಗಿಗಳಿಗೆ ದುಬಾರಿ ಬಿಲ್ ವಿಧಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆಪಿಎಮ್ಇ ಕಾಯ್ದೆಯಡಿ ಕ್ರಿಮಿನಲ್ ಮೊಕದ್ದಮೆ ಹೂಡುವಂತೆ ಆಗ್ರಹಿಸಿ ಡಿವೈಎಫ್ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿಯ ವತಿಯಿಂದ ಮನೆ ಮನೆ ಪ್ರತಿಭಟನೆ ನಡೆಯಿತು.

ಕೊರೊನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಐವತ್ತು ಶೇಕಡಾ ಬೆಡ್ ಗಳನ್ನು ಸರಕಾರಿ ಕೋಟಾದಡಿ ಮೀಸಲಿಟ್ಟು ಉಚಿತ ಚಿಕಿತ್ಸೆ ನೀಡುವುದಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಆದೇಶ ಹೊರಡಿಸಿತ್ತು. ಆದರೆ ಆದೇಶ ಇಷ್ಟರ ವರೆಗೆ ಜಾರಿಗೆ ಬಂದಿಲ್ಲ. ಕೇವಲ ವೆನ್ ಲಾಕ್ ಸರಕಾರಿ ಆಸ್ಪತ್ರೆಯಲ್ಲಿ ಮಾತ್ರ ಉಚಿತ ಚಿಕಿತ್ಸೆ ನೀಡಲಾಗುತ್ತಿದೆ. ಇದರಿಂದ ಖಾಸಗಿ ಆಸ್ಪತ್ರೆಗಳಲ್ಲಿ ದುಬಾರಿ ದರ ತೆತ್ತು ಚಿಕಿತ್ಸೆ ಪಡೆಯುವ ಅನಿವಾರ್ಯ ಸ್ಥಿತಿಗೆ ಜನಸಾಮಾನ್ಯರನ್ನು ದೂಡಿದೆ. ಖಾಸಗಿ ಆಸ್ಪತ್ರೆಗಳ ಐಸಿಯು, ವೆಂಟಿಲೇಟರ್ ಬೆಡ್ ಗಳಲ್ಲಿ ಎಪಿಎಲ್, ಬಿಪಿಎಲ್ ತಾರತಮ್ಯವಿಲ್ಲದೆ ಆಯುಷ್ಮಾನ್ ಅಡಿ ಉಚಿತ ಚಿಕಿತ್ಸೆಯ ಆದೇಶ ಜಾರಿಯಾಗಿದ್ದರೂ ಕೆಲವು ಖಾಸಗಿ ಆಸ್ಪತ್ರೆಗಳು ಸುಳ್ಳು ಆಂಕಿ ಅಂಶಗಳನ್ನು ಬಳಸಿಕೊಂಡು ಆಯುಷ್ಮಾನ್ ಅಡಿ ಚಿಕಿತ್ಸೆ ನಿರಾಕರಿಸುತ್ತಿವೆ. ಇದಲ್ಲದೆ ಖಾಸಗಿ ಕೋಟಾದ ರೋಗಿಗಳಿಗೆ, ಆಯುಷ್ಮಾನ್ ಯೋಜನೆಯ ರೋಗಿಗಳಿಗೆ ಸರಕಾರ ನಿಗದಿಪಡಿಸಿದ ದರ ಮಾತ್ರವಲ್ಲದೆ ನಿಯಮ ಬಾಹಿರವಾಗಿ ಲಕ್ಷಾಂತರ ರೂಪಾಯಿ ಅಕ್ರಮ ಬಿಲ್ ವಿಧಿಸುವ, ದುಬಾರಿ ಔಷಧಿಗಳನ್ನು ಖರೀದಿಸುವಂತೆ ಬಲವಂತ ಮಾಡುವ ಘಟನೆಗಳು ದೊಡ್ಡ ಪ್ರಮಾಣದಲ್ಲಿ ನಡೆಯುತ್ತಿವೆ. ಇದರಿಂದ ಕೊರೊನಾ ಸೋಂಕಿತ ರೋಗಿಗಳು ಸಂಕಷ್ಟದ ಸ್ಥಿತಿಗೆ ತಲುಪಿದ್ದಾರೆ. ಈ ಕುರಿತು ಜಿಲ್ಲಾಡಳಿತಕ್ಕೆ ದೂರು ನೀಡಿದ್ದರೂ ಖಾಸಗಿ ಆಸ್ಪತ್ರೆಗಳ ಪ್ರಬಲ ಲಾಬಿ ಯಾವುದೇ ಹಿಂಜರಿಕೆ ಇಲ್ಲದೆ ಮುಂದುವರಿದಿದೆ.

