ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ; ಯುವಕ ಸ್ಥಳದಲ್ಲೇ ಮೃತ್ಯು

24-05-21 01:54 pm       Mangalore Correspondent   ಕರಾವಳಿ

ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಆಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕುಟ್ರಪ್ಪಾಡಿ ಗ್ರಾಮದಲ್ಲಿ ನಡೆದಿದೆ. 

Photo credits : Representative Image

ಕಡಬ, ಮೇ 24 : ತೆಂಗಿನಕಾಯಿ ತೆಗೆಯುತ್ತಿದ್ದಾಗ ವಿದ್ಯುತ್ ಶಾಕ್ ಆಗಿ ಯುವಕ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬ ತಾಲೂಕಿನ ಕುಟ್ರಪ್ಪಾಡಿ ಗ್ರಾಮದಲ್ಲಿ ನಡೆದಿದೆ. 

ಕುಟ್ರುಪ್ಪಾಡಿ ಗ್ರಾಮದ ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜು (35) ಮೃತ ಯುವಕ. 

ಲಿಜು ಇಂದು ಬೆಳಗ್ಗೆ ತನ್ನ ಮನೆಯ ಮುಂಭಾಗದಲ್ಲಿ ತೆಂಗಿನ ಮರದಿಂದ ಕಬ್ಬಿಣದ ಸಲಾಕೆಯಲ್ಲಿ ತೆಂಗಿನಕಾಯಿ ಕೀಳಲು ತೊಡಗಿದ್ದರು. ಈ ವೇಳೆ ಸಲಾಕೆ, ಸನಿಹದಲ್ಲಿದ್ದ ವಿದ್ಯುತ್ ತಂತಿಗೆ ಬಿದ್ದು ವಿದ್ಯುತ್ ಶಾಕ್ ಆಗಿದ್ದು ಲಿಜು ಸ್ಥಳದಲ್ಲೇ ಮೃತಪಟ್ಟಿದ್ದಾರೆ‌. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Man dies of Electrocution in Dakshina Kannadas Kadaba. The deceased has been identified as Liju (35).