ಈ ಹಿನ್ನಲೆಯಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಐವತ್ತು ಶೇಕಡಾ ಬೆಡ್ ಗಳನ್ನು ಸರಕಾರಿ ಕೋಟಾದಡಿ ಉಚಿತ ಚಿಕಿತ್ಸೆ ನೀಡುವ ಆದೇಶ ಜಾರಿಗೊಳಿಸುವುದು, ನಿಯಮ ಬಾಹಿರವಾಗಿ ದುಬಾರಿ ಬಿಲ್ ವಿಧಿಸುವ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಮೊಕದ್ದಮೆಗೆ ಒತ್ತಾಯಿಸಿ ಡಿವೈಎಫ್ಐ ವತಿಯಿಂದ ಮನೆ ಮನೆ ಪ್ರತಿಭಟನೆಗೆ ಕರೆ ನೀಡಲಾಗಿತ್ತು. ಡಿವೈಎಫ್ಐ ದ.ಕ. ಜಿಲ್ಲಾ ಸಮಿತಿ ನೀಡಿದ್ದ ಕರೆಗೆ ಉತ್ತಮ ಬೆಂಬಲ ವ್ಯಕ್ತವಾಗಿದ್ದು, ಹಲವಾರು ಕಡೆ ಜನ ಸ್ವಯಂಪ್ರೇರಿತವಾಗಿ ತಮ್ಮ ಮನೆಯ ಮುಂದೆ ಭಿತ್ತಿಪತ್ರ ಹಿಡಿದು ನಿಂತು ಪ್ರತಿಭಟನೆಯಲ್ಲಿ ಭಾಗವಹಿಸಿದ್ದಾರೆ ಎಂದು ಡಿವೈಎಫ್ಐ ಜಿಲ್ಲಾ ಕಾರ್ಯದರ್ಶಿ ಸಂತೋಷ್ ಬಜಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
There have been complaints from various parts of the state about private hospitals making out huge bills for treating coronavirus patients. Therefore DYFI held a unique protest at homes demanding govt to take action and save lives.
09-06-26 07:04 pm
HK News Staffer
ವಿಧಾನ ಪರಿಷತ್ ಚುನಾವಣೆ ; ಕಾಂಗ್ರೆಸ್ ಐದನೇ ಅಭ್ಯರ್ಥ...
09-06-26 01:27 pm
Krishna Byre Gowda: ಡಿಕೆಶಿ ಸಂಪುಟದಲ್ಲಿ ಮತ್ತೊಂದ...
08-06-26 12:37 pm
ರಾಮಲಿಂಗಾರೆಡ್ಡಿ ರಾಜೀನಾಮೆ ಡ್ರಾಮಾಗೆ ಟ್ವಿಸ್ಟ್ ; ಡ...
06-06-26 12:49 pm
ಎಂಬಿಬಿಎಸ್ ಪದವಿ ಮುಗಿಸಿದ ಬೆನ್ನಲ್ಲೇ ಸರ್ಕಾರಿ ಆಸ್ಪ...
05-06-26 07:14 pm
08-06-26 09:11 pm
HK News Staffer
ದೇಲಂಪಾಡಿ ; ಭಾರೀ ಮಳೆಗೆ ಕಲ್ಲಿನ ತಡೆಗೋಡೆ ಕುಸಿದು ಬ...
06-06-26 10:42 pm
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಜಿರಳೆಗಳ ಮುಖವಾಡ ಧ...
06-06-26 05:48 pm
ತಮಿಳುನಾಡಿನಲ್ಲಿ ಅಣ್ಣಾಮಲೈ ಸಂಚಲನ ; ಬಿಜೆಪಿಗೆ ಗುಡ್...
05-06-26 02:34 pm
ಯೋಗಿಜೀ ನಮ್ಮನ್ನು ಕ್ಷಮಿಸಿ..! ಇನ್ನೆಂದೂ ಅಪರಾಧ ಕೃತ...
04-06-26 04:19 pm
09-06-26 08:58 pm
ರಿಚರ್ಡ್ | Richard
Mangalore: ಡಿಗ್ರಿ, ಇಂಜಿನಿಯರಿಂಗ್ ವಿದ್ಯಾರ್ಥಿಗಳಿ...
09-06-26 06:15 pm
ಮಳೆಗಾಲ ಹಿನ್ನೆಲೆ ; ರಸ್ತೆ ಹೊಂಡಕ್ಕೆ ಬಿದ್ದು ಪ್ರಾಣ...
08-06-26 09:21 pm
ಮಂಗಳೂರಿನಲ್ಲಿ ಡಿಎಚ್ಓಗೆ ಸಚಿವ ಯು.ಟಿ ಖಾದರ್ ಕ್ಲಾಸ್...
08-06-26 04:55 pm
UT Khader, Mangalore: ಎಂಬಿಬಿಎಸ್ ಆದವರಿಗೆ ಕಲಿತ...
07-06-26 03:38 pm
10-06-26 01:48 pm
HK News Staffer
Udupi Fight, Temple Parking: ಗಾಡಿಗೆ ಸೈಡ್ ಕೊಡು...
10-06-26 12:09 pm
ಬೆಳ್ತಂಗಡಿ ಪೊಲೀಸರ ಭರ್ಜರಿ ಕಾರ್ಯಚರಣೆ ; ಮನೆಗಳಿಗೆ...
09-06-26 05:03 pm
Mangalore Blackmail, crime, Honeytrap: ಸಲಿಂಗಕ...
09-06-26 10:26 am
ಬಂಟ, ಬಿಲ್ಲವ ಜಾತಿಗಳ ಬಗ್ಗೆ ಅವಹೇಳನ ಹೇಳಿಕೆ ; ಸಾಮಾ...
08-06-26 11:10 pm